ಸಂಗ್ರಹ ಚಿತ್ರ 
ರಾಜ್ಯ

ವಿಧಾನಸೌಧ ಆವರಣದಲ್ಲಿ ಮಾಧ್ಯಮ ನಿರ್ಬಂಧ ಆದೇಶ ವಾಪಸ್ ಪಡೆದ ರಾಜ್ಯ ಸರ್ಕಾರ

ವಿಧಾನಸೌಧದ ಆವರಣದಲ್ಲಿ ಮಾಧ್ಯಮ ನಿರ್ಬಂಧ ಎಂಬ ಆದೇಶವನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಾಪಸ್ ಪಡೆದಿದ್ದಾರೆ. 

ಬೆಂಗಳೂರು: ವಿಧಾನಸೌಧದ ಆವರಣದಲ್ಲಿ ಮಾಧ್ಯಮ ನಿರ್ಬಂಧ ಎಂಬ ಆದೇಶವನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಾಪಸ್ ಪಡೆದಿದ್ದಾರೆ. 

ವಿಧಾನಸೌಧದ ಕಾರಿಡಾರ್‌ಗಳಲ್ಲಿ ಪತ್ರಿಕಾ ಛಾಯಾಗ್ರಾಹಕರು ಛಾಯಾಗ್ರಹಣ ಮತ್ತು ವಿದ್ಯುನ್ಮಾನ ಮಾಧ್ಯಮಗಳು ವಿಡಿಯೊ ಚಿತ್ರೀಕರಣ ನಡೆಸುವುದನ್ನು ನಿರ್ಬಂಧಿಸಿ ಈ ಹಿಂದೆ ಸುತ್ತೋಲೆ ಹೊರಡಿಸಲಾಗಿತ್ತು.

ಕಾರಿಡಾರ್‌ಗಳಲ್ಲಿ ವಿಡಿಯೊ ಚಿತ್ರೀಕರಣ ಮತ್ತು ಪತ್ರಿಕಾ ಛಾಯಾಗ್ರಹಣ ಮಾಡುತ್ತಿದ್ದು, ಇದರಿಂದ ಹಲವಾರು ಬಾರಿ ಗಣ್ಯ ವ್ಯಕ್ತಿಗಳ ಸುಗಮ ಚಲನವಲನಕ್ಕೆ ಅಡ್ಡಿ ಉಂಟಾಗುತ್ತಿದೆ ಎಂದು ಸುತ್ತೋಲೆಯಲ್ಲಿ ಸಮರ್ಥನೆ ನೀಡಲಾಗಿತ್ತು.

ಸುಗಮ ಚಲನೆ ಮತ್ತು ಭದ್ರತೆಯ ಹಿತದೃಷ್ಟಿಯಿಂದ ಮುಖ್ಯಮಂತ್ರಿಯವರು ಮತ್ತು ಇತರ ಸಚಿವರಿಂದ ಹೇಳಿಕೆ ಪಡೆಯಲು ವಿಧಾನಸೌಧದ ಕೆಂಗಲ್ ದ್ವಾರದ ಬಳಿ ಮಾತ್ರ ಅವಕಾಶ ಮಾಡಿಕೊಡಲಾಗಿತ್ತು. ಸಚಿವಾಲಯದ ಈ ಕ್ರಮಕ್ಕೆ ವ್ಯಾಪಕ ಟೀಕೆ ವ್ಯಕ್ತವಾಗಿತ್ತು.

ಈ ಆದೇಶ ಹಿಂಪಡೆಯದಿದ್ದರೆ ಎಲ್ಲಾ ಸರ್ಕಾರಿ ಕಾರ್ಯಕ್ರಮ ಹಾಗೂ ಮುಖ್ಯಮಂತ್ರಿಗಳ ಕಾರ್ಯಕ್ರಮ ಬಾಯ್ಕಾಟ್ ಮಾಡಲು ಮಾಧ್ಯಮ ಪ್ರತಿನಿಧಿಗಳು ತೀರ್ಮಾನಿಸಿದ್ದರು. ಆ ಹಿನ್ನೆಲೆಯಲ್ಲಿ, ಇದೀಗ ವಿಧಾನಸೌಧದ ಕಾರಿಡಾರ್​ನಲ್ಲಿ ಮಾಧ್ಯಮ ನಿರ್ಬಂಧ ಆದೇಶ ಹಿಂಪಡೆಯಲು ಮುಖ್ಯಮಂತ್ರಿ ಸೂಚಿಸಿದ್ದಾರೆಂದು ತಿಳಿದುಬಂದಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?