ರಾಜ್ಯ

ಬೆಂಗಳೂರು: ಭಗ್ನ ಪ್ರೇಮಿಯಿಂದ ಏಳು ಕಾರುಗಳ ಮೇಲೆ ದಾಳಿ

Raghavendra Adiga

ಬೆಂಗಳೂರು: ಕುಡಿದ ಮತ್ತಿನಲ್ಲಿ ಏಳು ಕಾರುಗಳಿಗೆ ಹಾನಿಯನ್ನುಂಟು ಮಾಡಿದ್ದ ಭಗ್ನ ಪಾಗಲ್ ಪ್ರೇಮಿಯೋರ್ವನನ್ನು ಬಸವೇಶ್ವರ ನಗರ ಪೊಲೀಸರು ಬಂಧಿಸಿದ್ದಾರೆ.

ಮಹಾಲಕ್ಷ್ಮಿ ಲೇಔಟ್ ನಿವಾಸಿ ಸತೀಶ್ (26) ಬಂಧಿತ ಆರೋಪಿ.

ಆರೋಪಿ ಸತೀಶ್ ಕುಡಿದ ಮತ್ತಿನಲ್ಲಿ ಗುರುವಾರ ಮಧ್ಯರಾತ್ರಿ ಬಸವೇಶ್ವರನಗರ ಠಾಣೆ ವ್ಯಾಪ್ತಿಯ ಕುರುಬರಹಳ್ಳಿಯ ಪೈಪ್‌ಲೈನ್ ರಸ್ತೆಯಲ್ಲಿ ಬೈಕ್ ನಲ್ಲಿ ಬಂದು ಕಂಡ ಕಂಡ ಕಾರುಗಳ ಗಾಜು ಹೊಡೆದು ಪುಂಡಾಟ ಮೆರೆದಿದ್ದಾನೆ. ಇವನೊಡನೆ ಇನ್ನೂ ಇಬ್ಬರು ಕಿಡಿಗೇಡಿಗಳು ಕೃತ್ಯದಲ್ಲಿ ಭಾಗವಹಿಸಿದ್ದರೆನ್ನಲಾಗಿದೆ.

ತಡರಾತ್ರಿ 1.30ರ ಸುಮಾರು ಆರೋಪಿಯನ್ನು ಬಂಧಿಸಿರುವ ಪೋಲೀಸರು ಇನ್ನೂ ಇಬ್ಬರಿಗಾಗಿ ಶೋಧ ನಡೆಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಆರೋಪಿ ವಿರುದ್ಧ ಬಸವೇಶ್ವರ ನಗರ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿದೆ.

SCROLL FOR NEXT