ಸೆಪ್ಟಿಕ್‌ ಟ್ಯಾಂಕ್ ನಲ್ಲಿ ಸಿಲುಕಿದ್ದ ಆನೆ ಮರಿ ರಕ್ಷಣೆ 
ರಾಜ್ಯ

ಅರಣ್ಯ ಇಲಾಖೆ ಕಾರ್ಯಾಚರಣೆ: ಸೆಪ್ಟಿಕ್‌ ಟ್ಯಾಂಕ್ ನಲ್ಲಿ ಸಿಲುಕಿದ್ದ ಆನೆ ಮರಿ ರಕ್ಷಣೆ 

ತೆರೆದ ಸೆಪ್ಟಿಕ್ ಟ್ಯಾಂಕ್ ನಲ್ಲಿ ಬಿದ್ದಿದ್ದ ಆನೆ ಮರಿಯನ್ನು ಅರಣ್ಯ ಇಲಾಖೆ ಕಾರ್ಯಾಚರಣೆ ನಡೆಸಿ ರಕ್ಷಣೆ ಮಾಡಿದೆ.

ಮಡಿಕೇರಿ: ತೆರೆದ ಸೆಪ್ಟಿಕ್ ಟ್ಯಾಂಕ್ ನಲ್ಲಿ ಬಿದ್ದಿದ್ದ ಆನೆ ಮರಿಯನ್ನು ಅರಣ್ಯ ಇಲಾಖೆ ಕಾರ್ಯಾಚರಣೆ ನಡೆಸಿ ರಕ್ಷಣೆ ಮಾಡಿದೆ. ಕೊಡಗಿನ ಅರಣ್ಯ ಇಲಾಖೆ ಸತತ ಎರಡು ಗಂಟೆಗಳ ಕಾರ್ಯಾಚರಣೆ ನಡೆಸಿದೆ. ವಿರಾಜಪೇಟೆ ತಾಲೂಕಿನ ಬದ್ರಗೋಲದಲ್ಲಿ ಈ ಘಟನೆ ವರದಿಯಾಗಿದೆ. 

ಮಂಗಳವಾರ ಬೆಳಿಗ್ಗೆ ಗ್ರಾಮಸ್ಥರಿಗೆ ಆನೆ ಘೀಳಿಡುತ್ತಿದ್ದದ್ದು ಕೇಳಿಸಿದೆ. 5 ವರ್ಷಗಳ ಆನೆ ಮರಿ ಸ್ಥಳೀಯ ನಿವಾಸಿ ಎಂಎಂ ಸುಬ್ರಹ್ಮಣಿ ಅವರಿಗೆ ಸೇರಿದ ಜಾಗದಲ್ಲಿ ಅಗೆದಿದ್ದ ತೆರೆದ ಸೆಪ್ಟಿಕ್ ಟ್ಯಾಂಕ್ ನಲ್ಲಿ ಸಿಲುಕಿದ್ದು ಕಂಡುಬಂದಿದೆ. ತಕ್ಷಣವೇ ಎಚ್ಚೆತ್ತ ಗ್ರಾಮಸ್ಥರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ತಿತಿಮತಿಯ ಆರ್ ಎಫ್ಒ ಅಶೋಕ್ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. 

ಆನೆ ಮರಿಯನ್ನು ಮೇಲೆ ಎಳೆಯಲು ಸತತ ಒಂದು ಗಂಟೆಗಳ ಕಾಲ ಪ್ರಯತ್ನ ನಡೆದಿದೆ. ಆದರೆ ಫಲಿಸಲಿಲ್ಲ. ಎಲ್ಲ ಪ್ರಯತ್ನಗಳೂ ವಿಫಲವಾದಾಗ ಮತ್ತಿಗೋಡು ಆನೆ ಶಿಬಿರದಿಂದ ಕುಂತಿ ಆನೆಯನ್ನು ಕರೆಸಿ ರಕ್ಷಣಾ ಕಾರ್ಯಾಚರಣೆ ಪ್ರಾರಂಭಿಸಲಾಯಿತು. ಕೊನೆಗೆ ಆನೆ ಮರಿಯ ಕೊರಳಿಗೆ ಹಗ್ಗ ಕಟ್ಟಿ ಕುಂತಿ ಆನೆಯ ಮೂಲಕ ಎಳೆಸಲಾಯಿತು.

"ಸತತ ಎರಡು ಗಂಟೆಗಳ ಕಾರ್ಯಾಚರಣೆಯ ನಂತರ ಆನೆಯನ್ನು ರಕ್ಷಿಸಲಾಗಿದೆ, ಆದರೆ ತಕ್ಷಣಕ್ಕೆ ಆನೆಯ ಹಿಂಡು ಅಲ್ಲೆಲ್ಲೂ ಕಾಣಿಸಲಿಲ್ಲ. ಆನೆ ಮರಿಯನ್ನು ಹಿಂಡಿನ ಜೊತೆ ಸೇರಿಸಲು ದೇವರಪುರ ದೇವರ ಕಾಡು ವ್ಯಾಪ್ತಿಯಲ್ಲಿ ಶೋಧಕಾರ್ಯಾಚರಣೆ ನಡೆದಿದೆ" ಎಂದು ಆರ್ ಎಫ್ಒ ಅಶೋಕ್ ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Demographic manipulation: ಒಳನುಸುಳುವಿಕೆಗಿಂತ ಸಾಮಾಜಿಕ ಸಾಮರಸ್ಯಕ್ಕೆ ಇದೇ 'ದೊಡ್ಡ ಅಪಾಯ'- ಪ್ರಧಾನಿ ಮೋದಿ

RSS Centenary: ಇದೇ ಮೊದಲು; 'ಭಾರತ ಮಾತೆ'ಯ ಚಿತ್ರವುಳ್ಳ 100 ನಾಣ್ಯ ರೂ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

ಮೈಸೂರು: ಮುಂದಿನ ವರ್ಷಗಳಲ್ಲೂ ದಸರಾದಲ್ಲಿ ನಾನೇ ಪುಷ್ಪಾರ್ಚನೆ: ಡಿಕೆಶಿ ಕನಸಿಗೆ 'ಕೊಳ್ಳಿ' ಇಟ್ರಾ ಸಿದ್ದರಾಮಯ್ಯ?

DA hike: ಕೇಂದ್ರ ಸರ್ಕಾರಿ ನೌಕರರಿಗೆ 'ದಸರಾ ಗಿಫ್ಟ್' ; ಶೇ. 3 ರಷ್ಟು ತುಟ್ಟಿ ಭತ್ಯೆ ಹೆಚ್ಚಳಕ್ಕೆ ಸಂಪುಟ ಅನುಮೋದನೆ

ತಮಿಳುನಾಡು: ಅರುಣಾಚಲೇಶ್ವರ ದೇವಸ್ಥಾನಕ್ಕೆ ಬಂದಿದ್ದ ಆಂಧ್ರ ಮಹಿಳೆ ಮೇಲೆ ಅತ್ಯಾಚಾರ; ಇಬ್ಬರು ಪೊಲೀಸರ ಬಂಧನ!

SCROLL FOR NEXT