ಇಂದ್ರಜಿತ್ ಲಂಕೇಶ್ 
ರಾಜ್ಯ

ದಲಿತರನ್ನು ಎತ್ತಿ ಕಟ್ಟಲು ಯತ್ನಿಸಿದ ಇಂದ್ರಜಿತ್‌ ವಿರುದ್ಧ ಕ್ರಮ ಕೈಗೊಳ್ಳಿ; ಗೃಹ ಸಚಿವರಿಗೆ ಟಿಜೆ ಅಬ್ರಾಹಂ ದೂರು

ನಿರ್ದೇಶಕ ಇಂದ್ರಜಿತ್ ಲಂಕೇಶ್ ವಿರುದ್ಧ ಸಾಮಾಜಿಕ ಕಾರ್ಯಕರ್ತ ಟಿ.ಜೆ. ಅಬ್ರಹಾಂ ಅವರು ಮಂಗಳವಾರ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರಿಗೆ ದೂರು ನೀಡಿದ್ದಾರೆ. 

ಬೆಂಗಳೂರು: ನಿರ್ದೇಶಕ ಇಂದ್ರಜಿತ್ ಲಂಕೇಶ್ ವಿರುದ್ಧ ಸಾಮಾಜಿಕ ಕಾರ್ಯಕರ್ತ ಟಿ.ಜೆ. ಅಬ್ರಹಾಂ ಅವರು ಮಂಗಳವಾರ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರಿಗೆ ದೂರು ನೀಡಿದ್ದಾರೆ. 

ವಿಧಾನಸೌಧದಲ್ಲಿ ಗೃಹಸಚಿವರನ್ನು ಭೇಟಿ ಮಾಡಿ ಇಂದ್ರಜಿತ್‌ ಲಂಕೇಶ್‌ ವಿರುದ್ಧ ದೂರು ನೀಡಿದ ಬಳಿಕ ಮಾತನಾಡಿದ ಅವರು, ಇಂದ್ರಜಿತ್ ಲಂಕೇಶ್ ದಲಿತ ಅನ್ನೋ ಪದವನ್ನು ಪದೇ ಪದೇ ಬಳಸಿದ್ದಾರೆ. ಜಾತಿಗಳ ಬಗ್ಗೆ ಉಲ್ಲೇಖಿಸಿ ಶತ್ರುತ್ವ ಬೆಳೆಯುವಂತಹ ಹೇಳಿಕೆ ನೀಡಿರುವ ಇಂದ್ರಜಿತ್ ಲಂಕೇಶ್ ವಿರುದ್ಧ ಕ್ರಿಮಿನಲ್ ಕೇಸು ದಾಖಲಿಸುವಂತೆ ದೂರಿನಲ್ಲಿ ಕೋರಿದ್ದಾರೆ.

ದಲಿತರಿಗೆ ಬೇರೆ ಸಮುದಾಯದ ಬಗ್ಗೆ ಕೋಪ ಬರುವಂತೆ ಇಂದ್ರಜಿತ್‌ ಲಂಕೇಶ್‌ ಮಾತನಾಡಿದ್ದಾರೆ. ದಲಿತರನ್ನು ಎತ್ತಿ ಕಟ್ಟಲು ಇಂದ್ರಜಿತ್‌ ಪ್ರಯತ್ನಪಟ್ಟಿದ್ದಾರೆ. ಇಂದ್ರಜಿತ್‌ ಲಂಕೇಶ್‌ ಹೇಳಿಕೆಯಿಂದ ಮೈಸೂರು ಪೋಲಿಸರ ಮಾನ - ಮರ್ಯಾದೆ ಹೋಗಿದೆ ಎಂದು ಆರೋಪಿಸಿದ್ದಾರೆ.

ಇಂದ್ರಜಿತ್ ವಿರುದ್ಧ ಮೈಸೂರು ಪೊಲೀಸರು ಮಾನನಷ್ಟ ಮೊಕದ್ದಮೆ ದಾಖಲಿಸಬೇಕು ಎಂದು ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಹಾಂ ಹೇಳಿದ್ದಾರೆ. ದಲಿತ ಸಪ್ಲೈಯರ್ ಮೇಲೆ ಹಲ್ಲೆ ಆಗಿದೆ ಎಂದು ಒತ್ತಿ ಹೇಳ್ತಾರೆ. ಪೊಲೀಸರು ಕಾಂಪ್ರಮೈಜ್‌ ಆಗಿದ್ದಾರೆ. ಮೈಸೂರಿನ ಪೊಲೀಸ್‌ ಸ್ಟೇಷನ್‌ಗಳು ಸೆಟಲ್‌ಮೆಂಟ್ ಸ್ಟೇಷನ್ ಎಂದು ಹೇಳಿದ್ದಾರೆ. ಇದರ ವಿರುದ್ಧ ತನಿಖೆ ನಡೆಸಿ ಎಂದು ದೂರು ನೀಡಿದ್ದೇನೆ ಎಂದು ಟಿಜೆ ಅಬ್ರಹಾಂ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navy ಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ! Video

Indre Nemdiyag Irbek: ಯೂ ಟ್ಯೂಬ್ ನಲ್ಲಿ ಧೂಳೆಬ್ಬಿಸುತ್ತಿರುವಂತೆ ವಿವಾದಕ್ಕೆ ಗುರಿಯಾದ Devil ಸಾಂಗ್! ಟ್ಯೂನ್ ಕದ್ದ ಆರೋಪ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

SCROLL FOR NEXT