ಎಸ್ ಟಿ ಸೋಮಶೇಖರ್, ಶಿಲ್ಪಾ ನಾಗ್ 
ರಾಜ್ಯ

ಶಿಲ್ಪಾ ನಾಗ್ ಅವರ ರಾಜೀನಾಮೆ ಸ್ವೀಕರಿಸುವುದಿಲ್ಲ, ಅವರ ಸೇವೆ ಮೈಸೂರಿಗೆ ಬೇಕು: ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್

ಯಾವುದೇ ಕಾರಣಕ್ಕೂ ಮೈಸೂರು ಮಹಾನಗರ ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ಅವರ ರಾಜೀನಾಮೆಯನ್ನು ಸ್ವೀಕರಿಸುವುದಿಲ್ಲ, ಅವರ ಸೇವೆ ಮೈಸೂರು ನಗರಕ್ಕೆ ಅತ್ಯಗತ್ಯವಾಗಿದೆ, ಅವರ ಮನವೊಲಿಸುವ ಕೆಲಸ ಮಾಡುತ್ತೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್ ಟಿ ಸೋಮಶೇಖರ್ ಹೇಳಿದ್ದಾರೆ.

ಬೆಂಗಳೂರು: ಯಾವುದೇ ಕಾರಣಕ್ಕೂ ಮೈಸೂರು ಮಹಾನಗರ ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ಅವರ ರಾಜೀನಾಮೆಯನ್ನು ಸ್ವೀಕರಿಸುವುದಿಲ್ಲ, ಅವರ ಸೇವೆ ಮೈಸೂರು ನಗರಕ್ಕೆ ಅತ್ಯಗತ್ಯವಾಗಿದೆ, ಅವರು ಸಮರ್ಥ ಅಧಿಕಾರಿ, ಅವರ ಮನವೊಲಿಸಿ ರಾಜೀನಾಮೆ ವಾಪಸ್ ತೆಗೆದುಕೊಳ್ಳುವಂತೆ ಮನವಿ ಮಾಡುತ್ತೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್ ಟಿ ಸೋಮಶೇಖರ್ ಹೇಳಿದ್ದಾರೆ.

ಅವರು ಇಂದು ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗೆ ಪ್ರತಿಕ್ರಿಯೆ ನೀಡಿದ ಸಚಿವರು, ಕೊರೋನಾ ಸೋಂಕಿನ ಸಮಯದಲ್ಲಿ ಮೈಸೂರಿನಲ್ಲಿ ಈ ರೀತಿ ಇಬ್ಬರು ಮಹಿಳಾ ಐಎಎಸ್ ಅಧಿಕಾರಿಗಳ ಮಧ್ಯೆ ಭಿನ್ನಾಭಿಪ್ರಾಯ ತಲೆದೋರಬಾರದಾಗಿತ್ತು. ಆಗಿ ಹೋಗಿದೆ, ಅದನ್ನು ಸರಿಮಾಡಲು ಪ್ರಯತ್ನಿಸುತ್ತೇನೆ ಎಂದರು.

ಇಂದು ಮೈಸೂರಿಗೆ ಹೋಗುತ್ತೇನೆ, ಇಬ್ಬರೂ ಅಧಿಕಾರಿಗಳ ಬಳಿ ಮಾತನಾಡಿ ಸಮಸ್ಯೆಯೇನೆಂದು ಕೇಳುತ್ತೇನೆ, ಶಿಲ್ಪಾ ನಾಗ್ ಅವರಲ್ಲಿ ರಾಜೀನಾಮೆ ಕೊಡಬೇಡಿ ಎಂದು ಹೇಳಿದ್ದೇನೆ, ಇಂದು ಕೂಡ ಮನವೊಲಿಸುತ್ತೇನೆ, ಈ ವಿಷಯವನ್ನು ಮುಖ್ಯಮಂತ್ರಿಗಳ ಗಮನಕ್ಕೆ ಸಹ ತಂದಿದ್ದೇವೆ, ಸರ್ಕಾರದ ಮುಖ್ಯ ಕಾರ್ಯದರ್ಶಿಗಳಲ್ಲಿ ಯಾವುದೇ ಕಾರಣಕ್ಕೂ ಅವರ ರಾಜೀನಾಮೆ ಪತ್ರವನ್ನು ಅಂಗೀಕರಿಸಬಾರದು ಎಂದು ಹೇಳಿದ್ದೇನೆ, ಒಬ್ಬ ಐಎಎಸ್ ಹೆಣ್ಣುಮಗಳು ಏಕಾಏಕಿ ಈ ನಿರ್ಧಾರಕ್ಕೆ ಬರಬಾರದು ಎಂದರು.

ಎಲ್ಲಾ ಜಿಲ್ಲೆಗಳಂತೆ ಮೈಸೂರಿನಲ್ಲಿ ಕೂಡ ಕೋವಿಡ್ ನಿರ್ವಹಣೆಯ ಕೆಲಸದಲ್ಲಿ ಸಾಕಷ್ಟು ಸವಾಲುಗಳಿವೆ, ಜಿಲ್ಲೆಯಲ್ಲಿ ನಾವು ಅಧಿಕಾರಿಗಳು ಸಾಧ್ಯವಾದಷ್ಟು ಕೆಲಸ ಮಾಡುತ್ತಿದ್ದೇವೆ, ಈ ಸಂದರ್ಭದಲ್ಲಿ ಎಲ್ಲರೂ ಒಟ್ಟಾಗಿ ಪಕ್ಷ ಬೇಧ ಮರೆತು ಕೆಲಸ ಮಾಡಬೇಕಿದೆ. ಈ ಬೆಳವಣಿಗೆ ಬಗ್ಗೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ತೀರ್ಮಾನ ಕೈಗೊಳ್ಳುತ್ತಾರೆ ಎಂದಷ್ಟೇ ಸಚಿವ ಸೋಮಶೇಖರ್ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT