ಸಾಂದರ್ಭಿಕ ಚಿತ್ರ 
ರಾಜ್ಯ

ನಾಳೆಯಿಂದ ರಾಜ್ಯದ ದೇವಸ್ಥಾನ, ಚರ್ಚ್, ಮಸೀದಿ ಸೇರಿ ಧಾರ್ಮಿಕ ಕೇಂದ್ರಗಳು ಭಕ್ತರ ಪ್ರವೇಶಕ್ಕೆ ಮುಕ್ತ: ಮನರಂಜನಾ ತಾಣಗಳಿಗೂ ಪ್ರವೇಶ

ನಾಳೆ ಜುಲೈ 25ರಿಂದ ರಾಜ್ಯದ ಎಲ್ಲಾ ಧಾರ್ಮಿಕ ಕೇಂದ್ರಗಳು ಭಕ್ತಾದಿಗಳ ದರ್ಶನಕ್ಕೆ ತೆರೆದಿರುತ್ತವೆ. ಇಷ್ಟು ಸಮಯಗಳ ಕಾಲ ಕೋವಿಡ್-2ನೇ ಅಲೆ ತೀವ್ರವಾದ ಬಳಿಕ ಧಾರ್ಮಿಕ ಕೇಂದ್ರಗಳು ಮುಚ್ಚಲ್ಪಟ್ಟಿದ್ದವು.

ಬೆಂಗಳೂರು: ನಾಳೆ ಜುಲೈ 25ರಿಂದ ರಾಜ್ಯದ ಎಲ್ಲಾ ಧಾರ್ಮಿಕ ಕೇಂದ್ರಗಳು ಭಕ್ತಾದಿಗಳ ದರ್ಶನಕ್ಕೆ ತೆರೆದಿರುತ್ತವೆ. ಇಷ್ಟು ಸಮಯಗಳ ಕಾಲ ಕೋವಿಡ್-2ನೇ ಅಲೆ ತೀವ್ರವಾದ ಬಳಿಕ ಧಾರ್ಮಿಕ ಕೇಂದ್ರಗಳು ಮುಚ್ಚಲ್ಪಟ್ಟಿದ್ದವು.

ನಾಳೆಯಿಂದ ರಾಜ್ಯದಲ್ಲಿರುವ ಎಲ್ಲಾ ದೇವಸ್ಥಾನಗಳು, ಚರ್ಚ್, ಮಸೀದಿಗಳು, ಗುರುದ್ವಾರಗಳು ತೆರೆಯುವುದಲ್ಲದೆ ಮಕ್ಕಳಿಗೆ ಸಹ ಆಟವಾಡುವ ಮನರಂಜನಾ ಕೇಂದ್ರಗಳು ಮತ್ತು ಇತರ ಚಟುವಟಿಕೆ, ಆಟದ ಕೇಂದ್ರಗಳು ತೆರೆದಿರುತ್ತವೆ. ಸಾರ್ವಜನಿಕರು ಇಲ್ಲಿಗೆ ಭೇಟಿ ನೀಡುವಾಗ ಕೋವಿಡ್-19 ನಿಯಮಗಳನ್ನು ತಪ್ಪದೆ ಪಾಲಿಸಬೇಕೆಂದು ರಾಜ್ಯ ಸರ್ಕಾರ ಎಚ್ಚರಿಕೆಯನ್ನೂ ನೀಡಿದೆ.

ಧಾರ್ಮಿಕ ಕೇಂದ್ರಗಳ ತೆರೆಯುವಿಕೆಗೆ ಮಾತ್ರ ಸರ್ಕಾರ ಅನುಮತಿ ನೀಡಿದ್ದು ಜಾತ್ರೆಗಳು, ದೇವಸ್ಥಾನ ಉತ್ಸವಗಳು, ಮೆರವಣಿಗೆಗಳು ಹಾಗೂ ಇನ್ನಿತರ ಬೃಹತ್ ಸಂಖ್ಯೆಯಲ್ಲಿ ಜನರು ಸೇರುವ ಕಾರ್ಯಕ್ರಮಗಳಿಗೆ ಅನುಮತಿ, ಅವಕಾಶವನ್ನು ನೀಡಿಲ್ಲ.
ಇನ್ನು ಮನರಂಜನಾ ಕೇಂದ್ರಗಳ ತೆರೆಯುವಿಕೆಗೆ ಸರ್ಕಾರ ಅನುಮತಿ ನೀಡಿದೆಯಾದರೂ ಜಲ ಕ್ರೀಡೆಗಳು ಮತ್ತು ಜಲ ಸಂಬಂಧಿ ಸಾಹಸ ಕ್ರೀಡೆಗಳು, ಚಟುವಟಿಕೆಗಳಿಗೆ ಇನ್ನೂ ಅನುಮತಿಯನ್ನು ಸಾರ್ವಜನಿಕರಿಗೆ ನೀಡಿಲ್ಲ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

ಉಚ್ಚಾಟಿತ AIADMK ಹಿರಿಯ ನಾಯಕ ಸೆಂಗೊಟ್ಟೈಯನ್ ನಾಳೆ ವಿಜಯ್ ಭೇಟಿ; TVK ಸೇರುವ ಸಾಧ್ಯತೆ

ಶಾಂತಿ ಮಾತುಕತೆ ನಡೆಯುತ್ತಿರುವಾಗಲೇ ಉಕ್ರೇನ್‌ ಮೇಲೆ ರಷ್ಯಾ ದಾಳಿ; ಕನಿಷ್ಠ ಏಳು ಜನ ಸಾವು

SCROLL FOR NEXT