ಹಳ್ಳಿ ಕಡೆಗೆ ವೈದ್ಯರ ನಡಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಂದರ್ಭದಲ್ಲಿ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ 
ರಾಜ್ಯ

'ನಾನು ಅಂಕಿ-ಅಂಶ ವಿವರಣೆ ಕೇಳಿದ್ದು ತಪ್ಪೇ, ಆರೋಪ ಮಾಡುವುದಿದ್ದರೆ ಸಾಂಸ್ಥಿಕ ಚೌಕಟ್ಟಿನೊಳಗೆ ಮಾಡಬೇಕಿತ್ತು': ರೋಹಿಣಿ ಸಿಂಧೂರಿ 

ಮೈಸೂರಿನ ಇಬ್ಬರು ಮಹಿಳಾ ಐಎಎಸ್ ಅಧಿಕಾರಿಗಳ ಜಗಳ ಬೀದಿಗೆ ಬಂದಿದೆ. ಮೈಸೂರು ಮಹಾನಗರ ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ಆರೋಪಕ್ಕೆ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಪ್ರತಿಕ್ರಿಯಿಸಿದ್ದಾರೆ.

ಮೈಸೂರು: ಮೈಸೂರಿನ ಇಬ್ಬರು ಮಹಿಳಾ ಐಎಎಸ್ ಅಧಿಕಾರಿಗಳ ಜಗಳ ಬೀದಿಗೆ ಬಂದಿದೆ. ಮೈಸೂರು ಮಹಾನಗರ ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ಆರೋಪಕ್ಕೆ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಪ್ರತಿಕ್ರಿಯಿಸಿದ್ದಾರೆ.

ಅಧಿಕಾರಿಗಳಿಗೆ ಕೆಲಸದಲ್ಲಿ ಒತ್ತಡ ಇರುತ್ತದೆ, ಯಾರಿಗೆ ಒತ್ತಡ ಇರುವುದಿಲ್ಲ ಹೇಳಿ, ಅದನ್ನು ಸಾಂಸ್ಥಿಕ ಚೌಕಟ್ಟಿನೊಳಗೆ ಮಾತನಾಡಿ ಬಗೆಹರಿಸಬೇಕೆ ಹೊರತು ಬಹಿರಂಗವಾಗಿ ಆರೋಪ ಮಾಡುವುದು ಎಷ್ಟು ಸರಿ, ನಮ್ಮ ದೂರುಗಳನ್ನು ಕೇಳಲು ಸ್ಥಳೀಯ ಆಯುಕ್ತರು, ಮುಖ್ಯ ಕಾರ್ಯದರ್ಶಿಗಳು ಇರುತ್ತಾರೆ, ದೂರು ನೀಡುವುದಿದ್ದರೂ ಅದಕ್ಕೊಂದು ವ್ಯವಸ್ಥಿತವಾಗಿ ದೂರು ನೀಡುವ ಪ್ರಕ್ರಿಯೆಯಿದೆ. ದೂರಿಗೂ ಒಂದು ವ್ಯವಸ್ಥೆ ಇದೆ, ಯಾರೂ ಕೂಡ ಆ ವ್ಯವಸ್ಥೆಯನ್ನು ಮೀರಬಾರದು, ಅವರ ಗಮನಕ್ಕೆ ತರದೆ ಶಿಲ್ಪಾ ನಾಗ್ ನಿನ್ನೆ ಪತ್ರಿಕಾಗೋಷ್ಠಿ ನಡೆಸಿ ತಮ್ಮ ವಿರುದ್ಧ ಮಾಡಿದ್ದ ಸರಣಿ ಆರೋಪಗಳಿಗೆ ಆಕ್ಷೇಪಿಸಿದರು.

2019ರ ಫೆಬ್ರವರಿ 14ಕ್ಕೆ ಮೈಸೂರು ಮಹಾನಗರ ಪಾಲಿಕೆಗೆ ಆಯುಕ್ತೆಯಾಗಿ ಶಿಲ್ಪಾ ನಾಗ್ ಬಂದಿದ್ದಾರೆ, ಇಷ್ಟು ದಿನ ಇಲ್ಲದ ಸಮಸ್ಯೆ, ಆರೋಪ ಈಗ ಒಂದು ಏಕೆ ಎಂದು ರೋಹಿಣಿ ಸಿಂಧೂರಿ ಪ್ರಶ್ನಿಸಿದರು.

ರೋಹಿಣಿ ಸಿಂಧೂರಿ ಸ್ಪಷ್ಟನೆಯೇನು?: ಸರಿಯಾದ ಅಂಕಿ ಅಂಶ ನೀಡಿ ಎಂದಷ್ಟೇ ನಾನು ಕೇಳಿದ್ದೆ, ವಾರ್ಡ್ ವೈಸ್ ಅಂಕಿ ಅಂಶಗಳು ಎಷ್ಟಿದೆ ಎಂದು ಕೇಳಿದ್ದೆ, ಸಿಎಸ್ ಆರ್ ಫಂಡ್ ಜಿಲ್ಲಾಧಿಕಾರಿ ನಿಯಂತ್ರಣದಲ್ಲಿದೆ, ಯಾವುದಕ್ಕೆ, ಯಾವ ವಾರ್ಡ್ ಗೆ ಎಷ್ಟು ಖರ್ಚು ಮಾಡಿದ್ದೀರಿ, ಎಲ್ಲ 12 ಕೋಟಿ ಖರ್ಚು ಮಾಡಿದ್ದೀರಾ ಎಂದು ಕಾರ್ಪೊರೇಷನ್ ನಲ್ಲಿ ಕೇಳಿದ್ದು ನಿಜ, ಹಳ್ಳಿ ಕಡೆ ವೈದ್ಯರ ನಡೆ ಕಾರ್ಯಕ್ರಮಕ್ಕೂ ನಾವು ಹಣ ನೀಡಬೇಕಾಗಿದೆ. ಈ ಬಗ್ಗೆ ನಾನು ವಿವರಣೆ ಕೇಳಿದ್ದು ತಪ್ಪೇ ಎಂದು ಸಿಂಧೂರಿ ಕೇಳಿದರು.

ಇನ್ನು ಇಂದು ಶಿಲ್ಪಾ ನಾಗ್ ಅವರ ಪರವಾಗಿ ರೋಹಿಣಿ ಸಿಂಧೂರಿ ವಿರುದ್ಧ ಮೈಸೂರು ಮಹಾನಗರ ಪಾಲಿಕೆ ಸದಸ್ಯರು, ಪೌರಕಾರ್ಮಿಕರು, ಅಧಿಕಾರಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ.

ಪಾಲಿಕೆ ಕಾರ್ಮಿಕರು ಇಂದು ತಮ್ಮ ಕೆಲಸಕ್ಕೆ ಬಹಿಷ್ಕಾರ ಹಾಕಿ ಶಿಲ್ಪಾ ನಾಗ್ ಅವರಿಗೆ ನ್ಯಾಯ ಕೊಡಿಸಬೇಕು, ರೋಹಿಣಿ ಸಿಂಧೂರಿಯವರನ್ನು ಬೇರೆ ಕಡೆಗೆ ವರ್ಗಾಯಿಸಬೇಕೆಂದು ಒತ್ತಾಯಿಸಿದರು. 

ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ಆಗಮನ ನಿರೀಕ್ಷೆ: ಇಂದು ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಮೈಸೂರಿಗೆ ಆಗಮಿಸುತ್ತಿದ್ದು ಇಬ್ಬರು ಅಧಿಕಾರಿಗಳ ಜೊತೆ ಮಾತುಕತೆ ನಡೆಸಿ ಇನ್ನೆರಡು ದಿನಗಳೊಳಗೆ ಸಮಸ್ಯೆ ಬಗೆಹರಿಸುವ ವಿಶ್ವಾಸವಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್ ಟಿ ಸೋಮಶೇಖರ್ ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಚೇರಿಯಲ್ಲಿ ಐಟಿ ಶೋಧ ನಡೆಯುತ್ತಿದ್ದಾಗಲೇ ಶೂಟ್ ಮಾಡಿಕೊಂಡ ಸಿ.ಜೆ ರಾಯ್; ಪೊಲೀಸ್ ಆಯುಕ್ತರು ಹೇಳಿದ್ದೇನು?

ಉಪ ಮುಖ್ಯಮಂತ್ರಿ ಹುದ್ದೆಯ ಬಗ್ಗೆ ಎನ್‌ಸಿಪಿ ನಿರ್ಧಾರವನ್ನು ಬೆಂಬಲಿಸುತ್ತೇವೆ: ಫಡ್ನವೀಸ್

12 ರೋಲ್ಸ್ ರಾಯ್ಸ್‌ ಸೇರಿ ಹಲವು ಐಷಾರಾಮಿ ಕಾರು, ಸಾವಿರಾರು ಕೋಟಿ ಒಡೆಯ ಸಿಜೆ ರಾಯ್ ಆತ್ಮಹತ್ಯೆ ಮಾಡಿಕೊಂಡಿದ್ದೇಕೆ?

ಮಹಾರಾಷ್ಟ್ರದ ನೂತನ ಉಪ ಮುಖ್ಯಮಂತ್ರಿಯಾಗಿ ಸುನೇತ್ರ ಪವಾರ್ ನಾಳೆ ಪ್ರಮಾಣ ವಚನ ಸ್ವೀಕಾರ: ಭುಜಬಲ್

BIFF ನಲ್ಲಿ ಪ್ಯಾಲೆಸ್ತೀನ್ ಚಿತ್ರಗಳ ಪ್ರದರ್ಶನಕ್ಕೆ ಪ್ರಕಾಶ್ ರಾಜ್ ಒತ್ತಾಯ: ಬಿಜೆಪಿ ವಾಗ್ದಾಳಿ!

SCROLL FOR NEXT