ಗದಗ ಜಿಲ್ಲೆಯ ಗಡಗೊಲಿ ಗ್ರಾಮದಲ್ಲಿ ಪಾಳುಬಿದ್ದಿರುವ ಮನೆಗಳು 
ರಾಜ್ಯ

ಗದಗ ಜಿಲ್ಲೆಯಲ್ಲಿ 'ಸಲ್ಮಾನ್ ಖಾನ್' ಗ್ರಾಮ ಕೇಳಿದ್ದೀರಾ? ಇಲ್ಲಿ ಮದುವೆಯಾಗಲು ಕ್ಯೂನಲ್ಲಿ ನಿಂತಿದ್ದಾರೆ ಯುವಕರು!

ಜಿಲ್ಲೆಯ ರೋಣ ತಾಲ್ಲೂಕಿನ ಸಣ್ಣ ಹಳ್ಳಿಯಿದು, ಈ ಹಳ್ಳಿ ಗದಗ ಪಟ್ಟಣದಿಂದ 59 ಕಿಲೋ ಮೀಟರ್ ದೂರದಲ್ಲಿದೆ. ಸಲ್ಮಾನ್ ಖಾನ್ ಗ್ರಾಮ ಎಂಬ ಹೆಸರು ಈ ಗ್ರಾಮಕ್ಕೆ ಬಂದಿದೆ, ಅರೆ ಬಾಲಿವುಡ್ ನಟ ಸಲ್ಮಾನ್ ಖಾನ್ ಗೂ ಈ ಗ್ರಾಮಕ್ಕೂ ಏನು ಸಂಬಂಧ ಎಂದುಕೊಂಡಿರಾ?

ಗದಗ:ಜಿಲ್ಲೆಯ ರೋಣ ತಾಲ್ಲೂಕಿನ ಸಣ್ಣ ಹಳ್ಳಿಯಿದು, ಈ ಹಳ್ಳಿ ಗದಗ ಪಟ್ಟಣದಿಂದ 59 ಕಿಲೋ ಮೀಟರ್ ದೂರದಲ್ಲಿದೆ. ಸಲ್ಮಾನ್ ಖಾನ್ ಗ್ರಾಮ ಎಂಬ ಹೆಸರು ಈ ಗ್ರಾಮಕ್ಕೆ ಬಂದಿದೆ, ಅರೆ ಬಾಲಿವುಡ್ ನಟ ಸಲ್ಮಾನ್ ಖಾನ್ ಗೂ ಈ ಗ್ರಾಮಕ್ಕೂ ಏನು ಸಂಬಂಧ ಎಂದುಕೊಂಡಿರಾ?

ಈ ಗ್ರಾಮದಲ್ಲಿ ಯಾರೂ ನಟರಿಲ್ಲ, ಬದಲಿಗೆ ಹಲವು ಯುವಕರು, ಪುರುಷರು ಮದುವೆಯಾಗಲು ಸೂಕ್ತ ಹೆಣ್ಣು ಸಿಗದೆ ಬ್ರಹ್ಮಚಾರಿಗಳಾಗಿಯೇ ಉಳಿದಿದ್ದಾರೆ. ಕಳೆದ 10 ವರ್ಷಗಳಿಂದ ಗ್ರಾಮದಲ್ಲಿ ಈ ಸಮಸ್ಯೆಯಿದ್ದು ಮದುವೆಯಾಗದೆ ಉಳಿದಿರುವವರು ಬಹುತೇಕರು ರೈತರಾಗಿದ್ದಾರೆ. ಈ ಗ್ರಾಮಕ್ಕೆ ಹೆಣ್ಣು ಕೊಡಲು ಯಾರೂ ಒಪ್ಪುತ್ತಿಲ್ಲವಂತೆ, ಹಳ್ಳಿ ಬೇರೆ ಅದಕ್ಕಿಂತ ಹೆಚ್ಚಾಗಿ ಪ್ರವಾಹ ಪೀಡಿತ ಪ್ರದೇಶ ಎಂದು. ಹೀಗಾಗಿ ಹೆಣ್ಣು ಸಿಗದೆ ಬೇಸತ್ತು ಮಾಜಿ ಸಚಿವ ಸಿ ಸಿ ಪಾಟೀಲ್ ಮತ್ತು ಸ್ಥಳೀಯ ಶಾಸಕರ ಮೊರೆ ಹೋಗಿದ್ದಾರೆ.

ಕೆಲ ವರ್ಷಗಳ ಹಿಂದೆ ಇಲ್ಲಿನ ಪ್ರವಾಹದಿಂದ ಭಾರೀ ಹಾನಿಗೀಡಾಗಿ ಸರ್ಕಾರದಿಂದ ಸುಮಾರು 500 ಮನೆಗಳನ್ನು ಕಟ್ಟಿ ಕೊಡಲಾಗಿತ್ತಾದರೂ ಪ್ರವಾಹದಿಂದ ಸಂಕಷ್ಟಕ್ಕೀಡಾದವರಿಗೆ ಅದರ ಫಲ ಸಿಕ್ಕಿಲ್ಲ. ಮದುವೆಯಾಗುವ ಯುವಕನಿಗೆ ಇರಲು ಸರಿಯಾದ ಮನೆಯಿಲ್ಲ, ಮನೆಯ ಕಿಟಕಿ-ಬಾಗಿಲುಗಳು ಸರಿಯಿಲ್ಲ ಎಂದು ಅನೇಕ ಹೆಣ್ಣು ಮಕ್ಕಳು ವಿವಾಹ ಪ್ರಸ್ತಾಪವನ್ನು ತಿರಸ್ಕರಿಸುತ್ತಿದ್ದಾರಂತೆ. 

ಇಲ್ಲಿನ ರೈತರಿಗೆ ಜಮೀನುಗಳಿವೆ. ಆದರೆ ಸತತ ಬರಗಾಲ ಮತ್ತು ನೆರೆಯಿಂದ ಸರಿಯಾಗಿ ಬೆಳೆ ಬೆಳೆಯಲು ಸಾಧ್ಯವಾಗದೆ ರೈತರು ಆರ್ಥಿಕ ಸಮಸ್ಯೆ ಹೊಂದಿದ್ದಾರೆ. ಕಳೆದ ಎರಡು ದಶಕಗಳಿಂದಲೂ ಇದೇ ರೀತಿಯಾಗುತ್ತಿದೆ.

ಗ್ರಾಮದ ಕೆಲವು ಶ್ರೀಮಂತ ಯುವಕರಿಗೂ ಹೆಣ್ಣು ಸಿಗುತ್ತಿಲ್ಲವಂತೆ. ಗ್ರಾಮದಲ್ಲಿನ ಬರಗಾಲ ಮತ್ತು ಪ್ರವಾಹ ಪರಿಸ್ಥಿತಿಯೇ ಇದಕ್ಕೆ ಮೂಲ ಕಾರಣ ಎನ್ನುತ್ತಾರೆ ಈ ಹಳ್ಳಿಗರು.

ಗ್ರಾಮದಲ್ಲಿ ಮದುವೆಯಾಗದೆ ಉಳಿದಿರುವ 30ರಿಂದ 40 ವರ್ಷದೊಳಗಿನ ಸುಮಾರು 120 ಪುರುಷರಿದ್ದಾರೆ. ಮನೆ ಕಟ್ಟಿಕೊಡಲು ನಾವು ಕಾಯುತ್ತಿದ್ದೇವೆ ಎಂದು ಕೆಲ ಯುವಕರು ಸರ್ಕಾರದತ್ತ ದೃಷ್ಟಿ ಹರಿಸಿದ್ದಾರೆ.

ಈ ಬಗ್ಗೆ ಜಿಲ್ಲಾಡಳಿತವನ್ನು ಕೇಳಿದರೆ, ಹೊಸ ಗ್ರಾಮವೊಂದು ಸಿದ್ದವಾಗುತ್ತಿದೆ. ಆರಂಭದಲ್ಲಿ ಕೆಲವು ಗ್ರಾಮಸ್ಥರು ಅಲ್ಲಿಗೆ ಹೋಗಲು ನಿರಾಕರಿಸಿದರು. ಹೀಗಾಗಿ ಆ ಪ್ರದೇಶ ಈಗ ಪೊದೆ, ಕಾಡುಗಳಿಂದ ತುಂಬಿ ಹೋಗಿದೆ. ಪ್ರದೇಶವನ್ನು ಸ್ವಚ್ಛಗೊಳಿಸಿ ಕೆಲವು ಮನೆಗಳನ್ನು ಕೂಡ ದುರಸ್ತಿಗೊಳಿಸಬೇಕಾಗಿದೆ ಎನ್ನುತ್ತಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಸೌರಭ್ ಭಾರದ್ವಾಜ್ ಮನೆ ಮೇಲೆ ಇಡಿ ದಾಳಿ; ಮೋದಿ ನಕಲಿ ಪದವಿ ಕುರಿತ ಗಮನ ಬೇರೆಡೆ ಸೆಳೆಯಲು ಯತ್ನ ಎಂದ AAP

SCROLL FOR NEXT