ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರು: ಸೈಲೆಂಟ್ ಸುನೀಲ್ ಸೇರಿ 58 ರೌಡಿ ಶೀಟರ್ ಮನೆಗಳ ಮೇಲೆ ಸಿಸಿಬಿ ದಾಳಿ!

ಸಿಲಿಕಾನ್ ಸಿಟಿಯಲ್ಲಿ ರೌಡಿಗಳ ಕಾಳಗವನ್ನು ಹತ್ತಿಕ್ಕಲು ಮುಂದಾಗಿರುವ ಸಿಸಿಬಿ ಪೊಲೀಸರು ಶುಕ್ರವಾರ ಬೆಳ್ಳಂಬೆಳಿಗ್ಗೆ ರೌಡಿ ಸೈಲೆಂಟ್ ಸುನೀಲ್ ಸೇರಿದಂತೆ 58 ರೌಡಿಗಳ ಮನೆಗಳ ಮೇಲೆ ದಾಳಿ ನಡೆಸಿದ್ದಾರೆ. 

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ರೌಡಿಗಳ ಕಾಳಗವನ್ನು ಹತ್ತಿಕ್ಕಲು ಮುಂದಾಗಿರುವ ಸಿಸಿಬಿ ಪೊಲೀಸರು ಶುಕ್ರವಾರ ಬೆಳ್ಳಂಬೆಳಿಗ್ಗೆ ರೌಡಿ ಸೈಲೆಂಟ್ ಸುನೀಲ್ ಸೇರಿದಂತೆ 58 ರೌಡಿಗಳ ಮನೆಗಳ ಮೇಲೆ ದಾಳಿ ನಡೆಸಿದ್ದಾರೆ. 

ದಾಳಿ ವೇಳೆ 28 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಸಿಸಿಬಿ ಪೊಲೀಸರು ಮಾಹಿತಿ ನೀಡಿದ್ದಾರೆ. 

ಇತ್ತೀಚೆಗಷ್ಟೇ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಹಾಗೂ ಹಲವು ರೌಡಿಗಳ ಮನೆ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ, ಮಾರಕಾಸ್ತ್ರ ಹಾಗೂ ಗಾಂಜಾ ಜಪ್ತಿ ಮಾಡಿದ್ದರು. 

ರೌಡಿಗಳಾದ ವಿಲ್ಸನ್ ಗಾರ್ಡನ್ ನಾಗ, ಸೈಕಲ್ ರವಿ, ಸೈಲೆಂಟ್ ಸುನೀಲ್, ಜೆಸಿಪಿ ನಾರಾಯಣ್ ಹಾಗೂ ಹಲವು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುತ್ತಿದ್ದರು. ಅವರಲ್ಲಿ ಕೆಲವರು ನ್ಯಾಯಾಂಗ ಬಂಧನದಲ್ಲಿದ್ದು, ಜೈಲಿನಿಂದಲೇ ಸಂಚು ರೂಪಿಸಿ ಸಹಚರರ ಮೂಲಕ ಅಪರಾಧ ಕೃತ್ಯ ನಡೆಸುತ್ತಿದ್ದರು. ಈ ಹಿನ್ನೆಲೆಯಲ್ಲಿ ನಾಲ್ವರು ಪ್ರಮುಖ ರೌಡಿಗಳು ಹಾಗೂ ಅವರ ಸಹಚರರ ಪಟ್ಟಿ ಮಾಡಲಾಗಿತ್ತು. 

ಅದರನ್ವಯ 58 ರೌಡಿಗಳ ಮನೆಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ಕಲಾಸಿಪಾಳ್ಯ ರೌಟಿ ಪಟ್ಟಿಯಲ್ಲಿ ಹೆಸರಿದ್ದ ನಾಗ್'ನ ಮನೆಯಲ್ಲಿ ರೂ.2ಲಕ್ಷ ನಗದು ಹಾಗೂ ಡ್ರ್ಯಾಗರ್ ಗಳು ಪತ್ತೆಯಾಗಿದ್ದು, ಅವುಗಳನ್ನು ಜಪ್ತಿ ಮಾಡಲಾಗಿದೆ ಎಂದು ತಿಳಿದುಬಂದಿದೆ. 

ಇನ್ನು ಸೈಕಲ್ ರವಿ ಮನೆಯಲ್ಲಿ ಕೋಟ್ಯಾಂತರ ರೂಪಾಯಿ ಮೌಲ್ಯದ ಆಸ್ತಿ ದಾಖಳೆಗಳು ಪತ್ತೆಯಾಗಿವೆ ಎಂದು ಹೇಳಲಾಗುತ್ತಿದೆ. 

ಇನ್ನು ವಿಲ್ಸನ್ ಗಾರ್ಡನ್ ಠಾಣೆ ರೌಡಿಶೀಟರ್ ಶಾನುವಾಸ್ ಮನೆ, ಕಚೇರಿಯಲ್ಲಿ ಏನೂ ಸಿಕ್ಕಿಲ್ಲ. ಆದರೆ ಆತನ ಕಚೇರಿಯಲ್ಲಿ 254 ಆಧಾರ್ ಕಾರ್ಡ್'ಗಳು ಮಾರಕಾಸ್ತ್ರಗಳು ಸಿಕ್ಕಿವೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

"ಭಾರತೀಯರು ಬಗ್ಗದೇ ಹೋದರೆ...": ಹತಾಶಗೊಂಡ ಟ್ರಂಪ್ ಸಲಹೆಗಾರನಿಂದ ನೇರಾನೇರ ಬೆದರಿಕೆ!

SCO summit: ಟ್ರಂಪ್ ಗೆ ಸೆಡ್ಡು; ಚೀನಾ, ರಷ್ಯಾ ಅಧ್ಯಕ್ಷರೊಂದಿಗೆ ದ್ವಿಪಕ್ಷೀಯ ಸಭೆಗೆ ಪ್ರಧಾನಿ ಮೋದಿ ಸಜ್ಜು; ದಿಗ್ಗಜರ ಸಮಾಗಮದ ಮೇಲೆ ಜಗತ್ತಿನ ಕಣ್ಣು!

BJP, RSS ನಡುವೆ ಭಿನ್ನಾಭಿಪ್ರಾಯ ಇರಬಹುದು, ಆದರೆ ಸಂಘರ್ಷ ಇಲ್ಲ: ಮೋಹನ್ ಭಾಗವತ್

ಧರ್ಮಸ್ಥಳ ಪ್ರಕರಣ: ದೂರುದಾರನ ಮಂಪರು ಪರೀಕ್ಷೆಗೆ ಸೌಜನ್ಯ ತಾಯಿ ಒತ್ತಾಯ; ಹೊಸ ದೂರು ದಾಖಲು!

News headlines 28-08-2025 | ಚಾಮುಂಡಿ ದೇವರು ಹಿಂದೂಗಳ ಆಸ್ತಿ ಅಲ್ಲ- DK Shivakumar; ಪ್ರಮೋದಾ ದೇವಿ ಒಡೆಯರ್ ಪ್ರತಿಕ್ರಿಯೆ ಏನು..?; ಬೀದರ್‌: ಭಾರಿ ಮಳೆ, ಹಲವು ಸೇತುವೆ ಬಂದ್; ಕಾಂಗ್ರೆಸ್ ಶಾಸಕ ವಿರೇಂದ್ರ ಪಪ್ಪಿ ಮತ್ತೆ ED ಕಸ್ಟಡಿಗೆ

SCROLL FOR NEXT