High Court 
ರಾಜ್ಯ

ಹೆತ್ತವರ ಸಂಬಂಧ ಅನಧಿಕೃತ ಇರಬಹುದು, ಮಕ್ಕಳಲ್ಲ; ಎರಡನೇ ಪತ್ನಿ ಮಕ್ಕಳು ನೌಕರಿ ಪಡೆಯಲು ಅರ್ಹರು: ಹೈಕೋರ್ಟ್

ಪೋಷಕರ ಸಂಬಂಧ ಅನಧಿಕೃತ ಇರಬಹುದು. ಆದರೆ, ಅವರ ಮಕ್ಕಳು ಅನಧಿಕೃತ ಅಲ್ಲ, ಹೀಗಾಗಿ ಎರಡನೆಯ ಪತ್ನಿಯ ಮಕ್ಕಳಿಗೂ ಅನುಕಂಪದ ಆಧಾರದ ಮೇಲೆ ನೌಕರಿ ಪಡೆಯಲು ಅಧಿಕಾರವಿರುತ್ತದೆ ಎಂದು ಹೈಕೋರ್ಟ್ ತಿಳಿಸಿದೆ.  

ಬೆಂಗಳೂರು: ಪೋಷಕರ ಸಂಬಂಧ ಅನಧಿಕೃತ ಇರಬಹುದು. ಆದರೆ, ಅವರ ಮಕ್ಕಳು ಅನಧಿಕೃತ ಅಲ್ಲ, ಹೀಗಾಗಿ ಎರಡನೆಯ ಪತ್ನಿಯ ಮಕ್ಕಳಿಗೂ ಅನುಕಂಪದ ಆಧಾರದ ಮೇಲೆ ನೌಕರಿ ಪಡೆಯಲು ಅಧಿಕಾರವಿರುತ್ತದೆ ಎಂದು ಹೈಕೋರ್ಟ್ ತಿಳಿಸಿದೆ.  

ಎರಡನೇ ಪತ್ನಿಯ ಮಕ್ಕಳು ಅನುಕಂಪದ ನೌಕರಿ ಪಡೆಯಲು ಅರ್ಹರಲ್ಲ ಎಂದು 2011ರ ಕೆಪಿಟಿಸಿಎಲ್‌(ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ) ಸುತ್ತೋಲೆ ಪ್ರಶ್ನಿಸಿದ್ದ ಮೇಲ್ಮನವಿ ವಿಚಾರಣೆ ವೇಳೆ ನ್ಯಾಯಮೂರ್ತಿ ಬಿ.ವಿ. ನಾಗರತ್ನ ನೇತೃತ್ವದ ವಿಭಾಗೀಯ ಪೀಠ ಈ ಅಭಿಪ್ರಾಯಪಟ್ಟಿದೆ. 

ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಕಡವೆಕೆರೆ ನಿವಾಸಿ ಸಂತೋಷ್ ಎಂಬುವರು ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ವಿಭಾಗೀಯ ಪೀಠ ನಡೆಸಿತು, ಲೈನ್‌ಮನ್ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬರು 2014ರ ಜೂನ್‌ನಲ್ಲಿ ನಿಧನರಾದರು. ಅನುಕಂಪದ ಆಧಾರದಲ್ಲಿ ನೌಕರಿ ಕೋರಿ ಎರಡನೇ ಪತ್ನಿ ಮಗ ಸಲ್ಲಿಸಿದ್ದ ಅರ್ಜಿಯನ್ನು ಕೆಪಿಟಿಸಿಎಲ್‌ ತಿರಸ್ಕರಿಸಿತ್ತು.

ಮೊದಲ ಪತ್ನಿ ಇದ್ದಾಗಲೇ ಎರಡನೇ ವಿವಾಹವಾದರೆ ಆ ಪತ್ನಿ ಅಧಿಕೃತ ಅಲ್ಲ. ತಾಯಿ ಅನಧಿಕೃತ ಆಗಿರುವ ಕಾರಣ ಮಗನೂ ಅನಧಿಕೃತ ಎಂದು ವಾದಿಸಿತ್ತು. ಇದನ್ನು ಪ್ರಶ್ನಿಸಿದ್ದ ಅರ್ಜಿ ಮತ್ತು ಮರು ಪರಿಶೀಲನಾ ಅರ್ಜಿಯನ್ನು ಏಕ ಸದಸ್ಯ ಪೀಠ ತಿರಸ್ಕರಿಸಿತ್ತು. ‘ತಂದೆ ಮತ್ತು ತಾಯಿ ಇಲ್ಲದೆ ಮಗು ಜನಿಸಲು ಸಾಧ್ಯವಿಲ್ಲ. ಜನ್ಮ ತಾಳುವ ಪ್ರಕ್ರಿಯೆಯಲ್ಲಿ ಮಗುವಿನ ಪಾತ್ರ ಏನೂ ಇರುವುದಿಲ್ಲ.

ಆದ್ದರಿಂದ, ಪೋಷಕರು ಅನಧಿಕೃತ ಇರಬಹುದು, ಆದರೆ, ಮಕ್ಕಳು ಅನಧಿಕೃತ ಅಲ್ಲ ಎಂಬ ಅಂಶವನ್ನು ಪರಿಗಣಿಸಬೇಕಾಗುತ್ತದೆ.

ಮಕ್ಕಳೆಲ್ಲರೂ ಸಮಾನರು ಎಂಬ ಕಾನೂನನ್ನು ಜಾರಿಗೆ ತರಬಹುದಾಗಿದೆ. ವಿವಾಹೇತರ ಸಂಬಂಧದಿಂದ ಜನಿಸಿದ ಮಕ್ಕಳಿಗೂ ನ್ಯಾಯ ದೊರಕಿಸಲು ಸಂಸತ್ ಮುಂದಾಗಬೇಕಿದೆ’ ಎಂದು ಪೀಠ ಹೇಳಿತು. ಅರ್ಜಿದಾರರ ಮನವಿಯನ್ನು ಕಾನೂನಿನ ಅಡಿಯಲ್ಲಿ ಪರಿಗಣಿಸಲು ಕೆಪಿಟಿಸಿಎಲ್‌ಗೆ ಪೀಠ ನಿರ್ದೇಶನ ನೀಡಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

ವಿಮಾನ ಸುರಕ್ಷತೆಯಲ್ಲಿ ರಾಜಿಯಿಲ್ಲ: ಪೈಲಟ್‌ಗಳ ಡ್ರಗ್‌ ಟೆಸ್ಟ್‌ ನಿಯಮದಲ್ಲಿ ಮಹತ್ವದ ಬದಲಾವಣೆ, ವರ್ಷವಿಡೀ ಯಾದೃಚ್ಛಿಕ ತಪಾಸಣೆಗೆ ಕೇಂದ್ರ ಸರ್ಕಾರ ಮುಂದು..!

ಹಿರಿಯೂರು ಬಳಿ ಸಮರ್ಥ್ ಶಾಮನೂರು ಕಾರು ಅಪಘಾತ: ಕಾಂಗ್ರೆಸ್ ಶಾಸಕ ಅಪಾಯದಿಂದ ಪಾರು!

20 TMC ನಾಯಕರ ಅನರ್ಹತೆ ಪ್ರಕರಣ: ಅಭಿಷೇಕ್‌ ಬ್ಯಾನರ್ಜಿ ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್‌ ಅಸ್ತು; ಬಂಡಾಯ ಸಂಸದರಿಗೆ Notice ಜಾರಿ..!

ಶ್ರೀಶೈಲ: ಹೋಟೆಲ್‌ನಲ್ಲಿ ಒಂದೇ ಕುಟುಂಬದ ಐವರು ಆತ್ಮಹತ್ಯೆ; ಕಾರಣ ನಿಗೂಢ