ಟ್ವಿಟರ್ ಇಂಡಿಯಾ ಎಂಡಿ ಮನಿಶ್ ಮಹೇಶ್ವರಿ 
ರಾಜ್ಯ

ಯುಪಿ ಪೊಲೀಸರು ನೀಡಿದ್ದ ನೋಟಿಸ್ ರದ್ದುಗೊಳಿಸಿದ ಹೈಕೋರ್ಟ್: ಟ್ವಿಟರ್ ಇಂಡಿಯಾ ಎಂಡಿಗೆ ನಿರಾಳ

ಟ್ವಿಟರ್ ನಲ್ಲಿ  ಕೋಮು ಸೌಹಾರ್ದತೆಗೆ ಭಂಗ ತರುವಂತಹ ಸೂಕ್ಷ್ಮ ವಿಡಿಯೋವೊಂದರ ಅಳವಡಿಕೆಗೆ ಸಂಬಂಧಿಸಿದಂತೆ ಉತ್ತರ ಪ್ರದೇಶ ರಾಜ್ಯದ ಗಾಜಿಯಾಬಾದ್ ನ ಲೊನಿ ಬಾರ್ಡರ್ ಪೊಲೀಸರು ಸಿಆರ್ ಪಿಸಿ ಸೆಕ್ಷನ್ 41 -ಎ ಅಡಿಯಲ್ಲಿ ನೀಡಿದ್ದ ನೋಟಿಸ್ ನ್ನು ರಾಜ್ಯ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ.

ಬೆಂಗಳೂರು: ಟ್ವಿಟರ್ ನಲ್ಲಿ  ಕೋಮು ಸೌಹಾರ್ದತೆಗೆ ಭಂಗ ತರುವಂತಹ ಸೂಕ್ಷ್ಮ ವಿಡಿಯೋವೊಂದರ ಅಳವಡಿಕೆಗೆ ಸಂಬಂಧಿಸಿದಂತೆ ಉತ್ತರ ಪ್ರದೇಶ ರಾಜ್ಯದ ಗಾಜಿಯಾಬಾದ್ನ ಲೊನಿ ಬಾರ್ಡರ್ ಪೊಲೀಸರು ಸಿಆರ್ ಪಿಸಿ ಸೆಕ್ಷನ್ 41 -ಎ ಅಡಿಯಲ್ಲಿ ನೀಡಿದ್ದ ನೋಟಿಸ್ನ್ನು ರಾಜ್ಯ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದ್ದು, ಟ್ವಿಟರ್ ಇಂಡಿಯಾ ವ್ಯವಸ್ಥಾಪಕ ನಿರ್ದೇಶಕ  ಮನೀಶ್ ಮಹೇಶ್ವರಿ ನಿರಾಳರಾಗಿದ್ದಾರೆ.

ಅರ್ಜಿದಾರ ಮನೀಶ್ ಮಹೇಶ್ವರಿ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶ ಜಿ. ನರೇಂದ್ರ, ಅರ್ಜಿದಾರನು ತಾನು ಆರೋಪಿಯಲ್ಲ ಮತ್ತು ತಮ್ಮಗೆ ನೀಡಿರುವ ನೋಟಿಸ್  ದುರುದ್ದೇಶದಿಂದ ಕೂಡಿದೆ ಎಂದು ಹೇಳಿದ್ದಾರೆ. ಮಹೇಶ್ವರಿ ಸಲ್ಲಿಸಿದ ರಿಟ್ ಅರ್ಜಿಯನ್ನು ಸಮರ್ಥನೀಯ ಎಂದು ನ್ಯಾಯಾಲಯ ಗಮನಿಸಿದೆ. ಸಿಆರ್ ಪಿಸಿಯ ಸೆಕ್ಷನ್ 160 ರ ಅಡಿಯಲ್ಲಿ ಪ್ರಶ್ನಾರ್ಹ ನೋಟಿಸ್ ಅನ್ನು ನೋಟಿಸ್ ಎಂದು ಪರಿಗಣಿಸಿ, ತನಿಖಾಧಿಕಾರಿಗಳು ಬಯಸಿದರೆ ಅರ್ಜಿದಾರರ ಹೇಳಿಕೆಯನ್ನು ವಾಸ್ತವಿಕವಾಗಿ ದಾಖಲಿಸಬಹುದು ಎಂದು ಹೇಳಿದರು.

ಎಫ್ ಐಆರ್ ನಲ್ಲಿ ತಮ್ಮ ಹೆಸರಿಲ್ಲ ಮತ್ತು ಟ್ವಿಟರ್ ಇಂಕ್ ಒಡೆತನದ ಟ್ವಿಟರ್‌ನ ಪ್ಲಾಟ್‌ಫಾರ್ಮ್‌ನಲ್ಲಿ ಅಪ್‌ಲೋಡ್ ಮಾಡಲಾದ ವಿಷಯಗಳ ಮೇಲೆ ಟ್ವಿಟರ್ ಇಂಡಿಯಾ ನಿಯಂತ್ರಣವಿಲ್ಲ ಎಂಬ ಆಧಾರದ ಮೇಲೆ ಮನೀಶ್ ಮಹೇಶ್ವರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.

ಇದಕ್ಕೆ ಪ್ರತಿಕ್ರಿಯೆಯಾಗಿ ಯುಪಿ ಪೊಲೀಸರು ತಮ್ಮ ಕ್ರಮವನ್ನು ಸಮರ್ಥಿಸಿಕೊಂಡರು ಮತ್ತು ಯುಪಿ ಪೊಲೀಸರು ನೋಟಿಸ್ ನೀಡಿರುವುದರಿಂದ ಅರ್ಜಿದಾರರು ಅಲಹಾಬಾದ್‌ನ ಹೈಕೋರ್ಟ್‌ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಹೈಕೋರ್ಟ್‌ನ ಪ್ರಾದೇಶಿಕ ನ್ಯಾಯವ್ಯಾಪ್ತಿಯನ್ನು ಗಮನಸೆಳೆದರು.             

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

"ಸ್ವತಂತ್ರ ಭಾರತದ ಅತಿದೊಡ್ಡ ಸುಧಾರಣೆ"- GST ಸುಧಾರಣೆ ಶ್ಲಾಘಿಸಿದ ಪ್ರಧಾನಿ ಮೋದಿ

ಜಿಎಸ್‌ಟಿ ಕಡಿತ ಲಾಭ ಗ್ರಾಹಕರಿಗೆ ವರ್ಗಾಯಿಸುವುದಾಗಿ ಮುಖೇಶ್ ಅಂಬಾನಿ ಭರವಸೆ

ಕನಕಪುರದಲ್ಲಿ ಮೆಡಿಕಲ್ ಕಾಲೇಜ್; ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆಗೆ ಸಂಪುಟ ಅಸ್ತು

ADR report: ದೇಶದಲ್ಲಿ ಶೇ. 47 ರಷ್ಟು ಸಚಿವರ ಮೇಲೆ ಕ್ರಿಮಿನಲ್ ಆರೋಪ, ಬಿಲಿಯನೇರ್ ಪೈಕಿ ಕರ್ನಾಟಕಕ್ಕೆ ಮೊದಲ ಸ್ಥಾನ, ಡಿಕೆಶಿ ಎಷ್ಟನೇ ಶ್ರೀಮಂತ?

ಉಕ್ರೇನ್‌ನಲ್ಲಿ ಶಾಂತಿ ನೆಲೆಸಲು ಭಾರತದ ಮೇಲಿನ 'ಸುಂಕಾಸ್ತ್ರ' ನಿರ್ಣಾಯಕ: US ಸುಪ್ರೀಂ ಕೋರ್ಟ್‌ಗೆ ಡೊನಾಲ್ಡ್ ಟ್ರಂಪ್ ಮಾಹಿತಿ

SCROLL FOR NEXT