ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಸಾಮಾಜಿಕ ಕಾರ್ಯಕರ್ತನ ವಿರುದ್ಧ ಎವಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ದೂರು ದಾಖಲು

ಖಾಸಗಿ ಆಸ್ಪತ್ರೆಗಳ ಮೂಲಕ ಕೋವಿಡ್ ಲಸಿಕೆ ಮಾರಾಟ ಮಾಡಿಸಿ ಬಸವನಗುಡಿ ಶಾಸಕ ಕಮಿಷನ್ ಪಡೆಯುತ್ತಿದ್ದಾರೆ  ಎಂಬ ಆರೋಪಕ್ಕೆ ಸಂಬಂಧಿಸಿದಂತೆ  ಎವಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ  ಸಾಮಾಜಿಕ ಕಾರ್ಯಕರ್ತನ ವಿರುದ್ಧ ಗಿರಿನಗರ ಪೊಲೀಸ್ ಠಾಣೆಯಲ್ಲಿ  ದೂರು ದಾಖಲಿಸಿದ್ದಾರೆ.

ಬೆಂಗಳೂರು: ಖಾಸಗಿ ಆಸ್ಪತ್ರೆಗಳ ಮೂಲಕ ಕೋವಿಡ್ ಲಸಿಕೆ ಮಾರಾಟ ಮಾಡಿಸಿ ಬಸವನಗುಡಿ ಶಾಸಕ ಕಮಿಷನ್ ಪಡೆಯುತ್ತಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಎವಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ  ಸಾಮಾಜಿಕ ಕಾರ್ಯಕರ್ತನ ವಿರುದ್ಧ ಗಿರಿನಗರ ಪೊಲೀಸ್ ಠಾಣೆಯಲ್ಲಿ  ದೂರು ದಾಖಲಿಸಿದ್ದಾರೆ.

ಆಸ್ಪತ್ರೆ ಮತ್ತು ಶಾಸಕರ ಮಾನಹಾನಿ ಮಾಡಲು ಯತ್ನಿಸುತ್ತಿದ್ದಾರೆ, ಹೀಗಾಗಿ ಅವರ ವಿರುದ್ಧ ಕ್ರಿಮಿನಲ್ ಕ್ರಮ ಕೈಗೊಳ್ಳಬೇಕೆಂದು ಎವಿ ಆಸ್ಪತ್ರೆ ಅಧ್ಯಕ್ಷ ಡಾ.ರಾಜೇಶ್ ಮೂರ್ತಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

‘ಆಸ್ಪತ್ರೆ ಹೆಸರು ಹೇಳಿಕೊಂಡು ಸುಖಾಸುಮ್ಮನೇ ಆರೋಪ ಮಾಡಿರುವ ಸಾಮಾಜಿಕ ಕಾರ್ಯಕರ್ತ ಆಸ್ಪತ್ರೆ ಘನತೆಗೆ ಧಕ್ಕೆ ತಂದಿದ್ದಾರೆ’ ಎಂದು ಆರೋಪಿಸಿ ಎ.ವಿ. ಮಲ್ಟಿ ಸ್ಪೆಷಲಿಸ್ಟ್ ಆಸ್ಪತ್ರೆ ಆಡಳಿತ ಮಂಡಳಿ ಗಿರಿನಗರ ಠಾಣೆಗೆ ದೂರು ನೀಡಿದೆ. ಅದರನ್ವಯ ವೆಂಕಟೇಶ್ ಅವರಿಗೆ ಸೋಮವಾರ ನೋಟಿಸ್ ನೀಡಿರುವ ಪೊಲೀಸರು, ವಿಚಾರಣೆಗಾಗಿ ಠಾಣೆಗೆ
ಹಾಜರಾಗುವಂತೆ ಸೂಚಿಸಿದ್ದಾರೆ.

ಬನಶಂಕರಿ ಮೂರನೇ ಹಂತದಲ್ಲಿ ಆಸ್ಪತ್ರೆಯಿದೆ, ಬಸವನಗುಡಿ ಶಾಸಕ ಖಾಸಗಿ ಆಸ್ಪತ್ರೆಗಳ ಮೂಲಕ ಕೋವಿಡ್ ಲಸಿಕೆ ಮಾರಾಟ ಮಾಡಿಸಿ ಕಮಿಷನ್ ಪಡೆಯುತ್ತಿದ್ದಾರೆ ಎಂದು ಆರೋಪಿಸಿ ಆಡಿಯೊ ಸಮೇತ ನಗರ ಪೊಲೀಸ್ ಕಮಿಷನರ್  ಸಾಮಾಜಿಕ ಕಾರ್ಯಕರ್ತರೊಬ್ಬರು  ದೂರು ನೀಡಿದ್ದರು.

ಆದರೆ ಈ ಸಂಬಂಧ ಸ್ಪಷ್ಟನೆ ನೀಡಿರುವ ರಾಜೇಶ್ ಮೂರ್ತಿ ಲಸಿಕೆ ಮಾರಾಟಕ್ಕೂ ಶಾಸಕರಿಗೂ ಯಾವುದೇ ಸಂಬಂಧವಿಲ್ಲ, ಘಟನೆಯ ಬಗ್ಗೆ ವಿಷಾಧ ವ್ಯಕ್ತಪಡಿಸಿದ ಅವರು ಫೋನ್ ಕರೆ ವಿವರಗಳನ್ನು ತನಿಖೆ ಮಾಡುವಂತೆ ಪೊಲೀಸರಿಗೆ ಮನವಿ ಮಾಡಿದರು. ಅವರ ಸಂಭಾಷಣೆಯ ಬಗ್ಗೆ ವಿವರಗಳನ್ನು ಕೋರಿ ಸಾಮಾಜಿಕ ಕಾರ್ಯಕರ್ತರಿಗೆ ನೋಟಿಸ್ ನೀಡಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

SCROLL FOR NEXT