ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರು: ನವಜಾತ ಶಿಶು ಕದ್ದು ರೂ.15 ಲಕ್ಷಕ್ಕೆ ಮಾರಾಟ, ವೈದ್ಯೆ ಬಂಧನ!

ಚಾಮರಾಜಪೇಟೆಯ ಬಿಬಿಎಂಪಿ ಆಸ್ಪತ್ರೆಯಲ್ಲಿ ನಡೆದಿದ್ದ ನವಜಾತ ಶಿಶು ಅಪಹರಣ ಪ್ರಕರಣ ಭೇದಿಸುವಲ್ಲಿ ದಕ್ಷಿಣ ವಿಭಾಗದ ಪೊಲೀಸರು ಯಶಸ್ವಿಯಾಗಿದ್ದು, ಈ ಸಂಬಂಧ ವೈದ್ಯೆಯೊಬ್ಬರನ್ನು ಬಂಧನಕ್ಕೊಳಪಡಿಸಿದ್ದಾರೆ. 

ಬೆಂಗಳೂರು: ಚಾಮರಾಜಪೇಟೆಯ ಬಿಬಿಎಂಪಿ ಆಸ್ಪತ್ರೆಯಲ್ಲಿ ನಡೆದಿದ್ದ ನವಜಾತ ಶಿಶು ಅಪಹರಣ ಪ್ರಕರಣ ಭೇದಿಸುವಲ್ಲಿ ದಕ್ಷಿಣ ವಿಭಾಗದ ಪೊಲೀಸರು ಯಶಸ್ವಿಯಾಗಿದ್ದು, ಈ ಸಂಬಂಧ ವೈದ್ಯೆಯೊಬ್ಬರನ್ನು ಬಂಧನಕ್ಕೊಳಪಡಿಸಿದ್ದಾರೆ. 

ನಗರದ ಬನ್ನೇರುಘಟ್ಟ ರಸ್ತೆಯಲ್ಲಿರುವ ಖಾಸಗಿ ಆಸ್ಪತ್ರೆಯ ಮನೋವೈದ್ಯೆ ಡಾ.ರಶ್ಮಿ (34) ಬಂಧಿತ ವೈದ್ಯೆಯಾಗಿದ್ದಾರೆ. ನವಜಾತ ಶಿಶು ಅಪಹರಿಸಿದ್ದ ವೈದ್ಯೆ, ಮಗುವನ್ನು ರೂ.15 ಲಕ್ಷಕ್ಕೆ ಕೊಪ್ಪಳದ ದಂಪತಿಗೆ ಮಾರಾಟ ಮಾಡಿರುವುದು ವಿಚಾರಣೆ ವೇಳೆ ತಿಳಿದುಬಂದಿದೆ. 

ಇದೀಗ ಆರೋಪಿ ವೈದ್ಯೆಯನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದು, ಮಾರಾಟ ಮಾಡಲಾಗಿದ್ದ ಮಗುವನ್ನು ರಕ್ಷಣೆ ಮಾಡಲಾಗಿದೆ ಎಂದು ದಕ್ಷಿಣ ವಿಭಾಗದ ಡಿಸಿಪಿ ಹರೀಶ್ ಪಾಂಡೆಯವರು ಹೇಳಿದ್ದಾರೆ. 

ಮಗುವನ್ನು ಖರೀದಿಸಿದ್ದ ಕೊಪ್ಪಳ ಮೂಲದ ದಂಪತಿಗೆ ಬುದ್ದಮಾಂದ್ಯ ಮಗುವಿತ್ತು. ಅದರ ಚಿಕಿತ್ಸೆಗೆ ಅವರು 2014ರಲ್ಲಿ ಹುಬ್ಬಳ್ಳಿಯ ಸುತ್ತೂರಿನಲ್ಲಿರುವ ಆಸ್ಪತ್ರೆಗೆ ತೆರಳಿದ್ದಾಗ, ಅಲ್ಲಿ ಅವರಿಗೆ ಡಾ.ರಶ್ಮಿ ಪರಿಚಯವಾಗಿತ್ತು. ಹೀಗೆ ಒಡನಾಟ ಬೆಳೆಗ ಬಳಿಕ ರಶ್ಮಿ, ದಂಪತಿಗೆ ನೀವು ಭಯಪಡುವ ಅಗತ್ಯವಿಲ್ಲ. ಮತ್ತೊಂದು ಮಗು ನೀವು ಪಡೆಯಬಹುದು. ವೀರ್ಯಾಣು ಮತ್ತು ಅಂಡಾಣು ತೆಗೆದುಕೊಂಡು ಬಾಡಿಗೆ ತಾಯಿ ಹೊಟ್ಟೆಯಲ್ಲಿ ನಿಮ್ಮದೇ ಮಗು ಬೆಳಸಬಹುದು. ಅದಕ್ಕಾಗಿ ರೂ.15 ಲಕ್ಷ ಖರ್ಚಾಗುತ್ತದೆ. ಮಗು ಜನಿಸಿದ ಬಳಿಕ ನಿಮಗೆ ತಂದುಕೊಡುತ್ತೇನೆಂದು ತಿಳಿಸಿದ್ದರು. 

ಈ ಮಾತು ನಂಬಿದ್ದ ದಂಪತಿಗಳು, ವೈದ್ಯಗೆ ಹಣ ಕೊಡಲು ಸಮ್ಮತಿಸಿದ್ದಾರೆ. ಬಳಿಕ ಬಾಡಿಗೆ ತಾಯಿ ಹೊಟ್ಟೆಯಲ್ಲಿ ಮಗು ಗರ್ಭ ಧರಿಸಿದೆ ಎಂದು ಆ ಪೋಷಕರಿಗೆ ವೈದ್ಯೆ ಸುಳ್ಳು ಹೇಳಿದ್ದಳು. ಹೀಗಿರುವಾಗ ಹುಬ್ಬಳ್ಳಿಯ ಆಸ್ಪತ್ರೆ ಕೆಲಸಕ್ಕೆ ರಾಜೀನಾಮೆ ನೀಡಿದ್ದ ರಶ್ಮಿ, ಬೆಂಗಳೂರಿನ ಖಾಸಗಿ ಆಸ್ಪತ್ರೆ ಸೇರಿದ್ದರು. 

ಆಗ ಅದೇ ಸಮಯದಲ್ಲಿಯೇ ಚಾಮರಾಜಪೇಟೆ ಬಿಬಿಎಂಪಿ ಆಸ್ಪತ್ರೆಯಲ್ಲಿ ಹುಸ್ನಾ ಬಾನು ಎಂಬುವವರು ಗಂಡು ಮಗುವಿಗೆ ಜನ್ಮ ನೀಡಿದ್ದರು. ಆಸ್ಪತ್ರೆಗೆ ವೈದ್ಯೆಯಂತೆ ಬಂದಿದ್ದ ರಶ್ಮಿ ಮಗುವನ್ನು ಅಪಹರಿಸಿಕೊಂಡು ಹೋಗಿ ದಂಪತಿಗೆ ನೀಡಿದ್ದಾರೆ. ಇದಕ್ಕೆ ಪ್ರತಿಯಾಗಿ ರೂ.15 ಲಕ್ಷ ಪಡೆದಿದ್ದರು ಎನ್ನಲಾಗಿದೆ. 

ಇತ್ತ ಮಗು ಕಳವಾದ ಹಿನ್ನೆಲೆಯಲ್ಲಿ ಮಗುವಿಗಾಗಿ ಕುಟುಂಬಸ್ಥರು ಆಸ್ಪತ್ರೆಯಲ್ಲಿ ತೀವ್ರವಾಗಿ ಹುಡುಕಾಡಿದ್ದಾರೆ. ಬಳಿಕ ಹತಾಶರಾಗಿ ಚಾಮರಾಜಪೇಟೆ ಠಾಣೆಗೆ ದೂರು ನೀಡಿದ್ದಾರೆ. 

ವರ್ಷವಾದರೂ ಮಗು ಪತ್ತೆಯಾಗದ ಹಿನ್ನೆಲೆಯಲ್ಲಿ ಬೇಸರಗೊಂಡು ಪೋಷಕರು ಹೈಕೋರ್ಟ್ ಮೊರೆ ಹೋಗಿದ್ದಾರೆ. ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಾಲಯ ಶೀಘ್ರವೇ ಮಗು ಪತ್ತೆ ಹಚ್ಚುವಂತೆ ಪೊಲೀಸರಿಗೆ ಸೂಚಿಸಿತ್ತು.

ನ್ಯಾಯಾಲಯದ ಸೂಚನೆ ಹಿನ್ನೆಲೆಯಲ್ಲಿ ತನಿಖೆ ಚುರುಕುಗೊಳಿಸಿದ್ದ ಪೊಲೀಸರು, ಘಟನಾ ಸ್ಥಳದ ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿಗಳನ್ನು ಸತತ ಪರಿಶೀಲನೆ ಹಾಗೂ ಒಂದು ಸಾವಿರಕ್ಕೂ ಹೆಚ್ಚು ದೂರುವಾಣಿ ಕರೆಗಳ ವಿವರ ಕಲೆಹಾಕಿ, ಅನುಮಾನ ಬಂದವರನ್ನು ವಿಚಾರಣೆಗೊಳಪಡಿಸಿದ್ದಾರೆ. ಈ ಕಾರ್ಯಾಚರಣೆ ಅಂತಿಮವಾಗಿ ಫಲ ನೀಡಿ, ಅವರನ್ನು ವೈದ್ಯೆಯ ಬಳಿ ಕರೆದೊಯ್ದಿದೆ. 

ವಿಚಾರಣೆ ವೇಳೆ ವೈದ್ಯೆ ತಪ್ಪೊಪ್ಪಿಕೊಂಡಿದ್ದು, ಸಾಲ ಮರುಪಾವತಿ ಮಾಡುವ ಸಲುವಾಗಿ ಅಪರಾಧ ಎಸಗಿರುವುದಾಗಿ ವೈದ್ಯೆ ಹೇಳಿದ್ದಾರೆಂದು ತಿಳಿದುಬಂದಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT