ಎನ್.ಎಸ್.ಖೇಡ್ 
ರಾಜ್ಯ

ವಿಜಯಪುರ: ಸರಳ, ಸಜ್ಜನ ರಾಜಕಾರಣಿ ಮಾಜಿ ಶಾಸಕ ಎನ್.ಎಸ್. ಖೇಡ್ ನಿಧನ

ಜಿಲ್ಲೆಯ ಇಂಡಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಎನ್.ಎಸ್.ಖೇಡ್(74) ಅನಾರೋಗ್ಯದಿಂದ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ಬೆಳಿಗ್ಗೆ ನಿಧನರಾಗಿದ್ದಾರೆ.

ವಿಜಯಪುರ: ಜಿಲ್ಲೆಯ ಇಂಡಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಎನ್.ಎಸ್.ಖೇಡ್(74) ಅನಾರೋಗ್ಯದಿಂದ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ಬೆಳಿಗ್ಗೆ ನಿಧನರಾಗಿದ್ದಾರೆ.

ಅವರಿಗೆ ಪತ್ನಿ, ಒಬ್ಬ ಪುತ್ರ, ಇಬ್ಬರು ಪುತ್ರಿಯರು, ಇಬ್ಬರು ಸಹೋದರರು, ನಾಲ್ವರು ಸಹೋದರಿಯರು ಇದ್ದಾರೆ. ಮೃತರ ಅಂತ್ಯಕ್ರಿಯೆ ಸ್ವಗ್ರಾಮ ಸಾವಳಸಂಗದಲ್ಲಿ ಗುರುವಾರ ಸಂಜೆ ಜರುಗಲಿದೆ.

ಇಂಡಿ ತಾಲ್ಲೂಕಿನ ಸಾವಳಸಂಗ ಗ್ರಾಮದ ರೈತ ಕುಟುಂಬದವರಾದ ಎನ್.ಎಸ್.ಖೇಡ್ ಅವರು 1980ರಲ್ಲಿ ಜನತಾ ಪಕ್ಷದಿಂದ ಲೋಕಸಭೆಗೆ ಸ್ಪರ್ಧಿಸಿ, ಕಡಿಮೆ ಮತಗಳಿಂದ ಪರಾಭವಗೊಂಡಿದ್ದರು. ಮಾಜಿ ಪ್ರಧಾನಿಗಳಾದ ಚಂದ್ರಶೇಖರ, ಎಚ್.ಡಿ.ದೇವೆಗೌಡ ಅವರ ದೀರ್ಘ ಕಾಲದ ಒಡನಾಡಿಯಾಗಿದ್ದ ಎನ್.ಎಸ್.ಖೇಡ ಅವರು, 1985-89 ರವರೆಗೆ ಇಂಡಿ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದರು.

ಕಳೆದ ಎರಡು ವರ್ಷಗಳ ಹಿಂದೆ ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರು ವಿಜಯಪುರ ನಗರದ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದರು. ರಾಜಕೀಯದಲ್ಲಿ ಕಲುಷಿತ ವಾತಾವರಣ ಆರಂಭವಾಗುತ್ತಿದ್ದಂತೆ ಅವರು ಸಕ್ರಿಯ ರಾಜಕಾರಣದಿಂದ ದೂರ ಉಳಿದಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT