ಸಾವನ್ನಪ್ಪಿದ ಆರ್'ಟಿಐ ಕಾರ್ಯಕರ್ತ ವೆಂಕಟೇಶ್ 
ರಾಜ್ಯ

ದುಷ್ಕರ್ಮಿಗಳಿಂದ ಮಾರಣಾಂತಿಕ ಹಲ್ಲೆಗೊಳಗಾಗಿದ್ದ ಆರ್'ಟಿಐ ಕಾರ್ಯಕರ್ತ ಸಾವು

ದುಷ್ಕರ್ಮಿಗಳಿಂದ ಮಾರಣಾಂತಿಕ ಹಲ್ಲೆಗೊಳಗಾಗಿದ್ದ ಆರ್'ಟಿಐ ಕಾರ್ಯಕರ್ತ ವೆಂಕಟೇಶ್ (50) ಅವರು ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಮೃತಪಟ್ಟಿದ್ದಾರೆ. 

ಬೆಂಗಳೂರು: ದುಷ್ಕರ್ಮಿಗಳಿಂದ ಮಾರಣಾಂತಿಕ ಹಲ್ಲೆಗೊಳಗಾಗಿದ್ದ ಆರ್'ಟಿಐ ಕಾರ್ಯಕರ್ತ ವೆಂಕಟೇಶ್ (50) ಅವರು ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಮೃತಪಟ್ಟಿದ್ದಾರೆ. 

ಬೆಂಗಳೂರು ದಕ್ಷಿಣ ತಾಲೂಕಿನ ತಾವರೆಕೆರೆ ಪಟ್ಟಣದ ನಿವಾಸಿ, ಆರ್ಟಿಐ ಕಾರ್ಯಕರ್ತ ವೆಂಕಟೇಶ್ ಎಂಬುವವರ ಮೇಲೆ ಕಳೆದ ಗುರುವಾರ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ನಡೆಸಿದ್ದರು. ಮಾರಕಾಸ್ತ್ರಗಳೊಂದಿಗೆ ದಾಳಿ ಮಾಡಿದ್ದ ದುಷ್ಕರ್ಮಿಗಳು ವೆಂಕಟೇಶ್ ಅವರ ಬಲಗೈ ಹಾಗೂ ಬಲ ಕಾಲನ್ನು ಕತ್ತರಿಸಿದ್ದರು, ಪರಾರಿಯಾಗಿದ್ದರು. 

ಹಲ್ಲೆಗೊಳಗಾಗಿದ್ದ ವೆಂಕಟೇಶ್ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದ್ದು. ಐಸಿಯುವಿನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆಂದು ತಿಳಿದುಬಂದಿದೆ. 

ಈ ನಡುವೆ ಪ್ರಕರಣ ಸಂಬಂಧ ಪೊಲೀಸರು ವಿಶೇಷ ತಂಡವನ್ನು ರಚನೆ ಮಾಡಿದ್ದು, ಆರೋಪಿಗಳಿಗಾಗಿ ತೀವ್ರ ಹುಡುಕಾಟ ಆರಂಭಿಸಿದ್ದಾರೆ. 

ಈಗಾಗಲೇ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲನೆ ನಡೆಸಿರುವ ಪೊಲೀಸರು ಆರೋಪಿಗಳ ಚಲನವಲನವನ್ನು ಪತ್ತೆಹಚ್ಚಿದ್ದಾರೆ. ಇದರಂತೆ ಹಲ್ಲೆ ನಡೆಸಿದವರ ಕುರಿತು ಮಾಹಿತಿ ಕಲೆಹಾಕಿದ್ದು, ಶೀಘ್ರದಲ್ಲೇ ಬಂಧನಕ್ಕೊಳಪಡಿಸಲಿದ್ದಾರೆಂದು ಹೇಳಲಾಗುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT