ರಾಜ್ಯಪಾಲರನ್ನು ಭೇಟಿಯಾದ ಜೆಡಿಎಸ್ ಮುಖಂಡರು 
ರಾಜ್ಯ

ರಾಜ್ಯದ ನೀರಾವರಿ ಯೋಜನೆಗಳಿಗೆ ಕೇಂದ್ರದ ಅನುಮೋದನೆಗಾಗಿ ರಾಷ್ಟ್ರಪತಿಗಳಿಗೆ ಜೆಡಿಎಸ್ ನಿಂದ ಪ್ರಸ್ತಾವನೆ ಸಲ್ಲಿಕೆ

ಜೆಡಿಎಸ್‌ನ ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರು ವಿಧಾನಸೌಧದ ಗಾಂಧಿ ಪ್ರತಿಮೆಯಿಂದ ರಾಜಭವನದವರೆಗೆ ಕಾಲ್ನಡಿಗೆಯ ಮೂಲಕ ತೆರಳಿ ರಾಜ್ಯಪಾಲರ ಮುಖಾಂತರ ರಾಷ್ಟ್ರಪತಿಗಳಿಗೆ ಪ್ರಸ್ತಾವನೆ ಸಲ್ಲಿಸಿದರು.

ಬೆಂಗಳೂರು: ಮೇಕೆದಾಟು ಯೋಜನೆ,  ಕೃಷ್ಣಾ ಮೇಲ್ದಂಡೆ ಯೋಜನೆ ಮತ್ತು ಮಹದಾಯಿ ಯೋಜನೆಯ ಅನುಮೋದನೆಗಾಗಿ ಜಾತ್ಯತೀತ ಜನತಾದಳ ಪಕ್ಷದ ವತಿಯಿಂದ ಪಕ್ಷದ ಶಾಸಕಾಂಗಪಕ್ಷದ ನಾಯಕ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹಾಗೂ ರಾಜ್ಯಾಧ್ಯಕ್ಷ ಹೆಚ್.ಕೆ.ಕುಮಾರಸ್ವಾಮಿಯವರ ನೇತೃತ್ವದಲ್ಲಿ ಜೆಡಿಎಸ್‌ನ ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರು ವಿಧಾನಸೌಧದ ಗಾಂಧಿ ಪ್ರತಿಮೆಯಿಂದ ರಾಜಭವನದವರೆಗೆ ಕಾಲ್ನಡಿಗೆಯ ಮೂಲಕ ತೆರಳಿ ರಾಜ್ಯಪಾಲರ ಮುಖಾಂತರ ರಾಷ್ಟ್ರಪತಿಗಳಿಗೆ ಪ್ರಸ್ತಾವನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಹೆಚ್.ಡಿ ಕುಮಾರಸ್ವಾಮಿ,ರಾಜ್ಯಪಾಲರನ್ನು ಭೇಟಿ ಮಾಡಿ ನೀರಾವರಿ ಯೋಜನೆಗಳ ಅನುಮೋದನೆಗಾಗಿ ಮನವಿ ಸಲ್ಲಿಸಿದ್ದೇವೆ.ಈಗಾಗಲೇ 2013 ರಲ್ಲಿ ಕೃಷ್ಣ ಟ್ರಿಬ್ಯುನಲ್ ಎರಡನೇ ತೀರ್ಪು ಬಂದಿದ್ದು,130 ಟಿಎಂಸಿ ನೀರು ಉಪಯೋಗಕ್ಕೆ ಅವಕಾಶ ಕೊಡಲಾಗಿದೆ. ಕೃಷ್ಣ ಮೇಲ್ದಂಡೆ ಯೋಜನೆ ಪ್ರಾರಂಭಕ್ಕೆ ಅನುಮತಿ‌ ನೀಡಲಾಗಿದೆ.ಆದರೆ 2_013 ರಿಂದ ಗೆಜೆಟ್ ನೋಟಿಫಿಕೇಷನ್ ಆಗಿಲ್ಲ.ಹೀಗಾಗಿ ಕೇಂದ್ರ ಸರ್ಕಾರ ಕಣ್ಣು ತೆರೆಸುವ ಕೆಲಸ ಮಾಡಿದ್ದೇವೆ ಎಂದರು.

ಈ ಸಂಬಂಧ ಪಕ್ಷದ ರಾಷ್ಟ್ರೀಯ ನಾಯಕ ಹೆಚ್.ಡಿ.ದೇವೇಗೌಡರ ನಾಯಕತ್ವದಲ್ಲಿ ಪ್ರಧಾನಿ ಮೋದಿ ಭೇಟಿ ಹಾಗೂ ರಾಷ್ಟ್ರಪತಿಗಳ ಭೇಟಿಗೆ ಚಿಂತನೆ ನಡೆಸಲಾಗಿದೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT