ಸಂಗ್ರಹ ಚಿತ್ರ 
ರಾಜ್ಯ

ಹಂತ ಹಂತವಾಗಿ ರಾಜ್ಯದಲ್ಲಿ ಭೌತಿಕ ತರಗತಿಗಳ ಆರಂಭ, ಮುಂದಿನ ವಾರ ಅಂತಿಮ ನಿರ್ಧಾರ: ಸಚಿವ ಸುರೇಶ್ ಕುಮಾರ್

ಆಫ್'ಲೈನ್ ತರಗತಿಗಳ ಆರಂಭಿಸುವಂತೆ ಆಗ್ರಹಗಳು ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಈ ಸಂಬಂಧ ಕಾರ್ಯಪಡೆ ವರದಿ ಬಂದ ಕೂಡಲೇ ಪರಿಶೀಲನೆ ನಡೆಸಿ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಗುರುವಾರ ಹೇಳಿದ್ದಾರೆ. 

ಬೆಂಗಳೂರು: ಆಫ್'ಲೈನ್ ತರಗತಿಗಳ ಆರಂಭಿಸುವಂತೆ ಆಗ್ರಹಗಳು ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಈ ಸಂಬಂಧ ಕಾರ್ಯಪಡೆ ವರದಿ ಬಂದ ಕೂಡಲೇ ಪರಿಶೀಲನೆ ನಡೆಸಿ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಗುರುವಾರ ಹೇಳಿದ್ದಾರೆ. 

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಶಾಲೆ, ಪಿಯು ಕಾಲೇಜುಗಳನ್ನು ಯಾವಾಗಿನಿಂದ ಆರಂಭಿಸಬೇಕೆಂಬ ಬಗ್ಗೆ ಅನ್ಬುಕುಮಾರ್ ನೇತೃತ್ವದ ಕಾರ್ಯಪಡೆ ಸೋಮವಾರ ಇಲ್ಲವೆ ಮಂಗಳವಾರ ಸರ್ಕಾರಕ್ಕೆ ವರದಿ ನೀಡಲಿದೆ. ವರದಿ ಕೈ ಸೇರಿದ ಕೂಡಲೇ ಪರಿಶೀಲಿಸಿ ಆರೋಗ್ಯ ಇಲಾಖೆಯ ಅಭಿಪ್ರಾಯವನ್ನೂ ಪಡೆದು ಶಾಲಾರಂಭದ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. 

ಮೊದಲ ಹಂತದಲ್ಲಿ 9,10ನೇ ತರಗತಿ ಮತ್ತು ಪ್ರಥಮ ಮತ್ತು ದ್ವಿತೀಯ ಪಿಯುಸಿ ತರಗತಿ ಮಕ್ಕಳಿಗೆ ಭೌತಿಕ ತರಗತಿ ಆರಂಭಿಸಲು ಚರ್ಚೆ ನಡೆಯುತ್ತಿದೆ. ಆದಷ್ಟು ಬೇಗ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಕ್ಷಣಾ, ಭದ್ರತಾ ಒಪ್ಪಂದ ಬಲವರ್ಧನೆ: ಭಾರತ- ಜರ್ಮನಿ ಮಹತ್ವದ ಕ್ರಮಗಳ ಘೋಷಣೆ!

ಸ್ವಾತಂತ್ರ್ಯ ಬಳಿಕ ಇದೇ ಮೊದಲು: ಮಕರ ಸಂಕ್ರಾಂತಿಗೆ ಮತ್ತೊಂದು ಹೊಸ 'ದಾಖಲೆ'ಗೆ ಸಜ್ಜಾದ ಪ್ರಧಾನಿ ಮೋದಿ!

'ಅಜ್ಮೀರ್' ದರ್ಗಾ ಶಿವ ದೇಗುಲವಾಗಿತ್ತು: ಕೋರ್ಟ್ ಮೆಟ್ಟಿಲೇರಿದ ವಿವಾದ!

'ವಿಬಿ-ಜಿ-ರಾಮ್' ಕಾಯ್ದೆ ವಿರುದ್ಧ ಕಾನೂನು ಸಮರ: ವಿಶೇಷ ಅಧಿವೇಶನ ಕರೆದು ಚರ್ಚೆ- ಸಿಎಂ ಸಿದ್ದರಾಮಯ್ಯ

ಟ್ರಂಪ್ ಗೆ 'ಮರೆಯಲಾಗದ ಪಾಠ' ಕಲಿಸುತ್ತೇವೆ: ಇರಾನ್ ಸಂಸತ್ ಸ್ಪೀಕರ್ ಖಡಕ್ ವಾರ್ನಿಂಗ್!

SCROLL FOR NEXT