ಸಾಂದರ್ಭಿಕ ಚಿತ್ರ 
ರಾಜ್ಯ

ಅಗತ್ಯವಿರುವವರಿಗೆ ಆಹಾರ ಪೂರೈಸಲು ಸ್ವಂತ ವಾಹನ ಬಳಸುವಂತಿಲ್ಲ: ಬೆಂಗಳೂರು ಪೊಲೀಸರ ಎಚ್ಚರಿಕೆ

ಅಗತ್ಯವಿರುವವರಿಗೆ ಆಹಾರ ಪ್ಯಾಕೆಟ್‌ಗಳನ್ನು ವಿತರಿಸುವ ನೆಪದಲ್ಲಿ ಜನರು ತಮ್ಮ ಸ್ವಂತ ವಾಹನಗಳನ್ನು ಹೊರಗೆ ತರಬಾರದು ಅವರು ಸರಕು ವಾಹನಗಳನ್ನು ಬಳಸಬೇಕು ಅಥವಾ ವಿತರಣಾ ಕಂಪನಿಗಳ ಮೂಲಕ ಹಂಚಬೇಕು ಎಂದು ಬೆಂಗಳೂರು ಪೊಲೀಸರು ತಿಳಿಸಿದ್ದಾರೆ.

ಬೆಂಗಳೂರು: ಅಗತ್ಯವಿರುವವರಿಗೆ ಆಹಾರ ಪ್ಯಾಕೆಟ್‌ಗಳನ್ನು ವಿತರಿಸುವ ನೆಪದಲ್ಲಿ ಜನರು ತಮ್ಮ ಸ್ವಂತ ವಾಹನಗಳನ್ನು ಹೊರಗೆ ತರಬಾರದು ಅವರು ಸರಕು ವಾಹನಗಳನ್ನು ಬಳಸಬೇಕು ಅಥವಾ ವಿತರಣಾ ಕಂಪನಿಗಳ ಮೂಲಕ ಹಂಚಬೇಕು ಎಂದು ಬೆಂಗಳೂರು ಪೊಲೀಸರು ತಿಳಿಸಿದ್ದಾರೆ.

ತಮ್ಮ ವಾಹನಗಳನ್ನು ಹೊರಗೆ ತರಲು ಈ ನೆಪ ಬಳಸುತ್ತಿದ್ದಾರೆ, ಆದರೆ ಇದನ್ನು ಕ್ಷಮಿಸಲಾಗದು ಎಂದು ಪೊಲೀಸರು ಸ್ಪಷ್ಟ ಪಡಿಸಿದ್ದಾರೆ, ಕಾರು ಮತ್ತು ದ್ವಿಚಕ್ರ ವಾಹನಗಳಲ್ಲಿ ಆಹಾರ ಸಾಗಿಸುತ್ತಿದ್ದ ಹಲವು ಮಂದಿಯ ವಾಹನಗಳನ್ನು ಪೊಲೀಸರು ಸೀಜ್ ಮಾಡಿದ್ದಾರೆ.

ಬೊಮ್ಮನಹಳ್ಳಿ ಸಿಗ್ನಲ್ ಬಳಿ ಬಿಎಂಡಬ್ಲ್ಯು ಕಾರನ್ನು ವಶಪಡಿಸಿಕೊಳ್ಳಲಾಗಿದೆ. ತಾನು ಅಗತ್ಯವಿರುವವರಿಗೆ ಆಹಾರವನ್ನು ವಿತರಿಸುತ್ತಿದ್ದೇನೆ ಎಂದು ಚಾಲಕ ಹೇಳಿಕೊಂಡಿದ್ದಾನೆ ಮತ್ತು ಕಾರಿನಲ್ಲಿ ಸುಮಾರು 10 ಆಹಾರ ಪ್ಯಾಕೆಟ್‌ಗಳು ಪತ್ತೆಯಾಗಿವೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬಡವರಿಗೆ ಮತ್ತು ನಿರ್ಗತಿಕರಿಗೆ ಆಹಾರ ಪ್ಯಾಕೆಟ್‌ಗಳನ್ನು ವಿತರಿಸಲು ಬಯಸುವ ಯಾರಾದರೂ ಸರಕು ವಾಹನಗಳನ್ನು ಬಳಸುವ ಮೂಲಕ ಇದನ್ನು ಮಾಡಬಹುದು ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ. ಅನೇಕ ಸಂಸ್ಥೆಗಳು ಈಗಾಗಲೇ ಈ ಸೇವೆಯನ್ನು ನೀಡುತ್ತಿವೆ. ಇದಕ್ಕಾಗಿ ಅವರು ವಿತರಣಾ ಕಂಪನಿಗಳನ್ನು ಸಹ ಬಳಸಬಹುದು. ಆದರೆ ಅವರು ಕಾರುಗಳಲ್ಲಿ ಅಥವಾ ಬೈಕ್‌ಗಳಲ್ಲಿ ವಿತರಿಸಲು ಸಾಧ್ಯವಿಲ್ಲ ಎಂದು ಅಧಿಕಾರಿಯೊಬ್ಬರು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

SCROLL FOR NEXT