ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ 
ರಾಜ್ಯ

ಸಾರ್ವಜನಿಕ ಸ್ಥಳಗಳಲ್ಲಿ ಗೇಲಿ ಮಾಡುವವರು, ಡ್ರಗ್ ಪೂರೈಕೆದಾರರ-ಬಳಕೆದಾರರ ವಿರುದ್ಧ ಕಠಿಣ ಕ್ರಮ: ಪೊಲೀಸ್ ಆಯುಕ್ತ ಕಮಲ್ ಪಂತ್ ಎಚ್ಚರಿಕೆ 

ಮಹಿಳೆಯರು, ಹೆಣ್ಣು ಮಕ್ಕಳ ವಿರುದ್ಧ ಗೇಲಿ ಮಾಡುವುದು, ಡ್ರಗ್ ಪೆಡ್ಲರ್ ಗಳು ಮತ್ತು ಪೋಲಿಯಾಟಗಳನ್ನು ಆಡಿದರೆ ಜೋಕೆ, ಪೊಲೀಸರು ತಕ್ಕ ಶಾಸ್ತಿ ನೀಡಲಿದ್ದಾರೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರು: ಮಹಿಳೆಯರು, ಹೆಣ್ಣು ಮಕ್ಕಳ ವಿರುದ್ಧ ಗೇಲಿ ಮಾಡುವುದು, ಡ್ರಗ್ ಪೆಡ್ಲರ್ ಗಳು ಮತ್ತು ಪೋಲಿಯಾಟಗಳನ್ನು ಆಡಿದರೆ ಜೋಕೆ, ಪೊಲೀಸರು ತಕ್ಕ ಶಾಸ್ತಿ ನೀಡಲಿದ್ದಾರೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಎಚ್ಚರಿಕೆ ನೀಡಿದ್ದಾರೆ.

ನಿನ್ನೆ ಬೆಂಗಳೂರಿನ ನಂದಿನಿ ಲೇ ಔಟ್ ನಲ್ಲಿ ಮಾಸಿಕ ಜನಸಂಪರ್ಕ ದಿವಸದಲ್ಲಿ ಸಾರ್ವಜನಿಕರೊಂದಿಗೆ ಸಂವಾದ ನಡೆಸಿದ ಅವರು, ಪುಂಡು ಪೋಕರಿಗಳು ಸಾರ್ವಜನಿಕ ಸ್ಥಳಗಳಲ್ಲಿ ನಿಂತು ಸಿಗರೇಟು ಸೇದುವುದು, ಪೋಲಿ ಮಾತುಗಳನ್ನಾಡಿ ಗೇಲಿ ಮಾಡುವುದು ಇತ್ಯಾದಿಗಳನ್ನು ಮಾಡುತ್ತಾರೆ, ಇದರಿಂದ ಯುವತಿಯರು, ಹೆಣ್ಣು ಮಕ್ಕಳಿಗೆ ಓಡಾಡುವುದು ಕಷ್ಟವಾಗುತ್ತದೆ ಎಂದರು. ಅದಕ್ಕೆ ಉತ್ತರಿಸಿದ ಕಮಲ್ ಪಂತ್, ಇಂತಹ ವರ್ತನೆಗಳನ್ನು ಸಹಿಸಲು ಸಾಧ್ಯವಿಲ್ಲ, ಇಂತವರ ವಿರುದ್ಧ ಪೊಲೀಸರು ಕಠಿಣ ಕ್ರಮ ಕೈಗೊಳ್ಳಲಿದ್ದಾರೆ ಎಂದರು.

ಮತ್ತೊಬ್ಬ ನಾಗರಿಕರು ತಮ್ಮ ಪ್ರದೇಶದಲ್ಲಿ ಗಾಂಜಾ ಸೇವನೆ ಅವ್ಯಾಹತವಾಗಿ ನಡೆಯುತ್ತಿದೆ ಎಂದು ದೂರು ನೀಡಿದರು. ಇದಕ್ಕೆ ಪೊಲೀಸ್ ಆಯುಕ್ತರು, ನಗರ ಪೊಲೀಸರು ಡ್ರಗ್ ಪೆಡ್ಲಿಂಗ್ ಮತ್ತು ಪೆಡ್ಲರ್ ಗಳ ವಿರುದ್ದ ಕಠಿಣ ಕ್ರಮ ಕೈಗೊಳ್ಳುತ್ತಿದೆ. ಮಾದಕ ವಸ್ತುಗಳ ಮಾರಾಟ ಮಾತ್ರವಲ್ಲದೆ ಅವುಗಳ ಸೇವನೆ ಕೂಡ ಅಪರಾಧವಾಗಿದೆ, ಅಂತವರ ವಿರುದ್ಧ ಎನ್ ಡಿಪಿಎಸ್ ಕಾಯ್ದೆಯಡಿ ಕೇಸು ದಾಖಲಿಸಲಾಗುವುದು. ಡ್ರಗ್ ಮಾರಾಟ ಮಾಡುವ ಸಂಶಯಾಸ್ಪದ ಸ್ಥಳಗಳಲ್ಲಿ ಪೊಲೀಸರ ಗಸ್ತು ತಿರುಗುವಿಕೆ ಹೆಚ್ಚಾಗಲಿದ್ದು ಅಂತಹ ಅಕ್ರಮ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡವರ ವಿರುದ್ಧ ಕೇಸು ದಾಖಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ವಸತಿ ಪ್ರದೇಶಗಳಲ್ಲಿ ವಾಹನಗಳನ್ನು ಪಾರ್ಕ್ ಮಾಡುವುದರಿಂದ ಜನರ ಮತ್ತು ವಾಹನಗಳ ಓಡಾಟಕ್ಕೆ ಕಷ್ಟವಾಗುತ್ತದೆ ಎಂದು ಹೇಳಿದ ಆಯುಕ್ತರು, ಮುಂದಿನ ದಿನಗಳಲ್ಲಿ ವಸತಿ ಪ್ರದೇಶಗಳಲ್ಲಿ ಬೇಜವಾಬ್ದಾರಿಯಾಗಿ ವಾಹನಗಳನ್ನು ಪಾರ್ಕ್ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ, ಗ್ರಾಹಕರ ಜೇಬಿಗೆ 'ಸಿಹಿ ಕಹಿ'!

2nd Test: ಬೌಂಡರಿ ಲೈನ್ ಬಳಿ ದುರ್ವರ್ತನೆ ತೋರಿದ್ದ ಲಂಕಾ ಆಟಗಾರ Prabath Jayasuriyaಗೆ ಬರೆ ಹಾಕಿದ ICC!