ಸಂಗ್ರಹ ಚಿತ್ರ 
ರಾಜ್ಯ

ರಾಜ್ಯದ ಅಂಗವಾಡಿಯಲ್ಲಿನ ಶೇ.10ರಷ್ಟು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ಸಮೀಕ್ಷಾ ವರದಿ

ರಾಜ್ಯದಲ್ಲಿ ಅಪೌಷ್ಟಿಕತೆ ಸಮಸ್ಯೆಯಿಂದ ಬಳಲುತ್ತಿರುವ ಮಕ್ಕಳ ಸಂಖ್ಯೆ ದಿಢೀರ್‌ ಏರಿಕೆಯಾಗಿದೆ. ಅಪೌಷ್ಟಿಕತೆಯಿಂದಾಗಿ ಹಲವು ಮಕ್ಕಳು ಸಾವಿನ ದವಡೆಯಲ್ಲಿ ಸಿಲುಕಿದ್ದಾರೆಂಬ ಆತಂಕಕಾರಿ ವಿಚಾರ ಸಮೀಕ್ಷಾ ವರದಿಯಿಂದ ಬಯಲಾಗಿದೆ.

ಕಲಬುರಗಿ: ರಾಜ್ಯದಲ್ಲಿ ಅಪೌಷ್ಟಿಕತೆ ಸಮಸ್ಯೆಯಿಂದ ಬಳಲುತ್ತಿರುವ ಮಕ್ಕಳ ಸಂಖ್ಯೆ ದಿಢೀರ್‌ ಏರಿಕೆಯಾಗಿದೆ. ಅಪೌಷ್ಟಿಕತೆಯಿಂದಾಗಿ ಹಲವು ಮಕ್ಕಳು ಸಾವಿನ ದವಡೆಯಲ್ಲಿ ಸಿಲುಕಿದ್ದಾರೆಂಬ ಆತಂಕಕಾರಿ ವಿಚಾರ ಸಮೀಕ್ಷಾ ವರದಿಯಿಂದ ಬಯಲಾಗಿದೆ.

ಕೋವಿಡ್ ಹಾಗೂ ಲಾಕ್‌ಡೌನ್‌ ಕಾರಣಕ್ಕೆ ಕಳೆದೊಂದು ವರ್ಷದಿಂದ ಅಂಗನವಾಡಿಗಳು ಬಂದ್‌ ಆಗಿವೆ. ಮತ್ತೊಂದೆಡೆ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರನ್ನು ಕೋವಿಡ್‌ ಕರ್ತವ್ಯಕ್ಕೆ ನಿಯೋಜಿಸಲಾಗಿತ್ತು. ಹೀಗಾಗಿ ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳ ಸಮೀಕ್ಷೆ ಕುಂಠಿತಗೊಂಡಿತ್ತು.

ಬಳಿಕ ಮೇ ತಿಂಗಳಿನಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು  ಅಂಗವಾಡಿ ಕೇಂದ್ರಗಳಿಗೆ ಬರುವ ಹುಟ್ಟಿನಿಂದ 6 ವರ್ಷ ವಯೋಮಾನದವರೆಗಿನ 40,53,022 ಮಕ್ಕಳ ತೂಕ, ಬೆಳವಣಿಗೆ ಸಂಬಂಧ ಸಮೀಕ್ಷೆ ನಡೆಸಿದ್ದು, ಸಮೀಕ್ಷಾ ವರದಿಯಲ್ಲಿಯಲ್ಲಿ ಶೇ.10ರಷ್ಟು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆಂದು ತಿಳಿದುಬಂದಿದೆ. 

ಸಮೀಕ್ಷೆ ನಡೆಸಿದ 40,53,022 ಮಕ್ಕಳಲ್ಲಿ ಶೇಕಡಾ 10.50 ರಷ್ಟು ಮಕ್ಕಳು ಮಧ್ಯಮ ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಶೇಕಡಾ 0.19 ರಷ್ಟು ಮಕ್ಕಳು ತೀವ್ರ ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಎಂದು ವರದಿಯಲ್ಲಿ ತಿಳಿಸಿದೆ. 

ಶೇ.89.32ರಷ್ಟು ಮಕ್ಕಳು ಸಾಮಾನ್ಯವಾಗಿದ್ದು, ಮಧ್ಯಮ ಅಪೌಷ್ಟಿಕತೆಯಿಂದ ಬಳಲುತ್ತಿರುವ 4,25,369 ಮಕ್ಕಳಲ್ಲಿ 1,92,377 (ಶೇ. 45ರಷ್ಟು) ಮಕ್ಕಳು ಕಲ್ಯಾಣ ಕರ್ನಾಟಕ ಪ್ರದೇಶ, ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ ಮತ್ತು ಬಳ್ಳಾರಿ ಜಿಲ್ಲೆಯವರಾಗಿದ್ದಾರೆ. ಇನ್ನು ತೀರಾ ಕಡಿಮೆ ತೂಕ ಇರುವ 7,627 ಮಕ್ಕಳಲ್ಲಿ 3,356 (ಶೇ.51) ಮಕ್ಕಳು ಈ ಭಾಗದವರೇ ಆಗಿದ್ದಾರೆಂದು ವರದಿಗಳು ತಿಳಿಸಿವೆ. 

ಬೆಳಗಾವಿ ಜಿಲ್ಲೆಯಲ್ಲಿ ಅತಿ ಹೆಚ್ಚು ಅಪೌಷ್ಟಿಕತೆ ಹೊಂದಿರುವ ಮಕ್ಕಳಿದ್ದಾರೆಂದು ತಿಳಿದುಬಂದಿದೆ. ಜಿಲ್ಲೆಯಲ್ಲಿ  57,444 ಮಧ್ಯಮ ಅಪೌಷ್ಟಿಕತೆ ಮತ್ತು 658 ತೀವ್ರ ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ. ಇದರ ನಂತರ ಸ್ಥಾನವನ್ನು ಬಳ್ಳಾರಿ, ರಾಯಚೂರು, ಕೊಪ್ಪಳ, ವಿಜಯಪುರ, ಯಾದಗಿರಿ ಜಿಲ್ಲೆಗಳು ಪಡೆದುಕೊಂಡಿವೆ.

ಇನ್ನು ಕೊಡಗು ಜಿಲ್ಲೆಯಲ್ಲಿ 3,356 ಸಾಧಾರಣ ಅಪೌಷ್ಟಿಕತೆ (ಮಾಡರೇಟ್‌ ಅಕ್ಯೂಟ್‌ ಮಾಲ್‌ನ್ಯೂಟ್ರಿಷನ್‌– ಮ್ಯಾಮ್‌) ಹಾಗೂ 37 ಮಕ್ಕಳು ತೀವ್ರ ಅಪೌಷ್ಟಿಕತೆಯಿಂದ (ಸಿವಿಯರ್‌ ಅಕ್ಯೂಟ್‌ ಮಾಲ್‌ನ್ಯೂಟ್ರಿಷನ್‌–ಸ್ಯಾಮ್‌) ಬಳಲುತ್ತಿದ್ದಾರೆಂದು ಸಮೀಕ್ಷಾ ವರದಿಯಿಂದ ತಿಳಿದುಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಒಬ್ಬ ಅಲ್ಲ.. ಭಾರತದ ಮೇಲೆ ದಾಳಿಗೆ ಸಾವಿರಾರು ಆತ್ಮಹತ್ಯಾ ಬಾಂಬರ್‌ಗಳು ಸಿದ್ಧ': ಪಾಕ್ ಮೂಲದ ಉಗ್ರ Masood Azhar ಆಡಿಯೋ ವೈರಲ್!

Pak ಸಚಿವನಿಗೆ ಮುಖಭಂಗ: ನೆತನ್ಯಾಹು ವಿರುದ್ಧ ಮಾತಾಡ್ತಿದ್ದಂತೆ ಶೋ ನಿಲ್ಲಿಸಿ ಆಸಿಫ್‌ನನ್ನು ಹೊರಕಹಿಸಿದ ಆ್ಯಂಕರ್, Video!

'ಅಪ್ಪ-ಅಮ್ಮನ ಪ್ರಜ್ಞೆ ತಪ್ಪಿಸಿ ಕಟ್ಟಿಹಾಕಿ ಕಳ್ಳತನ': ಮನೆಗೆಲಸದವರ ಮೇಲೆ ಮಾಜಿ ಐಎಎಸ್ ಅಧಿಕಾರಿ Puja Khedkar ಆರೋಪ!

1st ODI: ಮಿಚೆಲ್ ಸ್ಫೋಟಕ ಭರ್ಜರಿ ಬ್ಯಾಟಿಂಗ್, ಭಾರತಕ್ಕೆ ಗೆಲ್ಲಲು ಬೃಹತ್ ಗುರಿ ನೀಡಿದ ಕಿವೀಸ್

ಕೇರಳದಲ್ಲಿ ಕಾನೂನು ಸುವ್ಯವಸ್ಥೆಗೆ ಬೆದರಿಕೆ: SDPI, ಜಮಾತ್, ಸಂಘಟನೆಗಳ ಪಾತ್ರ ಪ್ರಶ್ನಿಸಿದ ಅಮಿತ್ ಶಾ!

SCROLL FOR NEXT