ಕೋಟ ಶ್ರೀನಿವಾಸ ಪೂಜಾರಿ 
ರಾಜ್ಯ

ನನ್ನ ಆಸ್ತಿ ಗಳಿಕೆಯ ಬಗ್ಗೆ ತನಿಖೆ ನಡೆಸಿ: ಲೋಕಾಯುಕ್ತಕ್ಕೆ ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮನವಿ

ಬ್ಯಾಂಕ್‌ ಸಾಲದ ಜತೆಗೆ ಸ್ವಂತ ದುಡಿಮೆಯಿಂದ ಉಡುಪಿ ಜಿಲ್ಲೆಯ ಕೋಟ ಗ್ರಾ.ಪಂ. ವ್ಯಾಪ್ತಿಯ ಗಿಳಿಯಾರು ಗ್ರಾಮದಲ್ಲಿ 13 ಸೆಂಟ್ಸ್‌ ಜಾಗದಲ್ಲಿ 60 ಲಕ್ಷ ರೂ. ವೆಚ್ಚದಲ್ಲಿ ಮನೆ ನಿರ್ಮಿಸುತ್ತಿದ್ದೇನೆ.

ಉಡುಪಿ: ಬ್ಯಾಂಕ್‌ ಸಾಲದ ಜತೆಗೆ ಸ್ವಂತ ದುಡಿಮೆಯಿಂದ ಉಡುಪಿ ಜಿಲ್ಲೆಯ ಕೋಟ ಗ್ರಾ.ಪಂ. ವ್ಯಾಪ್ತಿಯ ಗಿಳಿಯಾರು ಗ್ರಾಮದಲ್ಲಿ 13 ಸೆಂಟ್ಸ್‌ ಜಾಗದಲ್ಲಿ 60 ಲಕ್ಷ ರೂ. ವೆಚ್ಚದಲ್ಲಿ ಮನೆ ನಿರ್ಮಿಸುತ್ತಿದ್ದೇನೆ. ಆದರೆ ಕೆಲವರು 6 ಕೋಟಿ ರೂ. ವೆಚ್ಚದಲ್ಲಿ ಮನೆ ಕಟ್ಟಿಸುತ್ತಿರುವುದಾಗಿ ಸುಳ್ಳು ಮಾಹಿತಿ ಹರಡಿಸುತ್ತಿದ್ದು, ತನಿಖೆ ನಡೆಸಬೇಕು ಎಂದು ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಲೋಕಾಯುಕ್ತಕ್ಕೆ ಮನವಿ ಸಲ್ಲಿಸಿದ್ದಾರೆ.

3 ಬಾರಿ ವಿಧಾನ ಪರಿಷತ್‌ ಸದಸ್ಯ, 2 ಬಾರಿ ಸಂಪುಟ ದರ್ಜೆ ಸಚಿವ ಹಾಗೂ 1 ಬಾರಿ ಪ್ರತಿಪಕ್ಷದ ನಾಯಕನಾಗಿದ್ದು, ಪ್ರತಿ ವರ್ಷ ಆಸ್ತಿಯ ವಿವರಗಳನ್ನು ಲೋಕಾಯುಕ್ತರಿಗೆ ಸಲ್ಲಿಸುತ್ತಾ ಬಂದಿದ್ದೇನೆ. ಆದರೂ, ಈಗ ನಿರ್ಮಿಸುತ್ತಿರುವ ಮನೆಯ ಬಗ್ಗೆ ವಿನಾಕಾರಣ ಅಪಪ್ರಚಾರ ಮಾಡುತ್ತಿರುವುದು ನೋವುಂಟು ಮಾಡಿದೆ ಎಂದು ಅವರು ತಿಳಿಸಿದ್ದಾರೆ.

ಖಾಸಗಿ ಆಸ್ಪತ್ರೆಗಳು ಹೆಚ್ಚು ಶುಲ್ಕ ವಿಧಿಸುವಂತಿಲ್ಲ: ಕೋಟ ಶ್ರೀನಿವಾಸ ಪೂಜಾರಿ. ಸರಳ ಸಜ್ಜನಿಕೆಯಿಂದ ರಾಜ್ಯದ ಜನರ ಗಮನ ಸೆಳೆದಿರುವ ಮಾಜಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿಯವರ ಮೇಲೆ ಆದಾಯಕ್ಕಿಂತ ಹೆಚ್ಚು ಗಳಿಕೆಯ ಟೀಕೆಯನ್ನು ಸಾಮಾಜಿಕ ಜಾಲತಾಣದಲ್ಲಿ ಮಾಡಲಾಗುತ್ತಿದೆ.

ಸ್ವಂತ ಆದಾಯದಿಂದ 13 ಸೆಂಟ್ಸ್‌ ಜಾಗ ಖರೀದಿಸಿ ಗ್ರಾ.ಪಂ.ನಿಂದ ಪರವಾನಗಿ ಪಡೆದು ಮನೆ ಕಟ್ಟಿಸುತ್ತಿದ್ದೇನೆ. 2 ವರ್ಷ ಹಿಂದೆ ಅಪೆಕ್ಸ್‌ ಬ್ಯಾಂಕ್‌ನಿಂದ 35 ಲಕ್ಷ ರೂ. ಸಾಲ ಪಡೆಯಲಾಗಿದ್ದು, ಮತ್ತೆ 40 ಲಕ್ಷ ರೂ. ಸಾಲಕ್ಕಾಗಿ ಬ್ಯಾಂಕ್‌ಗೆ ಅರ್ಜಿ ಸಲ್ಲಿಸಿದ್ದೇನೆ. ಸಚಿವ ಸಂಪುಟ ವಿಸ್ತರಣೆ ಸೇರಿದಂತೆ ಮಹತ್ತರ ವಿದ್ಯಮಾನಗಳು ನಡೆಯುತ್ತಿರುವ ಸಂದರ್ಭ ಸುಳ್ಳು ಸುದ್ದಿ ಹರಡಲಾಗುತ್ತಿದೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

"ನನ್ನ ಮಗ ಎಂಬಿಎ ಮುಗಿಸಿ ಸ್ವಂತ ಉದ್ದಿಮೆ ನಡೆಸುತ್ತಿದ್ದು, ಇಬ್ಬರು ಪುತ್ರಿಯರ ವಿದ್ಯಾಭ್ಯಾಸ ಅಂತಿಮ ಹಂತದಲ್ಲಿದೆ. ನನ್ನ ಮಗನ ಸ್ವಂತ ದುಡಿಮೆ ಮತ್ತು ನನ್ನ ದುಡಿಮೆಯ ಹಣದಲ್ಲಿ 60 ಲಕ್ಷ ರೂಪಾಯಿ ವೆಚ್ಚದಲ್ಲಿ ಮನೆ ನಿರ್ಮಾಣವಾಗುತ್ತಿದೆ. ಮನೆ ನಿರ್ಮಾಣಕ್ಕಾಗಿ ಎರಡು ವರ್ಷಗಳ ಹಿಂದೆ ಅಪೆಕ್ಸ್ ಬ್ಯಾಂಕಿನಲ್ಲಿ 35 ಲಕ್ಷ ಸಾಲ ಪಡೆದು ಸಂಬಳ ಮತ್ತು ಗೌರವ ಧನದ ಮೂಲಕ ಸಾಲ ಮರುಪಾವತಿ ಮಾಡಿದ್ದೇನೆ. ಮನೆ ಕಟ್ಟಲು ಹಣ ಕಡಿಮೆಯಾಗಿರುವುದರಿಂದ ಮತ್ತೆ ಬ್ರಹ್ಮಾವರದ ವಾರಂಬಳ್ಳಿ ಎಸ್‌ಬಿಐ ಬ್ಯಾಂಕ್ ಶಾಖೆಯಲ್ಲಿ 40
ಲಕ್ಷ ಸಾಲಕ್ಕಾಗಿ ದಾಖಲಾತಿಗಳನ್ನು ನೀಡಲಾಗಿದೆ ಎಂದು ವಿವರಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

AI- ಚಾಲಿತ ಡಿಜಿಟಲೀಕರಣ, SIR ಕುರಿತು CECಗೆ ಐದನೇ ಪತ್ರ ಬರೆದ ಮಮತಾ ಬ್ಯಾನರ್ಜಿ

Vijay Hazare Trophy: ಸೆಮಿಫೈನಲ್‌ಗೆ ಲಗ್ಗೆ ಇಟ್ಟ ಕರ್ನಾಟಕ

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

UP ದಲಿತ ಮಹಿಳೆ ಕೊಲೆ: ಯೋಗಿ ಸರ್ಕಾರ ಜಾತಿ, ಧರ್ಮದ ಆಧಾರದಲ್ಲಿ ದ್ವೇಷಕ್ಕೆ ಪ್ರಚೋದನೆ- ಕಾಂಗ್ರೆಸ್ ಕಿಡಿ!

Indian Stock Market: 5 ದಿನಗಳ ಸತತ ಕುಸಿತಕ್ಕೆ ಕೊನೆಗೂ ಬ್ರೇಕ್, Sensex 301 ಅಂಕ ಏರಿಕೆ!

SCROLL FOR NEXT