ಸಾವನ್ನಪ್ಪಿದ ಆರ್'ಟಿಐ ಕಾರ್ಯಕರ್ತ ವೆಂಕಟೇಶ್ 
ರಾಜ್ಯ

ದುಷ್ಕರ್ಮಿಗಳಿಂದ ಮಾರಣಾಂತಿಕ ಹಲ್ಲೆಗೊಳಗಾಗಿದ್ದ ಆರ್'ಟಿಐ ಕಾರ್ಯಕರ್ತ ಸಾವು

ದುಷ್ಕರ್ಮಿಗಳಿಂದ ಮಾರಣಾಂತಿಕ ಹಲ್ಲೆಗೊಳಗಾಗಿದ್ದ ಆರ್'ಟಿಐ ಕಾರ್ಯಕರ್ತ ವೆಂಕಟೇಶ್ (50) ಅವರು ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಮೃತಪಟ್ಟಿದ್ದಾರೆ. 

ಬೆಂಗಳೂರು: ದುಷ್ಕರ್ಮಿಗಳಿಂದ ಮಾರಣಾಂತಿಕ ಹಲ್ಲೆಗೊಳಗಾಗಿದ್ದ ಆರ್'ಟಿಐ ಕಾರ್ಯಕರ್ತ ವೆಂಕಟೇಶ್ (50) ಅವರು ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಮೃತಪಟ್ಟಿದ್ದಾರೆ. 

ಬೆಂಗಳೂರು ದಕ್ಷಿಣ ತಾಲೂಕಿನ ತಾವರೆಕೆರೆ ಪಟ್ಟಣದ ನಿವಾಸಿ, ಆರ್ಟಿಐ ಕಾರ್ಯಕರ್ತ ವೆಂಕಟೇಶ್ ಎಂಬುವವರ ಮೇಲೆ ಕಳೆದ ಗುರುವಾರ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ನಡೆಸಿದ್ದರು. ಮಾರಕಾಸ್ತ್ರಗಳೊಂದಿಗೆ ದಾಳಿ ಮಾಡಿದ್ದ ದುಷ್ಕರ್ಮಿಗಳು ವೆಂಕಟೇಶ್ ಅವರ ಬಲಗೈ ಹಾಗೂ ಬಲ ಕಾಲನ್ನು ಕತ್ತರಿಸಿದ್ದರು, ಪರಾರಿಯಾಗಿದ್ದರು. 

ಹಲ್ಲೆಗೊಳಗಾಗಿದ್ದ ವೆಂಕಟೇಶ್ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದ್ದು. ಐಸಿಯುವಿನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆಂದು ತಿಳಿದುಬಂದಿದೆ. 

ಈ ನಡುವೆ ಪ್ರಕರಣ ಸಂಬಂಧ ಪೊಲೀಸರು ವಿಶೇಷ ತಂಡವನ್ನು ರಚನೆ ಮಾಡಿದ್ದು, ಆರೋಪಿಗಳಿಗಾಗಿ ತೀವ್ರ ಹುಡುಕಾಟ ಆರಂಭಿಸಿದ್ದಾರೆ. 

ಈಗಾಗಲೇ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲನೆ ನಡೆಸಿರುವ ಪೊಲೀಸರು ಆರೋಪಿಗಳ ಚಲನವಲನವನ್ನು ಪತ್ತೆಹಚ್ಚಿದ್ದಾರೆ. ಇದರಂತೆ ಹಲ್ಲೆ ನಡೆಸಿದವರ ಕುರಿತು ಮಾಹಿತಿ ಕಲೆಹಾಕಿದ್ದು, ಶೀಘ್ರದಲ್ಲೇ ಬಂಧನಕ್ಕೊಳಪಡಿಸಲಿದ್ದಾರೆಂದು ಹೇಳಲಾಗುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

Kabaddi World Cup 2025: ಭಾರತದ ಸಿಂಹಿಣಿಯರ ಮುಡಿಗೇರಿದ ವಿಶ್ವಕಪ್‌ ಕಿರೀಟ, ಸತತ 2ನೇ ಬಾರಿಗೆ ಪ್ರಶಸ್ತಿ ಗೆದ್ದ ಭಾರತ

ಬ್ರಾಹ್ಮಣನೊಬ್ಬ ತನ್ನ ಮಗಳನ್ನು ನನ್ನ ಮಗನಿಗೆ ದಾನ ಮಾಡುವವರೆಗೆ ಮೀಸಲಾತಿ ಮುಂದುವರೆಯಲಿ: IAS ಅಧಿಕಾರಿ ವಿವಾದಾತ್ಮಕ ಹೇಳಿಕೆ

ಆಫ್ರಿಕಾದಲ್ಲಿ ಜ್ವಾಲಾಮುಖಿ ಸ್ಫೋಟ: ಭಾರತದತ್ತ ಬರುತ್ತಿರುವ ಬೂದಿ ಹೊಗೆ, ವಿಮಾನಗಳ ಹಾರಾಟಕ್ಕೆ ಅಡ್ಡಿ

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಫೈಟ್: ಮಲ್ಲಿಕಾರ್ಜುನ ಖರ್ಗೆಗೆ ಪ್ರಾಫಿಟ್; CM ಹುದ್ದೆ ನೀಡುವಂತೆ ಸೋನಿಯಾಗೆ ದಲಿತ ನಾಯಕರ ಪತ್ರ!

SCROLL FOR NEXT