ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಸಾಮಾಜಿಕ ಕಾರ್ಯಕರ್ತನ ವಿರುದ್ಧ ಎವಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ದೂರು ದಾಖಲು

ಖಾಸಗಿ ಆಸ್ಪತ್ರೆಗಳ ಮೂಲಕ ಕೋವಿಡ್ ಲಸಿಕೆ ಮಾರಾಟ ಮಾಡಿಸಿ ಬಸವನಗುಡಿ ಶಾಸಕ ಕಮಿಷನ್ ಪಡೆಯುತ್ತಿದ್ದಾರೆ  ಎಂಬ ಆರೋಪಕ್ಕೆ ಸಂಬಂಧಿಸಿದಂತೆ  ಎವಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ  ಸಾಮಾಜಿಕ ಕಾರ್ಯಕರ್ತನ ವಿರುದ್ಧ ಗಿರಿನಗರ ಪೊಲೀಸ್ ಠಾಣೆಯಲ್ಲಿ  ದೂರು ದಾಖಲಿಸಿದ್ದಾರೆ.

ಬೆಂಗಳೂರು: ಖಾಸಗಿ ಆಸ್ಪತ್ರೆಗಳ ಮೂಲಕ ಕೋವಿಡ್ ಲಸಿಕೆ ಮಾರಾಟ ಮಾಡಿಸಿ ಬಸವನಗುಡಿ ಶಾಸಕ ಕಮಿಷನ್ ಪಡೆಯುತ್ತಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಎವಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ  ಸಾಮಾಜಿಕ ಕಾರ್ಯಕರ್ತನ ವಿರುದ್ಧ ಗಿರಿನಗರ ಪೊಲೀಸ್ ಠಾಣೆಯಲ್ಲಿ  ದೂರು ದಾಖಲಿಸಿದ್ದಾರೆ.

ಆಸ್ಪತ್ರೆ ಮತ್ತು ಶಾಸಕರ ಮಾನಹಾನಿ ಮಾಡಲು ಯತ್ನಿಸುತ್ತಿದ್ದಾರೆ, ಹೀಗಾಗಿ ಅವರ ವಿರುದ್ಧ ಕ್ರಿಮಿನಲ್ ಕ್ರಮ ಕೈಗೊಳ್ಳಬೇಕೆಂದು ಎವಿ ಆಸ್ಪತ್ರೆ ಅಧ್ಯಕ್ಷ ಡಾ.ರಾಜೇಶ್ ಮೂರ್ತಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

‘ಆಸ್ಪತ್ರೆ ಹೆಸರು ಹೇಳಿಕೊಂಡು ಸುಖಾಸುಮ್ಮನೇ ಆರೋಪ ಮಾಡಿರುವ ಸಾಮಾಜಿಕ ಕಾರ್ಯಕರ್ತ ಆಸ್ಪತ್ರೆ ಘನತೆಗೆ ಧಕ್ಕೆ ತಂದಿದ್ದಾರೆ’ ಎಂದು ಆರೋಪಿಸಿ ಎ.ವಿ. ಮಲ್ಟಿ ಸ್ಪೆಷಲಿಸ್ಟ್ ಆಸ್ಪತ್ರೆ ಆಡಳಿತ ಮಂಡಳಿ ಗಿರಿನಗರ ಠಾಣೆಗೆ ದೂರು ನೀಡಿದೆ. ಅದರನ್ವಯ ವೆಂಕಟೇಶ್ ಅವರಿಗೆ ಸೋಮವಾರ ನೋಟಿಸ್ ನೀಡಿರುವ ಪೊಲೀಸರು, ವಿಚಾರಣೆಗಾಗಿ ಠಾಣೆಗೆ
ಹಾಜರಾಗುವಂತೆ ಸೂಚಿಸಿದ್ದಾರೆ.

ಬನಶಂಕರಿ ಮೂರನೇ ಹಂತದಲ್ಲಿ ಆಸ್ಪತ್ರೆಯಿದೆ, ಬಸವನಗುಡಿ ಶಾಸಕ ಖಾಸಗಿ ಆಸ್ಪತ್ರೆಗಳ ಮೂಲಕ ಕೋವಿಡ್ ಲಸಿಕೆ ಮಾರಾಟ ಮಾಡಿಸಿ ಕಮಿಷನ್ ಪಡೆಯುತ್ತಿದ್ದಾರೆ ಎಂದು ಆರೋಪಿಸಿ ಆಡಿಯೊ ಸಮೇತ ನಗರ ಪೊಲೀಸ್ ಕಮಿಷನರ್  ಸಾಮಾಜಿಕ ಕಾರ್ಯಕರ್ತರೊಬ್ಬರು  ದೂರು ನೀಡಿದ್ದರು.

ಆದರೆ ಈ ಸಂಬಂಧ ಸ್ಪಷ್ಟನೆ ನೀಡಿರುವ ರಾಜೇಶ್ ಮೂರ್ತಿ ಲಸಿಕೆ ಮಾರಾಟಕ್ಕೂ ಶಾಸಕರಿಗೂ ಯಾವುದೇ ಸಂಬಂಧವಿಲ್ಲ, ಘಟನೆಯ ಬಗ್ಗೆ ವಿಷಾಧ ವ್ಯಕ್ತಪಡಿಸಿದ ಅವರು ಫೋನ್ ಕರೆ ವಿವರಗಳನ್ನು ತನಿಖೆ ಮಾಡುವಂತೆ ಪೊಲೀಸರಿಗೆ ಮನವಿ ಮಾಡಿದರು. ಅವರ ಸಂಭಾಷಣೆಯ ಬಗ್ಗೆ ವಿವರಗಳನ್ನು ಕೋರಿ ಸಾಮಾಜಿಕ ಕಾರ್ಯಕರ್ತರಿಗೆ ನೋಟಿಸ್ ನೀಡಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT