ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ 
ರಾಜ್ಯ

ಸಾರ್ವಜನಿಕ ಸ್ಥಳಗಳಲ್ಲಿ ಗೇಲಿ ಮಾಡುವವರು, ಡ್ರಗ್ ಪೂರೈಕೆದಾರರ-ಬಳಕೆದಾರರ ವಿರುದ್ಧ ಕಠಿಣ ಕ್ರಮ: ಪೊಲೀಸ್ ಆಯುಕ್ತ ಕಮಲ್ ಪಂತ್ ಎಚ್ಚರಿಕೆ 

ಮಹಿಳೆಯರು, ಹೆಣ್ಣು ಮಕ್ಕಳ ವಿರುದ್ಧ ಗೇಲಿ ಮಾಡುವುದು, ಡ್ರಗ್ ಪೆಡ್ಲರ್ ಗಳು ಮತ್ತು ಪೋಲಿಯಾಟಗಳನ್ನು ಆಡಿದರೆ ಜೋಕೆ, ಪೊಲೀಸರು ತಕ್ಕ ಶಾಸ್ತಿ ನೀಡಲಿದ್ದಾರೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರು: ಮಹಿಳೆಯರು, ಹೆಣ್ಣು ಮಕ್ಕಳ ವಿರುದ್ಧ ಗೇಲಿ ಮಾಡುವುದು, ಡ್ರಗ್ ಪೆಡ್ಲರ್ ಗಳು ಮತ್ತು ಪೋಲಿಯಾಟಗಳನ್ನು ಆಡಿದರೆ ಜೋಕೆ, ಪೊಲೀಸರು ತಕ್ಕ ಶಾಸ್ತಿ ನೀಡಲಿದ್ದಾರೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಎಚ್ಚರಿಕೆ ನೀಡಿದ್ದಾರೆ.

ನಿನ್ನೆ ಬೆಂಗಳೂರಿನ ನಂದಿನಿ ಲೇ ಔಟ್ ನಲ್ಲಿ ಮಾಸಿಕ ಜನಸಂಪರ್ಕ ದಿವಸದಲ್ಲಿ ಸಾರ್ವಜನಿಕರೊಂದಿಗೆ ಸಂವಾದ ನಡೆಸಿದ ಅವರು, ಪುಂಡು ಪೋಕರಿಗಳು ಸಾರ್ವಜನಿಕ ಸ್ಥಳಗಳಲ್ಲಿ ನಿಂತು ಸಿಗರೇಟು ಸೇದುವುದು, ಪೋಲಿ ಮಾತುಗಳನ್ನಾಡಿ ಗೇಲಿ ಮಾಡುವುದು ಇತ್ಯಾದಿಗಳನ್ನು ಮಾಡುತ್ತಾರೆ, ಇದರಿಂದ ಯುವತಿಯರು, ಹೆಣ್ಣು ಮಕ್ಕಳಿಗೆ ಓಡಾಡುವುದು ಕಷ್ಟವಾಗುತ್ತದೆ ಎಂದರು. ಅದಕ್ಕೆ ಉತ್ತರಿಸಿದ ಕಮಲ್ ಪಂತ್, ಇಂತಹ ವರ್ತನೆಗಳನ್ನು ಸಹಿಸಲು ಸಾಧ್ಯವಿಲ್ಲ, ಇಂತವರ ವಿರುದ್ಧ ಪೊಲೀಸರು ಕಠಿಣ ಕ್ರಮ ಕೈಗೊಳ್ಳಲಿದ್ದಾರೆ ಎಂದರು.

ಮತ್ತೊಬ್ಬ ನಾಗರಿಕರು ತಮ್ಮ ಪ್ರದೇಶದಲ್ಲಿ ಗಾಂಜಾ ಸೇವನೆ ಅವ್ಯಾಹತವಾಗಿ ನಡೆಯುತ್ತಿದೆ ಎಂದು ದೂರು ನೀಡಿದರು. ಇದಕ್ಕೆ ಪೊಲೀಸ್ ಆಯುಕ್ತರು, ನಗರ ಪೊಲೀಸರು ಡ್ರಗ್ ಪೆಡ್ಲಿಂಗ್ ಮತ್ತು ಪೆಡ್ಲರ್ ಗಳ ವಿರುದ್ದ ಕಠಿಣ ಕ್ರಮ ಕೈಗೊಳ್ಳುತ್ತಿದೆ. ಮಾದಕ ವಸ್ತುಗಳ ಮಾರಾಟ ಮಾತ್ರವಲ್ಲದೆ ಅವುಗಳ ಸೇವನೆ ಕೂಡ ಅಪರಾಧವಾಗಿದೆ, ಅಂತವರ ವಿರುದ್ಧ ಎನ್ ಡಿಪಿಎಸ್ ಕಾಯ್ದೆಯಡಿ ಕೇಸು ದಾಖಲಿಸಲಾಗುವುದು. ಡ್ರಗ್ ಮಾರಾಟ ಮಾಡುವ ಸಂಶಯಾಸ್ಪದ ಸ್ಥಳಗಳಲ್ಲಿ ಪೊಲೀಸರ ಗಸ್ತು ತಿರುಗುವಿಕೆ ಹೆಚ್ಚಾಗಲಿದ್ದು ಅಂತಹ ಅಕ್ರಮ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡವರ ವಿರುದ್ಧ ಕೇಸು ದಾಖಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ವಸತಿ ಪ್ರದೇಶಗಳಲ್ಲಿ ವಾಹನಗಳನ್ನು ಪಾರ್ಕ್ ಮಾಡುವುದರಿಂದ ಜನರ ಮತ್ತು ವಾಹನಗಳ ಓಡಾಟಕ್ಕೆ ಕಷ್ಟವಾಗುತ್ತದೆ ಎಂದು ಹೇಳಿದ ಆಯುಕ್ತರು, ಮುಂದಿನ ದಿನಗಳಲ್ಲಿ ವಸತಿ ಪ್ರದೇಶಗಳಲ್ಲಿ ಬೇಜವಾಬ್ದಾರಿಯಾಗಿ ವಾಹನಗಳನ್ನು ಪಾರ್ಕ್ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT