ಸಾಂದರ್ಭಿಕ ಚಿತ್ರ 
ರಾಜ್ಯ

ಕಲ್ಯಾಣ ಕರ್ನಾಟಕದ ಎರಡನೇ ವಿಧಿವಿಜ್ಞಾನ ಪ್ರಯೋಗಾಲಯ ಬಳ್ಳಾರಿಯಲ್ಲಿ ಸ್ಥಾಪನೆ

ಅಪರಾಧ ಪ್ರಕರಣಗಳ ಉತ್ತಮ ನಿರ್ವಹಣೆಗಾಗಿ ಮತ್ತು ತ್ವರಿತ ವಿಲೇವಾರಿಗಾಗಿ ರಾಜ್ಯ ಸರ್ಕಾರವು ಬಳ್ಳಾರಿಯಲ್ಲಿ ವಿಧಿವಿಜ್ಞಾನ ವಿಜ್ಞಾನ ಪ್ರಯೋಗಾಲಯವನ್ನು ಸ್ಥಾಪಿಸುವುದಾಗಿ ಘೋಷಿಸಿದೆ.

ಹುಬ್ಬಳ್ಳಿ:  ಅಪರಾಧ ಪ್ರಕರಣಗಳ ಉತ್ತಮ ನಿರ್ವಹಣೆಗಾಗಿ ಮತ್ತು ತ್ವರಿತ ವಿಲೇವಾರಿಗಾಗಿ ರಾಜ್ಯ ಸರ್ಕಾರವು ಬಳ್ಳಾರಿಯಲ್ಲಿ ವಿಧಿವಿಜ್ಞಾನ ವಿಜ್ಞಾನ ಪ್ರಯೋಗಾಲಯವನ್ನು ಸ್ಥಾಪಿಸುವುದಾಗಿ ಘೋಷಿಸಿದೆ.

ಕಲಬುರಗಿಯ ನಂತರ ನಿರ್ಮಾಣವಾಗುತ್ತಿರುವ ಈ ಪ್ರದೇಶದ ಎರಡನೇ ಕೇಂದ್ರ ಇದಾಗಿದೆ. ವಿಧಿ ವಿಜ್ಞಾನ ಪ್ರಯೋಗಾಲಯದ ಸ್ಥಾಪನೆಗಾಗಿ ಸರ್ಕಾರ 25 ಕೋಟಿ ರೂ.ಗಳನ್ನು ಮಂಜೂರು ಮಾಡಿದ್ದು, ಸದ್ಯಕ್ಕೆ ಎಫ್ಎಸ್ಎಲ್ ಕೇಂದ್ರವು ತಾತ್ಕಾಲಿಕ ರಚನೆಯಿಂದ ಕಾರ್ಯನಿರ್ವಹಿಸಲಿದೆ. ಹೊಸ ಕೇಂದ್ರವು ಕಲ್ಯಾಣ ಕರ್ನಾಟಕ ಪ್ರದೇಶದ ನಾಲ್ಕು ಜಿಲ್ಲೆಗಳಾದ ಬಳ್ಳಾರಿ, ವಿಜಯನಗರ, ಕೊಪ್ಪಳ ಮತ್ತು ರಾಯಚೂರಿನ ಅಪರಾಧ ಪ್ರಕರಣಗಳಿಗೆ ಸಂಬಂಧಿಸಿದಂತೆ ಕಾರ್ಯನಿರ್ವಹಿಸಲಿದೆ.

ದಾವಣಗೆರೆ ಅಥವಾ ಕಲಬುರಗಿ ಕೇಂದ್ರಗಳಿಗೆ ಅಪರಾಧ ಪ್ರಕರಣ ಸಂಬಂಧ ಸಾಕ್ಷ್ಯಗಳನ್ನು ಪರಿಶೀಲಿಸಲು ಕೊಂಡೊಯ್ಯುವಂತೆ ಪೊಲೀಸರಿಂದ ಒತ್ತಾಯಿಸಲಾಗುತ್ತಿತ್ತು. ಈಗ ಬಳ್ಳಾರಿಯಲ್ಲೇ ವಿಧಿ ವಿಜ್ಞಾನ ಪ್ರಯೋಗಾಲಯ ಸ್ಥಾಪನೆಯಾಗುತ್ತಿರುವುದರಿಂದ ಪೊಲೀಸರು ತಮ್ಮ ತನಿಖಾ ಕಾರ್ಯವನ್ನು ಮತ್ತಷ್ಟು ಶೀಘ್ರವಾಗಿ ಪೂರ್ಣಗೊಳಿಸಬಹುದಾಗಿದೆ.

ಬಳ್ಳಾರಿ ನಗರದಲ್ಲಿ ಶೀಘ್ರದಲ್ಲೇ ಹೊಸ ಕಟ್ಟಡದ ಸ್ಥಳವನ್ನು ಗುರುತಿಸಲಾಗುವುದು ಎಂದು ಜಿಲ್ಲಾ ಪೊಲೀಸರು ತಿಳಿಸಿದ್ದಾರೆ. ಎಫ್ಎಸ್ಎಲ್ ಕೇಂದ್ರದ ಸ್ಥಾಪನೆ ಅತ್ಯಗತ್ಯವಿದೆ. ಇದಕ್ಕಾಗಿ ಪೊಲೀಸ್ ಮತ್ತು ಗೃಹ ಸಚಿವಾಲಯದೊಂದಿಗೆ ಹಲವಾರು ವಿನಂತಿ ಮಾಡಲಾಗಿತ್ತು ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.

ರಾಜ್ಯವು ಈಗ ಬೆಂಗಳೂರು, ಮೈಸೂರು, ಕಲಬುರಗಿ, ಮಂಗಳೂರು, ದಾವಣಗೆರೆ, ಬೆಳಾಗಾವಿ ಮತ್ತು ಬಳ್ಳಾರಿಯಲ್ಲಿ ಆರು ಎಫ್‌ಎಸ್‌ಎಲ್ ಕೇಂದ್ರಗಳನ್ನು ಹೊಂದಿದೆ. ಬಳ್ಳಾರಿಯಲ್ಲಿನ ಎಫ್ಎಸ್ಎಲ್ ಕೇಂದ್ರವು ಮುಂದಿನ ಮೂರು ತಿಂಗಳಲ್ಲಿ ಕಾರ್ಯನಿರ್ವಹಿಸಲು ಪ್ರಾರಂಭಿಸುತ್ತದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT