ರಾಜ್ಯ

ರಾಜ್ಯದಲ್ಲಿ 'ಸಪ್ತಪದಿ' ಸಾಮೂಹಿಕ ವಿವಾಹ ಕಾರ್ಯಕ್ರಮ ಪುನಾರಂಭ: ಕೋಟ ಶ್ರೀನಿವಾಸ ಪೂಜಾರಿ

Shilpa D

ಶಿವಮೊಗ್ಗ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಸಪ್ತಪದಿ ಸಾಮೂಹಿಕ ವಿವಾಹ ಕಾರ್ಯಕ್ರಮ ಮತ್ತೆ ಪುನಾರಂಭಗೊಳ್ಳಲಿದೆ ಎಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

ಶಿವಮೊಗ್ಗದ ಶ್ರಿ ಕೋಟೆ ಆಂಜನೇಯ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರಳ ವಿವಾಹಗಳನ್ನು ಪ್ರೋತ್ಸಾಹಿಸಲು ಸಪ್ತಪದಿ ಸಾಮೂಹಿಕ ಕಾರ್ಯಕ್ರಮ ಜಾರಿಗೆ ತರಲಾಗಿದೆ ಎಂದು ಹೇಳಿದರು, ಇದಕ್ಕಾಗಿ ರಾಜ್ಯದ 100 ದೇವಾಲಯಗಳನ್ನು ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದರು.

ಕೋವಿಡ್ ಸಾಂಕ್ರಾಮಿಕದಿಂದಾಗಿ ಕಾರ್ಯಕ್ರಮ ರದ್ದುಗೊಳಿಸಲಾಗಿತ್ತು. ಸಾಮೂಹಿಕ ವಿವಾಹಕ್ಕಾಗಿ ಮೂಹೂರ್ತ ನಿಗದಿ ಪಡಿಸಿ ಎಲ್ಲಾ ಸೂಚನೆಗಳನ್ನು ಇಲಾಖೆಯ ಅಧಿಕಾರಿಗಳು ನೀಡಲಿದ್ದಾರೆ ಎಂದು ತಿಳಿಸಿದ್ದಾರೆ.

SCROLL FOR NEXT