ಸಾಂದರ್ಭಿಕ ಚಿತ್ರ 
ರಾಜ್ಯ

ಅಗತ್ಯವಿರುವವರಿಗೆ ಆಹಾರ ಪೂರೈಸಲು ಸ್ವಂತ ವಾಹನ ಬಳಸುವಂತಿಲ್ಲ: ಬೆಂಗಳೂರು ಪೊಲೀಸರ ಎಚ್ಚರಿಕೆ

ಅಗತ್ಯವಿರುವವರಿಗೆ ಆಹಾರ ಪ್ಯಾಕೆಟ್‌ಗಳನ್ನು ವಿತರಿಸುವ ನೆಪದಲ್ಲಿ ಜನರು ತಮ್ಮ ಸ್ವಂತ ವಾಹನಗಳನ್ನು ಹೊರಗೆ ತರಬಾರದು ಅವರು ಸರಕು ವಾಹನಗಳನ್ನು ಬಳಸಬೇಕು ಅಥವಾ ವಿತರಣಾ ಕಂಪನಿಗಳ ಮೂಲಕ ಹಂಚಬೇಕು ಎಂದು ಬೆಂಗಳೂರು ಪೊಲೀಸರು ತಿಳಿಸಿದ್ದಾರೆ.

ಬೆಂಗಳೂರು: ಅಗತ್ಯವಿರುವವರಿಗೆ ಆಹಾರ ಪ್ಯಾಕೆಟ್‌ಗಳನ್ನು ವಿತರಿಸುವ ನೆಪದಲ್ಲಿ ಜನರು ತಮ್ಮ ಸ್ವಂತ ವಾಹನಗಳನ್ನು ಹೊರಗೆ ತರಬಾರದು ಅವರು ಸರಕು ವಾಹನಗಳನ್ನು ಬಳಸಬೇಕು ಅಥವಾ ವಿತರಣಾ ಕಂಪನಿಗಳ ಮೂಲಕ ಹಂಚಬೇಕು ಎಂದು ಬೆಂಗಳೂರು ಪೊಲೀಸರು ತಿಳಿಸಿದ್ದಾರೆ.

ತಮ್ಮ ವಾಹನಗಳನ್ನು ಹೊರಗೆ ತರಲು ಈ ನೆಪ ಬಳಸುತ್ತಿದ್ದಾರೆ, ಆದರೆ ಇದನ್ನು ಕ್ಷಮಿಸಲಾಗದು ಎಂದು ಪೊಲೀಸರು ಸ್ಪಷ್ಟ ಪಡಿಸಿದ್ದಾರೆ, ಕಾರು ಮತ್ತು ದ್ವಿಚಕ್ರ ವಾಹನಗಳಲ್ಲಿ ಆಹಾರ ಸಾಗಿಸುತ್ತಿದ್ದ ಹಲವು ಮಂದಿಯ ವಾಹನಗಳನ್ನು ಪೊಲೀಸರು ಸೀಜ್ ಮಾಡಿದ್ದಾರೆ.

ಬೊಮ್ಮನಹಳ್ಳಿ ಸಿಗ್ನಲ್ ಬಳಿ ಬಿಎಂಡಬ್ಲ್ಯು ಕಾರನ್ನು ವಶಪಡಿಸಿಕೊಳ್ಳಲಾಗಿದೆ. ತಾನು ಅಗತ್ಯವಿರುವವರಿಗೆ ಆಹಾರವನ್ನು ವಿತರಿಸುತ್ತಿದ್ದೇನೆ ಎಂದು ಚಾಲಕ ಹೇಳಿಕೊಂಡಿದ್ದಾನೆ ಮತ್ತು ಕಾರಿನಲ್ಲಿ ಸುಮಾರು 10 ಆಹಾರ ಪ್ಯಾಕೆಟ್‌ಗಳು ಪತ್ತೆಯಾಗಿವೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬಡವರಿಗೆ ಮತ್ತು ನಿರ್ಗತಿಕರಿಗೆ ಆಹಾರ ಪ್ಯಾಕೆಟ್‌ಗಳನ್ನು ವಿತರಿಸಲು ಬಯಸುವ ಯಾರಾದರೂ ಸರಕು ವಾಹನಗಳನ್ನು ಬಳಸುವ ಮೂಲಕ ಇದನ್ನು ಮಾಡಬಹುದು ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ. ಅನೇಕ ಸಂಸ್ಥೆಗಳು ಈಗಾಗಲೇ ಈ ಸೇವೆಯನ್ನು ನೀಡುತ್ತಿವೆ. ಇದಕ್ಕಾಗಿ ಅವರು ವಿತರಣಾ ಕಂಪನಿಗಳನ್ನು ಸಹ ಬಳಸಬಹುದು. ಆದರೆ ಅವರು ಕಾರುಗಳಲ್ಲಿ ಅಥವಾ ಬೈಕ್‌ಗಳಲ್ಲಿ ವಿತರಿಸಲು ಸಾಧ್ಯವಿಲ್ಲ ಎಂದು ಅಧಿಕಾರಿಯೊಬ್ಬರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT