ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆಯ ಮಾತುಗಳು ಜೋರಾಗಿ ಕೇಳಿಬರುತ್ತಿದ್ದು, ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ಮುಖ್ಯಮಂತ್ರಿ ಪದತ್ಯಾಗದ ಊಹಾಪೋಹಗಳ ಮಧ್ಯೆ ಗುರುವಾರ ಮುಖ್ಯಮಂತ್ರಿಗಳು ಧನ್ವಂತರಿ ಹೋಮದಲ್ಲಿ ಭಾಗಿಯಾಗಿದ್ದಾರೆ.
ಬೆಂಗಳೂರಿನ ಕಾಚರಕನಹಳ್ಳಿಯಲ್ಲಿರುವ ಕೋದಂಡರಾಮ ಸ್ವಾಮಿ ದೇವಸ್ಥಾನದಲ್ಲಿ ವಿಶ್ವ ಹಿಂದೂ ಪರಿಷತ್ ಏರ್ಪಡಿಸಿರುವ ಧನ್ವಂತರಿ ಹೋಮದಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ಭಾಗಿಯಾಗಿದ್ದಾರೆ. ಆರಂಭದಲ್ಲಿ ಗೋಪೂಜೆಯಲ್ಲಿ ಭಾಗಿಯಾದ ಮುಖ್ಯಮಂತ್ರಿಗಳು ಧನ್ವಂತರಿ ಪೂಜೆಯಲ್ಲಿ ಭಾಗಿಯಾಗಿದ್ದಾರೆ. ಅವರ ಜೊತೆಗೆ ಹಲವು ಮಠಾಧೀಶರು, ಶಾಸಕರು ಸಹ ಇದ್ದಾರೆ.
ಕೊರೋನಾ ನಿಯಂತ್ರಣಕ್ಕಾಗಿ ಮತ್ತು ಲೋಕ ಕಲ್ಯಾಣಕ್ಕಾಗಿ ಈ ಹೋಮವನ್ನು ನಡೆಸಲಾಗಿದೆ ಎಂದು ಹೇಳಲಾಗುತ್ತಿದೆ.