ಜಕ್ಕೂರು ಏರೋಡ್ರಮ್ 
ರಾಜ್ಯ

ಜಕ್ಕೂರ್ ಏರೋಡ್ರಮ್ ವ್ಯಾಪ್ತಿಯಲ್ಲಿ ನಿಯಮ ಮೀರಿ ನಿರ್ಮಿಸಿರುವ ಕಟ್ಟಡಗಳ ತೆರವಿಗೆ ಸಚಿವ ನಾರಾಯಣ ಗೌಡ ಸೂಚನೆ

ಜಕ್ಕೂರು ಏರೋ ಡ್ರಮ್ ನ 5ಕಿಮೀ ವ್ಯಾಪ್ತಿಯಲ್ಲಿ ನಿಯಮ ಮೀರಿ 45 ಮೀಟರ್ ಗಿಂತಲೂ ಎತ್ತರ ಕಟ್ಟಿರುವ ಕಟ್ಟಡಗಳನ್ನು ತಕ್ಷಣವೆ ತೆರವುಗೊಳಿಸಲು ಬಿಬಿಎಂಪಿ ಅಧಿಕಾರಿಗಳಿಗೆ, ಯುವ ಸಬಲೀಕರಣ ಮತ್ತು ಕ್ರೀಡೆ, ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಾ‌. ನಾರಾಯಣಗೌಡ ಆದೇಶಿಸಿದರು.

ಬೆಂಗಳೂರು: ಜಕ್ಕೂರು ಏರೋ ಡ್ರಮ್ ನ 5ಕಿಮೀ ವ್ಯಾಪ್ತಿಯಲ್ಲಿ ನಿಯಮ ಮೀರಿ 45 ಮೀಟರ್ ಗಿಂತಲೂ ಎತ್ತರ ಕಟ್ಟಿರುವ ಕಟ್ಟಡಗಳನ್ನು ತಕ್ಷಣವೆ ತೆರವುಗೊಳಿಸಲು ಬಿಬಿಎಂಪಿ ಅಧಿಕಾರಿಗಳಿಗೆ, ಯುವ ಸಬಲೀಕರಣ ಮತ್ತು ಕ್ರೀಡೆ, ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಾ‌. ನಾರಾಯಣಗೌಡ ಆದೇಶಿಸಿದರು.

ವಿಕಾಸ ಸೌಧದಲ್ಲಿ ಗುರುವಾರ ನಡೆದ ಸಭೆಯಲ್ಲಿ, ಜಕ್ಕೂರು ಏರೋಡ್ರಮ್ ನ 5ಕಿ.ಮೀ.ವ್ಯಾಪ್ತಿಯಲ್ಲಿ, 45 ಮೀಟರ್ ಗಿಂತ ಎತ್ತರದ ಕಟ್ಟಡ ಕಟ್ಟುವಂತಿಲ್ಲ. ಆದಾಗ್ಯೂ ಡಿಜಿಸಿಎ ನಿಯಮ ಮೀರಿ, ಪರವಾನಿಗೆ ಇಲ್ಲದೆ ಕಟ್ಟಡಗಳನ್ನು ಕಟ್ಟಿದ್ದಾರೆ. ಸಚಿವರ ಸೂಚನೆ ಮೇರೆಗೆ ಸರ್ವೆ ನಡೆಸಿದಾಗ ಈ ವಿಚಾರ ಬೆಳಕಿಗೆ  ಬಂದಿದೆ. ಪ್ರಾಥಮಿಕ ಸಮೀಕ್ಷೆಯಲ್ಲಿ 15 ಕಟ್ಟಡಗಳು ನಿಯಮ ಉಲ್ಲಂಘಿಸಿ 45 ಮೀಟರ್ ಗಿಂತ ಹೆಚ್ಚು ಎತ್ತರದ ಕಟ್ಟಡಗಳನ್ನು ನಿರ್ಮಿಸಿರುವುದು ಪತ್ತೆ ಹಚ್ಚಲಾಗಿದೆ. ಆದ್ದರಿಂದ ಅಕ್ರಮ ಕಟ್ಟಡಗಳನ್ನು ತಕ್ಷಣವೆ ತೆರವು ಮಾಡಬೇಕು. ನಿಯಮ ಮೀರಿ 5 ಕಿ.ಮೀ ವ್ಯಾಪ್ತಿಯಲ್ಲಿ ಕಟ್ಟಡ ನಿರ್ಮಿಸಿರುವ ಪತ್ತೆ ಹಚ್ಚಲು ಡ್ರೋಣ್  ಸರ್ವೆ ನಡೆಸಿ 15 ದಿನಗಳಲ್ಲಿ ವರದಿ ನೀಡುವಂತೆ ಬಿಬಿಎಂಪಿ ಅಧಿಕಾರಿಗಳು ಹಾಗೂ ಇಲಾಖೆ ಅಧಿಕಾರಿಗಳಿಗೆ ಜಂಟಿ ಸರ್ವೆ ನಡೆಸುವಂತೆ ಸಚಿವರು ಸೂಚಿಸಿದರು. 

ಕೆಲವರು ಎನ್ ಓ ಸಿ ಪಡೆಯದೆ ಕಟ್ಟಡ ನಿರ್ಮಿಸಿದ್ದು, ಮತ್ತೆ ಕೆಲವರು ಎನ್ ಓ ಸಿ ಪಡೆದರೂ ಅನುಮೋದಿತ ಎತ್ತರದ ಮಿತಿ ಉಲ್ಲಂಘಿಸಿದ್ದಾರೆ. ಏರ್ಪೋರ್ಟ್ ಅಥಾರಿಟಿ ಆಫ್ ಇಂಡಿಯಾ ನಡೆಸಿದ ಸರ್ವೆಯಲ್ಲಿ 11 ಕಟ್ಟಡಗಳು ಹಾಗೂ ವೈಮಾನಿಕ ತರಬೇತಿ ಶಾಲೆಯಿಂದ ನಡೆಸಿದ ಸರ್ವೆಯಲ್ಲಿ 4 ಕಟ್ಟಡಗಳು  ನಿಯಮ ಉಲ್ಲಂಘಿಸಿದ್ದು ಪತ್ತೆಯಾಗಿದೆ. ಕೆಲವರು ಸರ್ವೆ ನಡೆಸಲು ಅಸಹಕಾರ ತೋರಿದ್ದಾರೆ. ಹೀಗಾಗಿ ಮತ್ತೊಮ್ಮೆ ಸರ್ವೆ ನಡೆಸಲು ಸೂಚನೆ ನೀಡಿದರು‌.

ಲ್ಯಾಂಡಿಂಗ್ ಹಾಗೂ ಪಾರ್ಕಿಂಗ್ ಬಾಡಿಗೆ ಬಾಕಿ ನೀಡದ ಕಂಪೆನಿಗಳ ಆಸ್ತಿಯನ್ನು ಸೀಜ್ ಮಾಡಲಾಗಿದೆ ಎಂದು ಅಧಿಕಾರಿಗಳು ಸಚಿವರಿಗೆ ಮಾಹಿತಿ ನೀಡಿದರು. ಎಲ್ಲ ಕಂಪೆನಿಗಳಿಂದ ಸುಮಾರು ರೂ.5 ಕೋಟಿ ಬಾಡಿಗೆ ಹಣ ಬಾಕಿ ಇದೆ. ಬಾಕಿ ಹಣ ಪಾವತಿಸಲು ನೀಡಿರುವ ಕೊನೆಯ ನೋಟಿಸ್ ನ ಅವಧಿ  ಮುಗಿದಿದೆ. ಕೆಲವು ಕಂಪೆನಿಗಳು ಸ್ವಲ್ಪ ಪ್ರಮಾಣದಲ್ಲಿ ಬಾಕಿ ಪಾವತಿಸಿದ್ದಾರೆ‌. ಎಲ್ಲ ಕಂಪೆನಿಗಳು ಹಣ ಪಾವತಿಸಬೇಕು. ಅದಕ್ಕಾಗಿ ಕಂಪೆನಿಗಳ ಮುಖ್ಯಸ್ಥರ ಜೊತೆ ಮಾತನಾಡುವಂತೆ ಸಚಿವರು ಸೂಚಿಸಿದರು.

ಕಳೆದ ನಾಲ್ಕು ವರ್ಷಗಳಿಂದ ಸ್ಥಗಿತವಾಗಿದ್ದ ಜಕ್ಕೂರು ಸರ್ಕಾರಿ ವೈಮಾನಿಕ ತರಬೇತಿ ಶಾಲೆ ಆಗಸ್ಟ್ 20 ರಿಂದ ಆರಂಭಿಸಲಾಗುವುದು. ಮುಖ್ಯ ಬೋಧಕರ ನೇಮಕವಾಗಿದ್ದು, ಸಹಾಯಕ ಬೋಧಕರ ನೇಮಕ ಪ್ರಕ್ರಿಯೆ ನಡೆಯುತ್ತಿದೆ. ಶ್ರೀಘ್ರದಲ್ಲಿ ಎಲ್ಲ ಪ್ರಕ್ರಿಯೆ ಮುಗಿಸಿ, ಮುಖ್ಯಮಂತ್ರಿಗಳಿಂದ ಚಾಲನೆ ಕೊಡಿಸಲು  ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಅಪರಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಯುಕ್ತ ಡಾ. ಗೋಪಾಲಕೃಷ್ಣ ಮತ್ತಿತರ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಒಬ್ಬ ಅಲ್ಲ.. ಭಾರತದ ಮೇಲೆ ದಾಳಿಗೆ ಸಾವಿರಾರು ಆತ್ಮಹತ್ಯಾ ಬಾಂಬರ್‌ಗಳು ಸಿದ್ಧ': ಪಾಕ್ ಮೂಲದ ಉಗ್ರ Masood Azhar ಆಡಿಯೋ ವೈರಲ್!

Pak ಸಚಿವನಿಗೆ ಮುಖಭಂಗ: ನೆತನ್ಯಾಹು ವಿರುದ್ಧ ಮಾತಾಡ್ತಿದ್ದಂತೆ ಶೋ ನಿಲ್ಲಿಸಿ ಆಸಿಫ್‌ನನ್ನು ಹೊರಕಹಿಸಿದ ಆ್ಯಂಕರ್, Video!

'ಅಪ್ಪ-ಅಮ್ಮನ ಪ್ರಜ್ಞೆ ತಪ್ಪಿಸಿ ಕಟ್ಟಿಹಾಕಿ ಕಳ್ಳತನ': ಮನೆಗೆಲಸದವರ ಮೇಲೆ ಮಾಜಿ ಐಎಎಸ್ ಅಧಿಕಾರಿ Puja Khedkar ಆರೋಪ!

1st ODI: ಮಿಚೆಲ್ ಸ್ಫೋಟಕ ಭರ್ಜರಿ ಬ್ಯಾಟಿಂಗ್, ಭಾರತಕ್ಕೆ ಗೆಲ್ಲಲು ಬೃಹತ್ ಗುರಿ ನೀಡಿದ ಕಿವೀಸ್

ಕೇರಳದಲ್ಲಿ ಕಾನೂನು ಸುವ್ಯವಸ್ಥೆಗೆ ಬೆದರಿಕೆ: SDPI, ಜಮಾತ್, ಸಂಘಟನೆಗಳ ಪಾತ್ರ ಪ್ರಶ್ನಿಸಿದ ಅಮಿತ್ ಶಾ!

SCROLL FOR NEXT