ಸಾಂದರ್ಭಿಕ ಚಿತ್ರ 
ರಾಜ್ಯ

ಕೇಂದ್ರದಿಂದ ಕರ್ನಾಟಕಕ್ಕೆ 8,542 ಕೋಟಿ ರೂ. ಜಿಎಸ್ ಟಿ ಪರಿಹಾರ ಬಿಡುಗಡೆ

ಜಿಎಸ್‌ಟಿ ಪರಿಹಾರದ ಬದಲಾಗಿ 75,000 ಕೋಟಿ ರೂ.ಗಳನ್ನು ‘ಬ್ಯಾಕ್-ಟು-ಬ್ಯಾಕ್ ಸಾಲ ಸೌಲಭ್ಯ’ ಅಡಿಯಲ್ಲಿ ರಾಜ್ಯಗಳಿಗೆ ಬಿಡುಗಡೆ ಮಾಡಿರುವುದಾಗಿ ಕೇಂದ್ರ ಹಣಕಾಸು ಸಚಿವಾಲಯ ಗುರುವಾರ ತಿಳಿಸಿದೆ.

ಬೆಂಗಳೂರು: ಜಿಎಸ್‌ಟಿ ಪರಿಹಾರದ ಬದಲಾಗಿ 75,000 ಕೋಟಿ ರೂ.ಗಳನ್ನು ‘ಬ್ಯಾಕ್-ಟು-ಬ್ಯಾಕ್ ಸಾಲ ಸೌಲಭ್ಯ’ ಅಡಿಯಲ್ಲಿ ರಾಜ್ಯಗಳಿಗೆ ಬಿಡುಗಡೆ ಮಾಡಿರುವುದಾಗಿ ಕೇಂದ್ರ ಹಣಕಾಸು ಸಚಿವಾಲಯ ಗುರುವಾರ ತಿಳಿಸಿದೆ.

ಕೋವಿಡ್ -19 ಸಾಂಕ್ರಾಮಿಕ ರೋಗದಿಂದ ಉಂಟಾಗಿರುವ ಆದಾಯದ ಕೊರತೆ ಮತ್ತು ಆರ್ಥಿಕತೆಯ ಮೇಲೆ ಅದರ ಪ್ರಭಾವದಿಂದಾಗಿ ಜಿಎಸ್ ಟಿ ಸಂಗ್ರಹದಲ್ಲಿನ ನಷ್ಟವನ್ನು ಸಾಲ ಸೌಲಭ್ಯ ಸರಿದೂಗಿಸುವ ನಿರೀಕ್ಷೆಯಿದೆ.

ಮೊದಲ ಕಂತಾಗಿ ಕರ್ನಾಟಕ 8,542.17 ಕೋಟಿ ರೂ.ಗಳನ್ನು ಸ್ವೀಕರಿಸಿದೆ. ಸೆಸ್ ಸಂಗ್ರಹದಲ್ಲಿ ರಾಜ್ಯಗಳಿಗೆ ಪ್ರತಿ ಎರಡು ತಿಂಗಳಿಗೊಮ್ಮೆ ನಿಯಮಿತವಾಗಿ ಜಿಎಸ್ಟಿ ಪರಿಹಾರವನ್ನು ಬಿಡುಗಡೆ ಜೊತೆಗೆ ಹೆಚ್ಚುವರಿಯಾಗಿ ಈ ಹಣವನ್ನು ಗುರುವಾರ ಬಿಡುಗಡೆ ಮಾಡಲಾಗಿದೆ.

ಮೇ ತಿಂಗಳಲ್ಲಿ ನಡೆದ 43ನೇ ಜಿಎಸ್ ಟಿ ಸಲಹಾ ಸಭೆಯಲ್ಲಿ ಕೇಂದ್ರ ಸರ್ಕಾರ 1.59 ಲಕ್ಷ ಕೋಟಿ ಸಾಲ ಪಡೆದು, ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಹಂಚಿಕೆ ಮಾಡಲು ನಿರ್ಧರಿಸಲಾಗಿತ್ತು.

ಕಳೆದ ವರ್ಷ ಸಾಲ ಪಡೆಯಲಿದ್ದ ನಿಯಮಗಳೇ ಈ ವರ್ಷವೂ ಅನ್ವಯವಾಗಲಿದೆ. ಮೊದಲ ಕಂತು ವರ್ಷದ ಪರಿಹಾರದ ಕೊರತೆಯ ಸುಮಾರು ಶೇಕಡಾ 50 ರಷ್ಟಿದೆ. ಬಾಕಿ ಮೊತ್ತವನ್ನು 2021-22ರ ದ್ವಿತೀಯಾರ್ಧದಲ್ಲಿ ಸ್ಥಿರ ಕಂತುಗಳಲ್ಲಿ ಬಿಡುಗಡೆ ಮಾಡಲಾಗುವುದು ಎಂದು ಹಣಕಾಸು ಸಚಿವಾಲಯ ಹೇಳಿದೆ.

ಸೆಸ್ ಸಂಗ್ರಹದಿಂದ ನಿಯಮಿತ ಪರಿಹಾರದ ಹೊರತಾಗಿ ಕರ್ನಾಟಕಕ್ಕೆ ಈ ಹಣಕಾಸು ವರ್ಷದಲ್ಲಿ 18,000 ಕೋಟಿ ರೂ.ನೀಡುವ ಭರವಸೆ ನೀಡಲಾಗಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT