ಆರೋಪಿ ಹಾಗೂ ಹಾನಿಗೊಂಡ ಕಾರು 
ರಾಜ್ಯ

ಬೆಂಗಳೂರು: ಭಗ್ನ ಪ್ರೇಮಿಯಿಂದ ಏಳು ಕಾರುಗಳ ಮೇಲೆ ದಾಳಿ

ಕುಡಿದ ಮತ್ತಿನಲ್ಲಿ ಏಳು ಕಾರುಗಳಿಗೆ ಹಾನಿಯನ್ನುಂಟು ಮಾಡಿದ್ದ ಭಗ್ನ ಪಾಗಲ್ ಪ್ರೇಮಿಯೋರ್ವನನ್ನು ಬಸವೇಶ್ವರ ನಗರ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು: ಕುಡಿದ ಮತ್ತಿನಲ್ಲಿ ಏಳು ಕಾರುಗಳಿಗೆ ಹಾನಿಯನ್ನುಂಟು ಮಾಡಿದ್ದ ಭಗ್ನ ಪಾಗಲ್ ಪ್ರೇಮಿಯೋರ್ವನನ್ನು ಬಸವೇಶ್ವರ ನಗರ ಪೊಲೀಸರು ಬಂಧಿಸಿದ್ದಾರೆ.

ಮಹಾಲಕ್ಷ್ಮಿ ಲೇಔಟ್ ನಿವಾಸಿ ಸತೀಶ್ (26) ಬಂಧಿತ ಆರೋಪಿ.

ಆರೋಪಿ ಸತೀಶ್ ಕುಡಿದ ಮತ್ತಿನಲ್ಲಿ ಗುರುವಾರ ಮಧ್ಯರಾತ್ರಿ ಬಸವೇಶ್ವರನಗರ ಠಾಣೆ ವ್ಯಾಪ್ತಿಯ ಕುರುಬರಹಳ್ಳಿಯ ಪೈಪ್‌ಲೈನ್ ರಸ್ತೆಯಲ್ಲಿ ಬೈಕ್ ನಲ್ಲಿ ಬಂದು ಕಂಡ ಕಂಡ ಕಾರುಗಳ ಗಾಜು ಹೊಡೆದು ಪುಂಡಾಟ ಮೆರೆದಿದ್ದಾನೆ. ಇವನೊಡನೆ ಇನ್ನೂ ಇಬ್ಬರು ಕಿಡಿಗೇಡಿಗಳು ಕೃತ್ಯದಲ್ಲಿ ಭಾಗವಹಿಸಿದ್ದರೆನ್ನಲಾಗಿದೆ.

ತಡರಾತ್ರಿ 1.30ರ ಸುಮಾರು ಆರೋಪಿಯನ್ನು ಬಂಧಿಸಿರುವ ಪೋಲೀಸರು ಇನ್ನೂ ಇಬ್ಬರಿಗಾಗಿ ಶೋಧ ನಡೆಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಆರೋಪಿ ವಿರುದ್ಧ ಬಸವೇಶ್ವರ ನಗರ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

SCROLL FOR NEXT