ರಾಜ್ಯ

ಇಂದು ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಪುಣ್ಯತಿಥಿ: ಮುಖ್ಯಮಂತ್ರಿ ಸೇರಿ ಹಲವು ಗಣ್ಯರಿಂದ ಗೌರವ ನಮನ

Nagaraja AB

ಬೆಂಗಳೂರು: ಇಂದು ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ ಪುಣ್ಯತಿಥಿ. ಇದರ ಅಂಗವಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸೇರಿದಂತೆ ಹಲವು ಗಣ್ಯರು ಗೌರವ ಪೂರ್ವಕ ನಮನ ಸಲ್ಲಿಸಿದ್ದಾರೆ.

ಈ ಕುರಿತು ಟ್ವಿಟ್ ಮಾಡಿರುವ ಮುಖ್ಯಮಂತ್ರಿ, ಭೂ ಸುಧಾರಣೆ, ಹಿಂದುಳಿದ ವರ್ಗಗಳ ಅಭಿವೃದ್ಧಿ ಸೇರಿದಂತೆ ತಮ್ಮ ದಕ್ಷ ಆಡಳಿತ, ದಿಟ್ಟ ತೀರ್ಮಾನಗಳ ಮೂಲಕ ರಾಜ್ಯದ ಪ್ರಗತಿಯ ಹೊಸ ಶಕೆಯನ್ನು ಪ್ರಾರಂಭಿಸಿದ ಅರಸು ಅವರನ್ನು ನಾಡಿನ ಜನ ಎಂದಿಗೂ ಮರೆಯುವುದಿಲ್ಲ ಎಂದು ಸ್ಮರಿಸಿದ್ದಾರೆ.

ಡಿ. ದೇವರಾಜ ಅರಸು ಜನಪರ ಆಡಳಿತದ ಮೂಲಕ ಹಿಂದುಳಿದ ವರ್ಗಗಳ ಏಳ್ಗೆಗಾಗಿ ಶ್ರಮಿಸಿದ ಮಾನವೀಯತೆಯ ಸಾಕಾರ ಮೂರ್ತಿ ಎಂದು ಉಪ ಮುಖ್ಯಮಂತ್ರಿ ಡಾ. ಸಿ.ಎನ್.ಅಶ್ವತ್ಥ ನಾರಾಯಣ ಸ್ಮರಿಸಿದ್ದಾರೆ.

SCROLL FOR NEXT