ಗೋವಿಂದ್ ಕಾರಜೋಳ 
ರಾಜ್ಯ

ಅತಿವೃಷ್ಠಿ ಪ್ರದೇಶಗಳಿಗೆ ಡಿಸಿಎಂ ಗೋವಿಂದ ಕಾರಜೋಳ ಭೇಟಿ

ಬಾಗಲಕೋಟೆ ಜಿಲ್ಲೆಯಲ್ಲಿ ಧಾರಾಕಾರವಾಗಿ ಸುರಿದ ಮಳೆಯಿಂದಾಗಿ ಅತಿವೃಷ್ಠಿ ಪೀಡಿತ ಮುಧೋಳ್ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಹೆಚ್ಚಿನ ಹಾನಿಯಾಗಿದೆ.

ಬಾಗಲಕೋಟೆ: ಬಾಗಲಕೋಟೆ ಜಿಲ್ಲೆಯಲ್ಲಿ ಧಾರಾಕಾರವಾಗಿ ಸುರಿದ ಮಳೆಯಿಂದಾಗಿ ಅತಿವೃಷ್ಠಿ ಪೀಡಿತ ಮುಧೋಳ್ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಹೆಚ್ಚಿನ ಹಾನಿಯಾಗಿದೆ.

ಮಿರ್ಜಿ, ಆಲಗುಂಡಿ, ಬುದ್ನಿ ಬಿ.ಕೆ, ಮಾಚಕನೂರು, ಅಂತಾಪುರ  ಒಂಟಿಗೋಡಿ, ಉತ್ತೂರು, ಸೇರಿದಂತೆ ವಿವಿಧ  ಪ್ರದೇಶಗಳಿಗೆ ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ಶನಿವಾರ ಭೇಟಿ ನೀಡಿ, ಮನೆ ಹಾನಿ, ಬೆಳೆ ಹಾನಿ, ರಸ್ತೆ, ಸೇತುವೆಗಳ ಸೇರಿದಂತೆ ಸಾರ್ವಜನಿಕ ಆಸ್ತಿ ಪಾಸ್ತಿ ಹಾನಿಯನ್ನು ಪರಿಶೀಲಿಸಿ ಬಳಿಕ ಸಂತ್ರಸ್ತರ ಅಹವಾಲು ಸ್ವೀಕರಿಸಿದರು.

ನಂತರ ಮಾತನಾಡಿದ ಅವರು, ಸಂತ್ರಸ್ತರಿಗೆ  ಕೂಡಲೇ ಕಾಳಜಿ ಕೇಂದ್ರಗಳನ್ನು ಸ್ಥಾಪಿಸಿ, ಆರೈಕೆ ಮಾಡಬೇಕು. ಅತಿವೃಷ್ಠಿಯಿಂದ ಸಂಭವಿಸಬಹುದಾದ ಅನಾಹುತಗಳ ಬಗ್ಗೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸಬೇಕು. ಸುರಕ್ಷಿತ ಸ್ಥಳದಲ್ಲಿರುವಂತೆ ಮನವರಿಕೆ ಮಾಡಬೇಕು. ರಸ್ತೆ, ಸೇತುವೆಗಳ ದುರಸ್ಥಿಯಾದ ಕಡೆ ಸಾರ್ವಜನಿಕರ ಸಂಚಾರ ನಿಷೇಧಿಸಿ ಸಂಭವಿಸಬಹುದಾದ ಅವಘಡ ತಪ್ಪಿಸಬೇಕು. ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಕೇಂದ್ರಸ್ಥಾನದಲ್ಲಿದ್ದು, ಸಂತ್ರಸ್ತರಿಗೆ ನೆರವಾಗಬೇಕು. ಪರಿಹಾರ ಕಾರ್ಯ ಗಳಲ್ಲಿ ಸ್ವಯಂ ಪ್ರೇರಿತವಾಗಿ ತೊಡಗಿಕೊಳ್ಳಬೇಕು ಎಂದು ಸೂಚಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಾದ ಕ್ಯಾಪ್ಟನ್ ಡಾ. ರಾಜೇಂದ್ರ, ಎಸ್ ಪಿ ಲೋಕೇಶ್ ಜಗಲಸರ ವಿವಿಧ ಅಧಿಕಾರಿಗಳು ಹಾಜರಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Geneva ಸಭೆಯಲ್ಲಿ ಭಾರತದ ವಿರುದ್ಧ ಟೀಕೆ; ‘ರಾಜಕೀಯ ಪ್ರೇರಿತ ಹೇಳಿಕೆಗಳ ಒಪ್ಪಲ್ಲ’ ಎಂದ MEA, ವಿಶ್ವಸಂಸ್ಥೆ ಸಮಿತಿ ವಿರುದ್ಧ ಕಿಡಿ..!

'ವಿರೋಧವಿದ್ದರೂ ಮೋಹನ್ ಭಾಗವತ್ ಅಮೆರಿಕಕ್ಕೆ ಯಾಕೆ ಹೋದ್ರು? ಮಹಾರಾಷ್ಟ್ರ ಕಾಂಗ್ರೆಸ್ ಶಾಸಕ ನಾನಾ ಪಟೋಲೆ ಪ್ರಶ್ನೆ!

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!