ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರು: ಬೆಳ್ಳಂಬೆಳಗ್ಗೆ ರೌಡಿಶೀಟರ್​ ಮನೆಗಳ ಮೇಲೆ ಪೊಲೀಸರ ದಾಳಿ, ಹಲವರು ವಶಕ್ಕೆ

ಕೆಲ ದಿನಗಳ ಹಿಂದಷ್ಟೇ ನಗರದಲ್ಲಿ 2 ಸಾವಿರಕ್ಕೂ ಹೆಚ್ಚು ರೌಡಿ ಮನೆಗಳ ಮೇಲೆ ದಾಳಿ ಮಾಡಿದ್ದ ಪೊಲೀಸರು, ಮುಂದುವರಿದ ಭಾಗವಾಗಿ ಶನಿವಾರ ಕೂಡ ಅಪರಾಧ ಚಟುವಟಿಕೆಯಲ್ಲಿ ಸಕ್ರಿಯರಾಗಿದ್ದ ರೌಡಿಗಳ ಮನೆ ಮೇಲೆ ದಾಳಿ ನಡೆಸಿ ಹಲವರನ್ನು ವಶಕ್ಕೆ ಪಡೆದಿದ್ದಾರೆಂದು ತಿಳಿದುಬಂದಿದೆ.

ಬೆಂಗಳೂರು: ಕೆಲ ದಿನಗಳ ಹಿಂದಷ್ಟೇ ನಗರದಲ್ಲಿ 2 ಸಾವಿರಕ್ಕೂ ಹೆಚ್ಚು ರೌಡಿ ಮನೆಗಳ ಮೇಲೆ ದಾಳಿ ಮಾಡಿದ್ದ ಪೊಲೀಸರು, ಮುಂದುವರಿದ ಭಾಗವಾಗಿ ಶನಿವಾರ ಕೂಡ ಅಪರಾಧ ಚಟುವಟಿಕೆಯಲ್ಲಿ ಸಕ್ರಿಯರಾಗಿದ್ದ ರೌಡಿಗಳ ಮನೆ ಮೇಲೆ ದಾಳಿ ನಡೆಸಿ ಹಲವರನ್ನು ವಶಕ್ಕೆ ಪಡೆದಿದ್ದಾರೆಂದು ತಿಳಿದುಬಂದಿದೆ. 

ಆಗ್ನೇಯ ವಿಭಾಗದ ಪೊಲೀಸರು ದಾಳಿ ನಡೆಸಿದ್ದು, ಈ ಹಿಂದಿನ ದಾಳಿಯಲ್ಲಿ ತಲೆ ಮರೆಸಿಕೊಂಡಿದ್ದ ರೌಡಿಶೀಟರ್​ಗಳಿಗೆ ಬೆಳ್ಳಂ ಬೆಳಗ್ಗೆ ಶಾಕ್​ ನೀಡಿದ್ದಾರೆ. 

ಆಡುಗೋಡಿ ಪೊಲೀಸ್​ ಠಾಣಾ ವ್ಯಾಪ್ತಿಯ 63 ರೌಡಿಶೀಟರ್​ಗಳ ಮನೆ ಮೇಲೆ ಆಗ್ನೇಯ ವಿಭಾಗ ಪೊಲೀಸರು ದಾಳಿ ನಡೆಸಿ ಪರಿಶೀಲನೆ ಕೈಗೊಂಡಿದ್ದಾರೆ.

ಕುಖ್ಯಾತ ರೌಡಿ ಆಸಾಮಿಗಳಾದ ಸುಜೀತ್, ತೇಜಸ್, ಕಿಶೋರ್, ಸುರೇಶ್, ಅತಾವುಲ್ಲಾ, ಆನಂದ್, ಗೌತಮ್, ಮಣಿಕಾಂತ್, ಆನಂದ್ ಅಲಿಯಾಸ್ ಬ್ರಿಡ್ಜ್, ಶಿವ ಅಲಿಯಾಸ್ ಹಂದಿ ಶಿವ, ಅಂಬರೀಶ್, ಗೆಜ್ಜೆ ವೆಂಕಟೇಶ್ ಸೇರಿದಂತೆ 63 ರೌಡಿ ಶೀಟರ್​ಗಳ ಮನೆಗಳ ಮೇಲೆ ಪೊಲೀಸರು ದಾಳಿ ನಡೆಸಿ ಪರಿಶೀಲನೆ ಕೈಗೊಂಡಿದ್ದಾರೆಂದು ತಿಳಿದುಬಂದಿದೆ.

ಆಗ್ನೇಯ ವಿಭಾಗದ ಡಿಸಿಪಿ ಶ್ರೀನಾಥ್ ಜೋಷಿ ನೇತೃತ್ವದಲ್ಲಿ ನಡೆದ ದಾಳಿಯಲ್ಲಿ 18 ರೌಡಿಶೀಟರ್​ಗಳನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ಕೈಗೊಂಡಿದ್ದಾರೆಂದು ವರದಿಗಳು ತಿಳಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮೋದಿ ಸರ್ಕಾರದ ವಿರುದ್ಧ ಮಹಾಸಮರಕ್ಕೆ INDIA ಮೈತ್ರಿಕೂಟ ಸಜ್ಜು: ಭಿನ್ನಾಭಿಪ್ರಾಯಗಳ ನಡುವೆಯೂ ಬಲ ತುಂಬುವ ಯತ್ನ, ‘ಒಗ್ಗಟ್ಟೇ ನಮ್ಮ ಶಕ್ತಿ’ ಎಂದ ಮಲ್ಲಿಕಾರ್ಜುನ ಖರ್ಗೆ..!

ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಪ್ರಬಲ ಭೂಕಂಪ: 19ಕ್ಕೂ ಹೆಚ್ಚು ಮಂದಿ ಸಾವು, ಇಂಡೋನೇಷ್ಯಾ ಸೇರಿ ಹಲವು ದೇಶಗಳಲ್ಲಿ ಸುನಾಮಿ ಎಚ್ಚರಿಕೆ

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: ಕೂಡಲೇ ಇರಾನ್ ತೊರೆಯಿರಿ; ಭಾರತೀಯರಿಗೆ ಕೇಂದ್ರ ಸರ್ಕಾರ ಸೂಚನೆ!

ಅತ್ತೆಯನ್ನ ಮದುವೆಯಾದ ಅಳಿಯ!: ಸಮಾರಂಭದ ವಿಡಿಯೋ ವೈರಲ್!

ಟ್ರಂಪ್ ಸೂಚನೆಗೆ ಕ್ಯಾರೆ ಎನ್ನದ ಇಸ್ರೇಲ್: ಇರಾನ್ ಮೇಲೆ ವೈಮಾನಿಕ ದಾಳಿ; ಟೆಹ್ರಾನ್ ವಾಯುಪ್ರದೇಶ ಬಂದ್, ಯುದ್ಧ ಪುನರಾರಂಭ ಸಾಧ್ಯತೆ

SCROLL FOR NEXT