ಕರ್ನಾಟಕ ಹೈಕೋರ್ಟ್ 
ರಾಜ್ಯ

ಸಿಡಿ ಹಗರಣ: ಎಸ್ಐಟಿ ಮುಖ್ಯಸ್ಥರ ಅನುಪಸ್ಥಿತಿಯಲ್ಲಿ ತನಿಖೆ ಪ್ರಗತಿ ಸಾಧ್ಯವೇ?- ಸರ್ಕಾರಕ್ಕೆ ಹೈ ಪ್ರಶ್ನೆ 

ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ಸಿಡಿ ಹಗರಣದ ತನಿಖೆಯನ್ನು ವಿಶೇಷ ತನಿಖಾದಳ (ಎಸ್ ಐಟಿ) ಮುಖ್ಯಸ್ಥ ಸೌಮೇಂದು ಮುಖರ್ಜಿ ಅವರ ಅನುಪಸ್ಥಿತಿಯಲ್ಲಿ ಮುಂದುವರೆಸುವ ವಿಚಾರವಾಗಿ ಹೈಕೋರ್ಟ್ ಸರ್ಕಾರದಿಂದ ವಿವರಣೆಯನ್ನು ಕೇಳಿದೆ. 

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ಸಿಡಿ ಹಗರಣದ ತನಿಖೆಯನ್ನು ವಿಶೇಷ ತನಿಖಾದಳ (ಎಸ್ ಐಟಿ) ಮುಖ್ಯಸ್ಥ ಸೌಮೇಂದು ಮುಖರ್ಜಿ ಅವರ ಅನುಪಸ್ಥಿತಿಯಲ್ಲಿ ಮುಂದುವರೆಸುವ ವಿಚಾರವಾಗಿ ಹೈಕೋರ್ಟ್ ಸರ್ಕಾರದಿಂದ ವಿವರಣೆಯನ್ನು ಕೇಳಿದೆ. 

ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ನ ಅನುಮತಿ ಇಲ್ಲದೇ ಯಾವುದೆ ತನಿಖೆ ಮುಂದುವರೆಯುವುದಕ್ಕೆ ಹಾಗೂ ಅಂತಿಮ ವರದಿಯನ್ನು ಸಲ್ಲಿಸುವುದಕ್ಕೆ ಸಾಧ್ಯವಿಲ್ಲ ಎಂದು ಕೋರ್ಟ್ ಸ್ಪಷ್ಟಪಡಿಸಿದೆ. 

ನ್ಯಾ. ಅಭಯ್ ಶ್ರೀನಿವಾಸ್ ಓಕ, ಹಾಗೂ ನ್ಯಾ. ಎನ್ಎಸ್ ಸಂಜಯ್ ಗೌಡ ಅವರಿದ್ದ ದ್ವಿಸದಸ್ಯ ಪೀಠ, ಮೇ.1 ರಿಂದ ರಜೆಯಲ್ಲಿರುವ ಎಸ್ಐಟಿ ಮುಖ್ಯಸ್ಥ ಹೆಚ್ಚುವರಿ ಪೊಲೀಸ್ ಆಯುಕ್ತ ಸೌಮೇಂದು ಮುಖರ್ಜಿ ಅವರ ಅನುಪಸ್ಥಿತಿಯಲ್ಲಿ ತನಿಖೆಯ ಪ್ರಗತಿಯನ್ನು ಗಮನಿಸಿದ್ದು ಈ ವಿವರಣೆ ಕೇಳಿದೆ.  

ಕೋರ್ಟ್ ಕೇಳಿರುವ ಪ್ರಶ್ನೆಗೆ ಆಕ್ಷೇಪಣೆಗಳಿದ್ದರೆ ಅದನ್ನು ಸಲ್ಲಿಸುವುದಕ್ಕೂ ರಾಜ್ಯ ಸರ್ಕಾರಕ್ಕೆ ಕೋರ್ಟ್ ಸೂಚಿಸಿದೆ. ಸಿಡಿ ಹಗರಣಕ್ಕೆ ಸಂಬಂಧಿಸಿದಂತೆ ಪಿಐಎಲ್ ಗಳ ವಿಚಾರಣೆಯನ್ನು ಕೋರ್ಟ್ ನಡೆಸುತ್ತಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT