ಸಾಂದರ್ಭಿಕ ಚಿತ್ರ 
ರಾಜ್ಯ

ಹಳಿ ದಾಟುತ್ತಿದ್ದ ವೇಳೆ ರೈಲಿಗೆ ಸಿಲುಕಿ ತಾಯಿ, ಮಗ ಸಾವು!

ಹಳಿ ದಾಟುತ್ತಿದ್ದ ವೇಳೆ ರೈಲಿಗೆ ಸಿಲುಕಿ ತಾಯಿ, ಮಗ ಸಾವನ್ನಪ್ಪಿದ ಘಟನೆ ನಗರದ ಬೈಯ್ಯಪ್ಪನಹಳ್ಳಿ ರೈಲ್ವೆ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. 

ಬೆಂಗಳೂರು: ಹಳಿ ದಾಟುತ್ತಿದ್ದ ವೇಳೆ ರೈಲಿಗೆ ಸಿಲುಕಿ ತಾಯಿ, ಮಗ ಸಾವನ್ನಪ್ಪಿದ ಘಟನೆ ನಗರದ ಬೈಯ್ಯಪ್ಪನಹಳ್ಳಿ ರೈಲ್ವೆ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. 

ಬೆಂಗಳೂರಿನ ಭದ್ರಪ್ಪ ಲೇಔಟ್​ನಲ್ಲಿ ಈ ಅಪಘಾತ ಸಂಭವಿಸಿದ್ದು, ಬಿಡದಿ ಮೂಲದ 50 ವರ್ಷ ವಯಸ್ಸಿನ ಮಂಗಳಾ ಹಾಗೂ 30 ವರ್ಷದ ಹರೀಶ್ ಮೃತಪಟ್ಟಿದ್ದಾರೆ. 

ಇಬ್ಬರೂ ಸಮೀಪದ ಸಂಜಯನಗರದ ದೊಡ್ಡ ಬೈಲದಕೆರೆ ನಿವಾಸಿಗಳು ಎಂದು ತಿಳಿದುಬಂದಿದ್ದು, ಮೃತರು ತಳ್ಳುವಗಾಡಿಯಲ್ಲಿ ಫ್ಯಾನ್ಸಿ ವಸ್ತುಗಳ ಮಾರಾಟ ಮಾಡುತ್ತಿದ್ದರು. ಮೃತ ಹರೀಶ್ ಅಂಗವಿಕಲರಾಗಿದ್ದು, ವ್ಯಾಪಾರ ಮುಗಿಸಿಕೊಂಡು ಮನೆಗೆ ವಾಪಸ್ ಆಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. 

ರೈಲ್ವೇ ಹಳಿ ದಾಟುವಾಗ ಈ ದುರ್ಘಟನೆ ಸಂಭವಿಸಿದ್ದು, ರೈಲು ಬರುವುದು ಗಮನಿಸದೆ ಟ್ರಾಕ್ ದಾಟಿರುವುದರಿಂದ ಘಟನೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ರೈಲು ಹಳಿ ದಾಟುತ್ತಿದ್ದಾಗ ಹಿಂದಿನಿಂದ ಬಂದ ರೈಲು ಅವರಿಗೆ ಅಪ್ಪಳಿಸಿದೆ. ರೈಲು ಆಗಮನದ ಬಗ್ಗೆ ರೈಲಿನ ಲೋಕೋ ಪೈಲಟ್ ಹಾರ್ನ್ ಮಾಡಿದರೂ  ಹಳಿಯಲ್ಲಿದ್ದ ಅವರು ಸಾಗುತ್ತಿದ್ದರಿಂದ ಈ ಅಪಘಾತ ಸಂಭವಿಸಿದೆ ಎಂದು ಪೊಲೀಸರು ಹೇಳಿದ್ದಾರೆ.

ಸದ್ಯ ಎರಡು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಬೋರಿಂಗ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಬೈಯ್ಯಪ್ಪನಹಳ್ಳಿ ರೈಲ್ವೆ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಕೇಸ್ ದಾಖಲಾಗಿದೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT