ರಾಜ್ಯ

ರಾಜ್ಯಾದ್ಯಂತ ಇನ್ನೂ ಎರಡು, ಮೂರು ದಿನ ಭರ್ಜರಿ ಮಳೆ ಸಾಧ್ಯತೆ

Nagaraja AB

ಬೆಂಗಳೂರು: ಕೇರಳ ಪ್ರವೇಶಿಸಿರುವ ಮುಂಗಾರು  ಮರುದಿನವೇ ರಾಜ್ಯದ ಕರಾವಳಿ ಪ್ರವೇಶ ಮಾಡಿದ್ದರಿಂದ ಮುಂದಿನ  ಎರಡು, ಮೂರು ದಿನಗಳ ಕಾಲ  ರಾಜ್ಯದೆಲ್ಲೆಡೆ ಭಾರಿ ಮಳೆಯಾಗಲಿದೆ. 

ಗುರುವಾರ ರಾತ್ರಿಯಿಂದಲೇ ರಾಜ್ಯದ ಕರಾವಳಿ, ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆಯಾಗಿದೆ. ಮುಂದಿನ ಎರಡು ದಿನ   ಮಳೆ ಆರ್ಭಟ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 

ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಶನಿವಾರ ಹೆಚ್ಚಿನ ಮಳೆ ಸಾಧ್ಯತೆ ಕಾರಣ ರೆಡ್ ಅಲರ್ಟ್ ಘೋಷಿಸಲಾಗಿದೆ. ಶಿವಮೊಗ್ಗ, ಕೊಡಗು, ಹಾಸನ ಜಿಲ್ಲೆಗಳಲ್ಲಿ ಆರೆಂಜ್ ಆಲರ್ಟ್, ಉತ್ತರ ಹಾಗೂ ದಕ್ಷಿಣ ಒಳನಾಡಿನ ದಾವಣಗೆರೆ, ಚಿತ್ರದುರ್ಗ, ಕೊಪ್ಪಳ, ಚಿಕ್ಕಮಗಳೂರು, ತುಮಕೂರು, ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಇಲಾಖೆ ಹೇಳಿದೆ.

SCROLL FOR NEXT