ಡಾ.ಸಿಎನ್ ಅಶ್ವಥ್ ನಾರಾಯಣ 
ರಾಜ್ಯ

'ಪರೀಕ್ಷೆ ಸಂಬಂಧ ಯಾವುದೇ ಸಭೆಯಲ್ಲಿ ಪಾಲ್ಗೊಂಡಿಲ್ಲ'; ನಕಲಿ ಸುದ್ದಿ ಕುರಿತು ಉಪ ಮುಖ್ಯಮಂತ್ರಿ ಡಾ. ಅಶ್ವಥ್ ನಾರಾಯಣ್ ಸ್ಪಷ್ಟನೆ

ರಾಜ್ಯದಲ್ಲಿ ಪರೀಕ್ಷೆಯನ್ನು ನಡೆಸುವ ಬಗ್ಗೆ ಯಾವುದೇ ಸಭೆಗಳು ಅಥವಾ ಚರ್ಚೆಗಳಲ್ಲಿ ನಾನು ಭಾಗವಹಿಸಿಲ್ಲ ಎಂದು ಕರ್ನಾಟಕ ಉಪ ಮುಖ್ಯಮಂತ್ರಿ ಡಾ.ಅಶ್ವಥ್ ನಾರಾಯಣ್ ಸ್ಪಷ್ಟನೆ ನೀಡಿದ್ದಾರೆ.

ಬೆಂಗಳೂರು: ರಾಜ್ಯದಲ್ಲಿ ಪರೀಕ್ಷೆಯನ್ನು ನಡೆಸುವ ಬಗ್ಗೆ ಯಾವುದೇ ಸಭೆಗಳು ಅಥವಾ ಚರ್ಚೆಗಳಲ್ಲಿ ನಾನು ಭಾಗವಹಿಸಿಲ್ಲ ಎಂದು ಕರ್ನಾಟಕ ಉಪ ಮುಖ್ಯಮಂತ್ರಿ ಡಾ.ಅಶ್ವಥ್ ನಾರಾಯಣ್ ಸ್ಪಷ್ಟನೆ ನೀಡಿದ್ದಾರೆ.

ಕೇಂದ್ರ ಸರ್ಕಾರ 12ನೇ ಸಿಬಿಎಸ್‌ಸಿ 12ನೇ ತರಗತಿಯ ಪರೀಕ್ಷೆ ರದ್ದುಗೊಳಿಸಿದ ಬೆನ್ನಲ್ಲೇ, ರಾಜ್ಯ ಸರ್ಕಾರದ ಮುಂದಿನ ನಡೆಯ ಕುರಿತು ತೀವ್ರ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ, ಈ ಕುರಿತ ಯಾವುದೇ ಸಭೆಯಲ್ಲಿ ತಾವು ಪಾಲ್ಗೊಂಡಿಲ್ಲ ಎಂದು ಉಪಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಸ್ಪಷ್ಟನೆ  ನೀಡಿದ್ದಾರೆ.

ಈ ಕುರಿತು ತಮ್ಮ ಅಧಿಕೃತ ಟ್ವಿಟರ್ ಖಾತೆಯಲ್ಲಿ ಸ್ಪಷ್ಟನೆ ನೀಡಿರುವ ಅವರು, 'ರಾಜ್ಯದಲ್ಲಿ ಪರೀಕ್ಷೆಯನ್ನು ನಡೆಸುವ ಬಗ್ಗೆ ಯಾವುದೇ ಸಭೆಗಳು ಅಥವಾ ಚರ್ಚೆಗಳಲ್ಲಿ ನಾನು ಭಾಗವಹಿಸಿಲ್ಲ. ಸಂಬಂಧಪಟ್ಟ ಇಲಾಖೆ ಈ ಕುರಿತು ಉತ್ತಮ ನಿರ್ಧಾರವನ್ನು ತೆಗೆದುಕೊಳ್ಳಲಿದೆ. ಸೋಶಿಯಲ್ ಮೀಡಿಯಾದಲ್ಲಿ ಈ ಕುರಿತು  ಹರಿದಾಡುತ್ತಿರುವ ಯಾವುದೇ ಹೇಳಿಕೆಗಳು ಸತ್ಯಕ್ಕೆ ದೂರ. ಅಂತಹ ಯಾವುದೇ ಸುಳ್ಳು ಸಂದೇಶವನ್ನು ಫಾರ್ವರ್ಡ್ ಮಾಡಬೇಡಿ' ಎಂದು ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT