ಡಾ.ಟಿ.ಆರ್ ಅನಂತರಾಮು ವಿಜ್ಞಾನ ಪ್ರತಿಷ್ಠಾನ 
ರಾಜ್ಯ

ಕನ್ನಡದಲ್ಲಿ ವಿಜ್ಞಾನ ಪ್ರಚಾರದ ಉದ್ದೇಶದಿಂದ ಡಾ. ಟಿ.ಆರ್ ಅನಂತರಾಮು ವಿಜ್ಞಾನ ಪ್ರತಿಷ್ಠಾನ ಸ್ಥಾಪನೆ

ನಾಡಿನಾದ್ಯಂತ ಕನ್ನಡದಲ್ಲಿ ವಿಜ್ಞಾನವನ್ನು ಜನಪ್ರಿಯಗೊಳಿಸುವ ಉದ್ದೇಶದಿಂದ ವಿಜ್ಞಾನ ಲೇಖಕ ಟಿ. ಆರ್. ಅನಂತರಾಮು ಅವರ ಹೆಸರಿನಲ್ಲಿ, ‘ಡಾ. ಟಿ.ಆರ್. ಅನಂತರಾಮು ವಿಜ್ಞಾನ ಪ್ರತಿಷ್ಠಾನವನ್ನು ಸ್ಥಾಪಿಸಲಾಗಿದೆ. 

ಬೆಂಗಳೂರು: ನಾಡಿನಾದ್ಯಂತ ಕನ್ನಡದಲ್ಲಿ ವಿಜ್ಞಾನವನ್ನು ಜನಪ್ರಿಯಗೊಳಿಸುವ ಉದ್ದೇಶದಿಂದ ವಿಜ್ಞಾನ ಲೇಖಕ ಟಿ. ಆರ್. ಅನಂತರಾಮು ಅವರ ಹೆಸರಿನಲ್ಲಿ, ‘ಡಾ. ಟಿ.ಆರ್. ಅನಂತರಾಮು ವಿಜ್ಞಾನ ಪ್ರತಿಷ್ಠಾನವನ್ನು ಸ್ಥಾಪಿಸಲಾಗಿದೆ. 

ವಿಶೇಷವಾಗಿ ಹೊಸ ತಲೆಮಾರಿನ ಲೇಖಕರನ್ನು ಉತ್ತೇಜಿಸುವುದು, ಮಾಧ್ಯಮಗಳಿಗೆ ವಿಜ್ಞಾನ ಸಂಗತಿಗಳನ್ನು ವರದಿ ಮಾಡುವುದನ್ನು ಕುರಿತು ವಿಶೇಷ ಕಾರ್ಯಾಗಾರಗಳನ್ನು ನಡೆಸುವುದು ಪ್ರತಿಷ್ಠಾನದ ಮುಖ್ಯ ಉದ್ದೇಶಗಳಲ್ಲೊಂದಾಗಿದೆ. 

ವಿದ್ಯಾರ್ಥಿಗಳಲ್ಲಿ, ವಿಜ್ಞಾನ ಮತ್ತು ಗಣಿತದ ಬಗ್ಗೆ ಆಸಕ್ತಿ ಮೂಡಿಸಲೆಂದು ‘ಸೂತ್ರ ಎಂಬ ಹೊಸಬಗೆಯ ಮಾಸಪತ್ರಿಕೆಯನ್ನು ಪ್ರತಿಷ್ಠಾನ ಹೊರತರಲಿದೆ. ವಿಜ್ಞಾನ ಮತ್ತು ಗಣಿತವನ್ನುಆಕರ್ಷಕ ರೀತಿಯಲ್ಲಿ ವಿದ್ಯಾರ್ಥಿಗಳಿಗೆ ಬೋಧಿಸುತ್ತಿರುವ ತರುಣ ಅಧ್ಯಾಪಕರನ್ನು ಗುರುತಿಸಿ, ಪ್ರತಿವರ್ಷವೂ ಓರ್ವ ಮಹಿಳೆಯೂ ಸೇರಿದಂತೆ ಮೂರು ಮಂದಿಗೆ ಪ್ರಶಸ್ತಿಗಳನ್ನು ನೀಡಲು ಪ್ರತಿಷ್ಠಾನ ಯೋಜನೆ ಹೊಂದಿದೆ. 

ಗ್ರಾಮೀಣ ಪ್ರದೇಶದಲ್ಲಿ ಆರ್ಥಿಕ ಮುಗ್ಗಟ್ಟಿನಲ್ಲಿರುವ ವಿದ್ಯಾರ್ಥಿನಿಯರಿಗೆ ವಿಜ್ಞಾನದಲ್ಲಿ ಹೆಚ್ಚಿನ ಶಿಕ್ಷಣ ಪಡೆಯಲು ಪ್ರತಿಷ್ಠಾನವು ನೆರವಾಗಲಿದೆ. ಇದರ ಜೊತೆಗೆ ಪ್ರತಿವರ್ಷವೂ ಕನ್ನಡದಲ್ಲಿ, ವಿದ್ಯಾರ್ಥಿಗಳಿಗೆ ವಿಜ್ಞಾನ ಪ್ರಬಂಧ ಸ್ಪರ್ಧೆ, ಆಶುಭಾಷಣ ಸ್ಪರ್ಧೆ ಮುಂತಾದುವನ್ನು ಏರ್ಪಡಿಸುವುದರ ಜೊತೆಗೆ ತಜ್ಞರಿಂದ ಯುಗಾದಿ ವಿಶೇಷ ವಿಜ್ಞಾನ ಉಪನ್ಯಾಸಗಳನ್ನು ಏರ್ಪಡಿಸುವುದೂ ಪ್ರತಿಷ್ಠಾನದ ಯೋಜಿತ ಕಾರ್ಯಕ್ರಮಗಳಲ್ಲಿ ಕೆಲವು.. ಈ ಕುರಿತು ಹೆಚ್ಚಿನ ವಿವರವನ್ನು ಈ ಜಾಲತಾಣದಲ್ಲಿ ನೋಡಬಹುದಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT