ಛಾವಣಿ ಕುಸಿತ 
ರಾಜ್ಯ

ಬೀದರ್: ಭಾರಿ ಮಳೆಗೆ ಮನೆ ಕುಸಿತ, ಮಹಿಳೆ ಸಾವು

ಬೀದರ್ ನಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಬೀದರ್ ನಲ್ಲಿ ಮನೆಯ ಛಾವಣಿ ಕುಸಿತವಾಗಿದ್ದು, ದುರ್ಘಟನೆಯಲ್ಲಿ ಓರ್ವ ಮಹಿಳೆ ಸಾವನ್ನಪ್ಪಿದ್ದಾರೆ.

ಬೀದರ್: ಬೀದರ್ ನಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಬೀದರ್ ನಲ್ಲಿ ಮನೆಯ ಛಾವಣಿ ಕುಸಿತವಾಗಿದ್ದು,. ದುರ್ಘಟನೆಯಲ್ಲಿ ಓರ್ವ ಮಹಿಳೆ ಸಾವನ್ನಪ್ಪಿದ್ದಾರೆ.

ಮಂಗಳವಾರ ತಡರಾತ್ರಿ ಬೀದರ್ ಜಿಲ್ಲೆಯ ಹುಮ್ನಾಬಾದ್ ತಾಲ್ಲೂಕಿನ ಚಿಂಚೋಳಿ ಗ್ರಾಮದಲ್ಲಿ ಛಾವಣಿಯ ಕುಸಿತ ಸಂಭವಿಸಿದ್ದು, ಘಟನೆಯಲ್ಲಿ ಓರ್ವ ಮಹಿಳೆ ಸಾವನ್ನಪ್ಪಿದ್ದಾರೆ. ಅಂತೆಯೇ ಘಟನೆಯಲ್ಲಿ 3 ಮಂದಿ ಗಾಯಗೊಂಡಿದ್ದು, ಮೃತರನ್ನು ವೈಜಿನಾಥ್ ವಡ್ಡಾರ್ ಅವರ ಪತ್ನಿ ಪಾರ್ವತಿ (35 ವರ್ಷ) ಎಂದು  ಗುರುತಿಸಲಾಗಿದೆ.

ಕಳೆದ 3 ದಿನಗಳಿಂದ ಗ್ರಾಮದಲ್ಲಿ ನಿರಂತರ ಮಳೆಯಾಗುತ್ತಿದ್ದು, ಮಳೆಯಿಂದಾಗಿ ಮನೆಯ ಮೇಲ್ಛಾವಣಿ ಕುಸಿದಿದೆ. ಛಾವಣಿ ಕುಸಿತದ ವೇಳೆ ಮನೆಯಲ್ಲಿ ಪತಿ ವೈಜಿನಾಥ್ ವಡ್ಡಾರ್, ಮೃತ ಪಾರ್ವತಿ, ಮಕ್ಕಳಾದ ಅಕ್ಷರಾ (7) ಮತ್ತು ಅರ್ಚನಾ (4) ಇದ್ದರು. ಈ ಪೈಕಿ ಪಾರ್ವತಿ ಅವರು ಸಾವನ್ನಪ್ಪಿದ್ದು, ಮೂವರು  ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಇಲ್ಲಿನ ಬ್ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
 
ಸ್ಥಳಕ್ಕೆ ಹುಮ್ನಾಬಾದ್ ತಹಶೀಲ್ದಾರ್ ನಾಗಯ್ಯ ಹಿರೆಮಠ್, ಹನುಮಾಬಾದ್ ತಾಲ್ಲೂಕು ಪಂಚಾಯತ್ ಗೋವಿಂದ್ ಮತ್ತು ಪಿಎಸ್ಐ ರವಿಕುಮಾರ್ ಭೇಟಿ ನೀಡಿದರು. ಅಂತೆಯೇ ಮಾನದಂಡಗಳ ಪ್ರಕಾರ ಪರಿಹಾರವನ್ನು ನೀಡಲಾಗುತ್ತದೆ ಎಂದು ತಹಶೀಲ್ದಾರ್ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT