ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರು: ಪತಿ ಹತ್ಯೆಗೆ ಸುಪಾರಿ ಕೊಟ್ಟ ಪತ್ನಿ, ಪೊಲೀಸರ ಸಮಯಪ್ರಜ್ಞೆಯಿಂದ ಉಳಿದ ಅಮಾಯಕ ಜೀವ

ಪ್ರಿಯಕರನ ಜೊತೆಗೆ ಸೇರಿ ಗಂಡನಿಗೆ ಸುಪಾರಿ ನೀಡಿ ಪತ್ನಿಯೇ ಕೊಲೆ ಮಾಡಿಸಲು ಯತ್ನಸಿದ ಘಟನೆ ಬೆಂಗಳೂರಿನ ಮಾದನಾಯಕನಹಳ್ಳಿಯಲ್ಲಿ ನಡೆದಿದೆ. 

ಬೆಂಗಳೂರು: ಪ್ರಿಯಕರನ ಜೊತೆಗೆ ಸೇರಿ ಗಂಡನಿಗೆ ಸುಪಾರಿ ನೀಡಿ ಪತ್ನಿಯೇ ಕೊಲೆ ಮಾಡಿಸಲು ಯತ್ನಸಿದ ಘಟನೆ ಬೆಂಗಳೂರಿನ ಮಾದನಾಯಕನಹಳ್ಳಿಯಲ್ಲಿ ನಡೆದಿದೆ. 

ಪ್ರಕರಣದಲ್ಲಿ ಪೊಲೀಸರ ಸಮಯ ಪ್ರಜ್ಞೆಯಿಂದ ಮುಗ್ಧ ವ್ಯಕ್ತಿಯೊಬ್ಬರ ಜೀವ ಉಳಿದಂತಾಗಿದೆ. ಬೆಂಗಳೂರಿನ ಮಾದನಾಯಕನಹಳ್ಳಿ ನಿವಾಸಿಯಾಗಿರುವ ರೂಪ ಮತ್ತು ಗಿರೀಶ್ ಮದುವೆ ಆರು ವರ್ಷಗಳ ಹಿಂದೆ ನಡೆದಿತ್ತು. ಕೆಲ ದಿನಗಳ ಕಾಲ ಮನೆಯಲ್ಲೇ ಇದ್ದ ಪತ್ನಿ ರೂಪ ಇತ್ತೀಚೆಗೆ ಕೆಲಸಕ್ಕೆ ಸೇರಿಕೊಂಡಿದ್ದಳು.

ಕೆಲಸಕ್ಕೆ ಸೇರಿದ ನಂತರ ರೂಪಾಗೆ ಕುಮಾರ್ ಜೈನ್ ಎಂಬ ವ್ಯಕ್ತಿಯ ಪರಿಚಯವಾಗಿದೆ. ನಂತರ ಪರಿಚಯ ಸ್ನೇಹ ಹಾಗೂ ಪ್ರೀತಿಗೆ ತಿರುಗಿದೆ. 

ಬಳಿಕ ರೂಪಾ ಪತಿ ಗಿರೀಶ್ ರನ್ನು ನೋಡುವ ರೀತಿ ಬದಲಾಗಿದೆ. ಪತ್ನಿ ತನ್ನನ್ನು ನಿರ್ಲಕ್ಷ್ಯ ಮಾಡುತ್ತಿರುವುದನ್ನು ಗಮನಿಸಿದ ಗಿರೀಶ್ ಅವರು ಕೆಲಸಕ್ಕೆ ಹೋಗುವುದು ಬೇಡ ಎಂದು ಹೇಳಿದ್ದಾರೆ. 

ಇದರಿಂದ ಬೇಸರಗೊಂಡ ರೂಪಾ, ಪ್ರಿಯಕರ ಕುಮಾರ್ ಜೈನ್ ಜೊತೆಗೆ ಸೇರಿ, ಗಂಡನ ಕೊಲೆಗೆ ಸಂಚು ರೂಪಿಸಿದ್ದಾಳೆ. ಅದರಂತೆ ಕುಮಾರ್ ಜೈನ್ ಮೂಲಕ ಹದಿನೈದು ಲಕ್ಷಕ್ಕೆ ಗಂಡನ ಕೊಲೆಗೆ ಸುಪಾರಿ ನೀಡಿದ್ದಾನೆ. 

ಇವರ ಪ್ಲಾನ್ ನಂತೆ ಮೂರು ಲಕ್ಷ ಅಡ್ವಾನ್ಸ್ ಪಡೆದ ನಾಲ್ವರು ಆರೋಪಿಗಳು, ಕೊಲೆಗೆ ಸಿದ್ಧತೆ ನಡೆಸಿ, ಗಿರೀಶ್ ಕೊಲೆ ಮಾಡಲು ಎಲ್ಲರೂ ಮಂಕಿ ಕ್ಯಾಪ್ ಹಾಕಿಕೊಳ್ಳುತ್ತಿದ್ದರು. ಇದೇ ವೇಳೆ ನೈಟ್ ರೌಂಡ್ಸ್ ಬಂದ ಮಾದನಾಯಕನಹಳ್ಳಿ ಪೊಲೀಸರು, ಮಂಕಿ ಕ್ಯಾಪ್ ಗಳನ್ನು ನೋಡಿ ಆರೋಪಿಗಳನ್ನು ಪ್ರಶ್ನಿಸಿದ್ದಾರೆ.

ಬಳಿಕ ಎಲ್ಲರನ್ನೂ ವಶಕ್ಕೆ ಪಡೆದು ಪೊಲೀಸ್ ಠಾಣೆಯಲ್ಲಿ ವಿಚಾರಣೆ ನಡೆಸಿದ ವೇಳೆ ಸುಪಾರಿ ವಿಚಾರ ಬೆಳಕಿಗೆ ಬಂದಿದೆ. 

ಸದ್ಯ ಪ್ರಮುಖ ಆರೋಪಿ ರೂಪಾ, ಪ್ರಿಯಕರ ಸೇರಿ ಐವರನ್ನು ಪೊಲೀಸರು ಅರೆಸ್ಟ್ ಮಾಡಿ ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

ನಾಳೆ ಜಗತ್ತಿನಾದ್ಯಂತ ಯಶ್ ನಟನೆಯ 'Toxic' ಚಿತ್ರ ಬಿಡುಗಡೆ; ಇಂದು ದಿಢೀರ್ ಕೋರ್ಟ್ ಮೆಟ್ಟಿಲೇರಿದ ನಿರ್ಮಾಪಕ!

ಬೆಂಗಳೂರು: ಸಿಗ್ನಲ್‌ನಲ್ಲಿ ನಿಂತಿದ್ದ ಬೈಕ್‌ಗೆ ವೇಗವಾಗಿ ಬಂದ ಕಾರು ಡಿಕ್ಕಿ, ಹೇರ್ ಸ್ಟೈಲಿಸ್ಟ್ ಸಾವು; Video

BPSC ಪರೀಕ್ಷೆ ವಿವಾದ: ಬಿಹಾರ ಸಿಎಂ ನಿವಾಸದ ಬಳಿ ಬ್ಯಾರಿಕೇಡ್ ಮುರಿದ ವಿದ್ಯಾರ್ಥಿಗಳು, ಜಲಫಿರಂಗಿಗೆ ಜಗ್ಗದೆ ರೇನ್ ಡ್ಯಾನ್ಸ್ ಮಾಡಿ ಪ್ರತಿಭಟನೆ!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!