ರಾಜ್ಯಪಾಲರಿಗೆ ಬಿಎಸ್ ವೈ ರಾಜಿನಾಮೆ 
ರಾಜ್ಯ

ಸಿಎಂ ಸ್ಥಾನಕ್ಕೆ ಬಿಎಸ್ ಯಡಿಯೂರಪ್ಪ ರಾಜಿನಾಮೆ; ಸಚಿವ ಸಂಪುಟ ವಿಸರ್ಜನೆ; ಗುರುವಾರ ಹೊಸ ಸಿಎಂ ಪದಗ್ರಹಣ ಸಾಧ್ಯತೆ

ನಿರೀಕ್ಷೆಯಂತೆಯೇ ಸಿಎಂ ಸ್ಥಾನಕ್ಕೆ ಬಿಎಸ್ ಯಡಿಯೂರಪ್ಪ ರಾಜಿನಾಮೆ ನೀಡಿದ್ದು, ರಾಜ್ಯಪಾಲರು ಹಾಲಿ ಸಚಿವ ಸಂಪುಟವನ್ನು ವಿಸರ್ಜನೆ ಮಾಡಿದ್ದಾರೆ. 

ಬೆಂಗಳೂರು: ನಿರೀಕ್ಷೆಯಂತೆಯೇ ಸಿಎಂ ಸ್ಥಾನಕ್ಕೆ ಬಿಎಸ್ ಯಡಿಯೂರಪ್ಪ ರಾಜಿನಾಮೆ ನೀಡಿದ್ದು, ರಾಜ್ಯಪಾಲರು ಹಾಲಿ ಸಚಿವ ಸಂಪುಟವನ್ನು ವಿಸರ್ಜನೆ ಮಾಡಿದ್ದಾರೆ. 

ಇದಕ್ಕೂ ಮೊದಲು ಸಿಎಂ ಬಿಎಸ್ ಯಡಿಯೂರಪ್ಪ ಅವರು, ರಾಜ್ಯಪಾಲ ಥಾವರ್ ಚಂದ್​ ಗೆಹ್ಲೋಟ್ ಅವರನ್ನು ಭೇಟಿ ಮಾಡಿ ತಮ್ಮ ರಾಜಿನಾಮೆ ಪತ್ರ ಸಲ್ಲಿಕೆ ಮಾಡಿದರು. ಈ ವೇಳೆ ರಾಜ್ಯಪಾಲರು ಮುಂದಿನ ಸಿಎಂ ಪದಗ್ರಹಣ ಮಾಡುವವರೆಗೂ ಹಂಗಾಮಿ ಸಿಎಂ ಆಗಿ ಮುಂದುವರೆಯುವಂತೆ ಸೂಚನೆ ನೀಡಿದರು.  ಅಲ್ಲದೆ ಹಾಲಿ ಹಾಲಿ ಸಚಿವ ಸಂಪುಟವನ್ನು ವಿಸರ್ಜನೆ ಮಾಡಿದರು. 

ಅಂತೆಯೇ ತಮ್ಮ ರಾಜಿನಾಮೆ ವಿಚಾರವನ್ನು ಬಿಜೆಪಿ ರಾಷ್ಟ್ರೀಯ ಘಟಕದ ಅಧ್ಯಕ್ಷ ಜಗತ್​ ಪ್ರಕಾಶ್ ನಡ್ಡಾ ಅವರಿಗೆ ಬಿ.ಎಸ್.ಯಡಿಯೂರಪ್ಪ ಅಧಿಕೃತವಾಗಿ ಮಾಹಿತಿ ರವಾನಿಸಿದ್ದಾರೆ ಎಂದು ತಿಳಿದುಬಂದಿದೆ.

ಸಂಸದೀಯ ಮಂಡಳಿಯಲ್ಲಿ ಮುಂದಿನ ಮುಖ್ಯಮಂತ್ರಿ ಘೋಷಣೆ
ಇನ್ನು ಈ ವಿಚಾರವಾಗಿ ಮಾತನಾಡಿದ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್​ ಸಿಂಗ್ ಅವರು, 'ಮುಂದಿನ ಮುಖ್ಯಮಂತ್ರಿ ಯಾರು ಅಂತ ಬಿ.ಎಸ್.ಯಡಿಯೂರಪ್ಪ ಅವರೇ ಹೇಳುತ್ತಾರೆ. ಮುಂದಿನ ಮುಖ್ಯಮಂತ್ರಿ ಆಯ್ಕೆಯ ಬಗ್ಗೆ ಸಂಸದೀಯ ಮಂಡಳಿ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಮಾಹಿತಿ  ನೀಡಿದರು. 

ಗುರುವಾರ ಹೊಸ ಸಿಎಂ ಪದಗ್ರಹಣ ಸಾಧ್ಯತೆ
ಇನ್ನು ಇದೇ ಗುರುವಾರ ಮುಂದಿನ ಸಿಎಂ ಪದಗ್ರಹಣ ಮಾಡುವ ಸಾಧ್ಯತೆ ಇದ್ದು, ಈಗಾಗಲೇ ಈ ಸಂಬಂಧ ಸಿದ್ಧತೆಗಳು ಆರಂಭಗೊಂಡಿವೆ. ಹೊಸಮುಖ, ಶುದ್ಧಹಸ್ತ ರಾಜಕಾರಣಿಗೆ ಸಿಎಂ ಸ್ಥಾನ ನೀಡಲು ಬಿಜೆಪಿ ಹೈಕಮಾಂಡ್ ಒಲವು ತೋರಿದೆ ಎಂದು ಹೇಳಲಾಗುತ್ತಿದೆ. ಮಹಾರಾಷ್ಟ್ರ, ಗೋವಾ ಮಾದರಿಯಲ್ಲಿ  ಹೊಸಬರ ಆಯ್ಕೆ ಆಗುವ ಸಾಧ್ಯತೆ ಇದೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT