ಸಾಂದರ್ಭಿಕ ಚಿತ್ರ 
ರಾಜ್ಯ

ಮೆಟ್ರಿಕ್ ನಂತರದ ಎಸ್ ಸಿ ವಿದ್ಯಾರ್ಥಿಗಳಿಗೆ ಶೀಘ್ರದಲ್ಲೇ ಉಚಿತ ಸ್ಕಾಲರ್ ಶಿಪ್ ಇ-ಕಾರ್ಡ್ ವಿತರಣೆ

ಮೆಟ್ರಿಕ್ ನಂತರದ ಪರಿಶಿಷ್ಟ ಜಾತಿ (ಎಸ್ ಸಿ) ವಿದ್ಯಾರ್ಥಿಗಳ ಆಧಾರ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರಗಳು, ಅಂತಿಮ ಬೋರ್ಡ್ ಪರೀಕ್ಷೆಯ ನೋಂದಣಿ ಸಂಖ್ಯೆ ಬಳಸಿಕೊಂಡು ಉಚಿತ ಸ್ಕಾಲರ್ ಶಿಪ್ ಇ- ಕಾರ್ಡ್ ಗಳನ್ನು  ರಾಜ್ಯ ಸರ್ಕಾರ ಶೀಘ್ರದಲ್ಲಿಯೇ ವಿತರಿಸಲಿದೆ.

ಬೆಂಗಳೂರು: ಮೆಟ್ರಿಕ್ ನಂತರದ ಪರಿಶಿಷ್ಟ ಜಾತಿ (ಎಸ್ ಸಿ) ವಿದ್ಯಾರ್ಥಿಗಳ ಆಧಾರ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರಗಳು, ಅಂತಿಮ ಬೋರ್ಡ್ ಪರೀಕ್ಷೆಯ ನೋಂದಣಿ ಸಂಖ್ಯೆ ಬಳಸಿಕೊಂಡು ಉಚಿತ ಸ್ಕಾಲರ್ ಶಿಪ್ ಇ- ಕಾರ್ಡ್ ಗಳನ್ನು  ರಾಜ್ಯ ಸರ್ಕಾರ ಶೀಘ್ರದಲ್ಲಿಯೇ ವಿತರಿಸಲಿದೆ.

ಮೆಟ್ರಿಕ್ ನಂತರದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಸಾಲ್ಕರ್ ಶಿಪ್ ಕುರಿತು ಕೇಂದ್ರ ಸರ್ಕಾರದ ಮಾರ್ಗಸೂಚಿಗಳನ್ನು ಜಾರಿಗೆ ತರುತ್ತಿರುವ ಮೊದಲ ರಾಜ್ಯ ಕರ್ನಾಟಕವಾಗಿದೆ ಎಂದು ಆಡಳಿತ ಸುಧಾರಣಾ ಮತ್ತು ಸಿಬ್ಬಂದಿ ಇಲಾಖೆ ( ಇ-ಆಡಳಿತ) ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಜೀವ್ ಚಾವ್ಲಾ ಗುರುವಾರ ತಿಳಿಸಿದರು.

ಅರ್ಹ ಮೆಟ್ರಿಕ್ ನಂತರದ ವಿದ್ಯಾರ್ಥಿಗಳ ಸ್ಕಾಲರ್ ಶಿಪ್ ನೀಡಲು ಮೊದಲ ಬಾರಿಗೆ ಕಾಗದ ರಹಿತ ವ್ಯವಸ್ಥೆ ಮಾಡಲಾಗುತ್ತಿದೆ. ವಿವರಗಳ ನಮೂದನೆ, ಪರಿಶೀಲನೆ, ಆಡ್ಮಿಷನ್, ಸ್ಕಾಲರ್ ಶಿಪ್ ವಿತರಣೆ, ವಿದ್ಯಾರ್ಥಿಗಳ ಪತ್ತೆ ಎಲ್ಲವೂ ಸ್ವಯಂ ಚಾಲಿತವಾಗಿರುತ್ತದೆ ಎಂದು ಹಿರಿಯ ಐಎಎಸ್ ಅಧಿಕಾರಿ ಹೇಳಿದರು.

ಕೇಂದ್ರ ಪ್ರಾಯೋಜಿತ ಮೆಟ್ರಿಕ್ ನಂತರದ ಸ್ಕಾಲರ್ ಶಿಪ್ ಯೋಜನೆಯನ್ನು ರಾಜ್ಯಗಳ ಮೂಲಕ ಅನುಷ್ಠಾನಗೊಳಿಸಲಾಗುತ್ತಿದೆ. ವಿದ್ಯಾರ್ಥಿಗಳು ರಾಜ್ಯ ಸ್ಕಾಲರ್ ಶಿಪ್ ಪೋರ್ಟಲ್ ನಲ್ಲಿ  (ಎಸ್ ಎಸ್ ಪಿ) ಲಾಗಿನ್ ಆಗಿ, ಮೂರು ಪ್ರಮಾಣಪತ್ರಗಳನ್ನು ಲಗತ್ತಿಸಬೇಕಾದ ಅಗತ್ಯವಿರುತ್ತದೆ.

ಈ ವಿವರಗಳನ್ನು ವಿದ್ಯುನ್ಮಾನವಾಗಿ ಪರಿಶೀಲಿಸಲಾಗುವುದು ಮತ್ತು ವಿದ್ಯಾರ್ಥಿಗಳು ಇದನ್ನು ಡೌನ್ ಲೋಡ್ ಮಾಡಿಕೊಂಡು,  ಸರ್ಕಾರ ಶುಲ್ಕ ಪಾವತಿಯ ಖಾತರಿಯಂತೆ, ಆಡ್ಮಿಷನ್ ಗಾಗಿ ಕಾಲೇಜಿಗೆ ಇದನ್ನು ತೋರಿಸಬಹುದು. ರಾಜ್ಯ, ಸಿಬಿಎಸ್ ಇ ಮತ್ತು ಐಸಿಎಸ್ ಇ ಬೋರ್ಡ್, 65 ವಿಶ್ವವಿದ್ಯಾನಿಲಯಗಳೊಂದಿಗೆ ನಾವು ಸಂಪರ್ಕ ಹೊಂದಿರುವುದಾಗಿ ಚಾವ್ಲಾ ತಿಳಿಸಿದರು.

ಅನರ್ಹ ಅಭ್ಯರ್ಥಿಗಳು ಈ ಸವಲತ್ತು ಪಡೆಯದಂತೆ ನಿರ್ಬಂಧಿಸಲಾಗಿದೆ. ಈ ಸಾಲ್ಕರ್ ಶಿಪ್ ಪಡೆಯಲು ಶೇ.75 ರಷ್ಟು ಬಯೋಮೆಟ್ರಿಕ್  ಹಾಜರಾತಿ ಕಡ್ಡಾಯವಾಗಿದೆ ಎಂದು ರಾಜೀವ್ ಚಾವ್ಲಾ ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

ನಾಳೆ ಜಗತ್ತಿನಾದ್ಯಂತ ಯಶ್ ನಟನೆಯ 'Toxic' ಚಿತ್ರ ಬಿಡುಗಡೆ; ಇಂದು ದಿಢೀರ್ ಕೋರ್ಟ್ ಮೆಟ್ಟಿಲೇರಿದ ನಿರ್ಮಾಪಕ!

ಬೆಂಗಳೂರು: ಸಿಗ್ನಲ್‌ನಲ್ಲಿ ನಿಂತಿದ್ದ ಬೈಕ್‌ಗೆ ವೇಗವಾಗಿ ಬಂದ ಕಾರು ಡಿಕ್ಕಿ, ಹೇರ್ ಸ್ಟೈಲಿಸ್ಟ್ ಸಾವು; Video

BPSC ಪರೀಕ್ಷೆ ವಿವಾದ: ಬಿಹಾರ ಸಿಎಂ ನಿವಾಸದ ಬಳಿ ಬ್ಯಾರಿಕೇಡ್ ಮುರಿದ ವಿದ್ಯಾರ್ಥಿಗಳು, ಜಲಫಿರಂಗಿಗೆ ಜಗ್ಗದೆ ರೇನ್ ಡ್ಯಾನ್ಸ್ ಮಾಡಿ ಪ್ರತಿಭಟನೆ!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!