ಲಾಕ್ ಡೌನ್ ಸಮಯದಲ್ಲಿ ಬೆಂಗಳೂರು ಪೊಲೀಸರು ವಾಹನ ತಪಾಸಣೆ ಮಾಡುತ್ತಿರುವುದು 
ರಾಜ್ಯ

ವೈಜ್ಞಾನಿಕವಾಗಿ, ಹಂತಹಂತದ ಅನ್ ಲಾಕ್ ಪ್ರಕ್ರಿಯೆಗೆ ಕರ್ನಾಟಕದಲ್ಲಿ ತಜ್ಞರ ಒಲವು

ಕೋವಿಡ್-19ನ್ನು ನಿರ್ಬಂಧಿಸಲು ರಾಜ್ಯ ಸರ್ಕಾರ ಲಾಕ್ ಡೌನ್ ನ್ನು ವಿಸ್ತರಿಸಿದ್ದು, ಮುಂದಿನ ದಿನಗಳಲ್ಲಿ ಹಂತ ಹಂತವಾಗಿ, ಗ್ರೇಡ್ ಮಾದರಿಯಲ್ಲಿ, ಸಮಯ ಮಿತಿಯೊಳಗೆ ಅನ್ ಲಾಕ್ ಪ್ರಕ್ರಿಯೆಗೆ ಸರ್ಕಾರ ಚಾಲನೆ ನೀಡಬೇಕೆಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಬೆಂಗಳೂರು: ಕೋವಿಡ್-19ನ್ನು ನಿರ್ಬಂಧಿಸಲು ರಾಜ್ಯ ಸರ್ಕಾರ ಲಾಕ್ ಡೌನ್ ನ್ನು ವಿಸ್ತರಿಸಿದ್ದು, ಮುಂದಿನ ದಿನಗಳಲ್ಲಿ ಹಂತ ಹಂತವಾಗಿ, ಗ್ರೇಡ್ ಮಾದರಿಯಲ್ಲಿ, ಸಮಯ ಮಿತಿಯೊಳಗೆ ಅನ್ ಲಾಕ್ ಪ್ರಕ್ರಿಯೆಗೆ ಸರ್ಕಾರ ಚಾಲನೆ ನೀಡಬೇಕೆಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಅನ್ ಲಾಕ್ ಪ್ರಕ್ರಿಯೆಯನ್ನು ಪರಿಣಾಮಕಾರಿಯಾಗಿ ನಡೆಸಿದರೆ ಕೊರೋನಾ ಮೂರನೇ ಅಲೆಯಿಂದ ಅಷ್ಟೊಂದು ದುಷ್ಪರಿಣಾಮ ಬೀರಲಿಕ್ಕಿಲ್ಲ ಎಂಬ ಅಭಿಪ್ರಾಯ ತಜ್ಞರದ್ದು. ಕೋವಿಡ್-19 ಬಗ್ಗೆ ಕಾಲಕಾಲಕ್ಕೆ ಸೂಚನೆ, ಸಲಹೆ ನೀಡುವ ತಾಂತ್ರಿಕ ಸಲಹಾ ಸಮಿತಿ ವರದಿ ನೀಡಿದ ಮೇಲೆ ರಾಜ್ಯದಲ್ಲಿ ಪಾಸಿಟಿವ್ ಪ್ರಕರಣಗಳ ದರ ಶೇಕಡಾ 5ಕ್ಕಿಂತ ಕಡಿಮೆ ಬಂದ ಮೇಲೆ ಮಾತ್ರ ಮತ್ತು ಪಾಸಿಟಿವ್ ಸಂಖ್ಯೆ 5 ಸಾವಿರಕ್ಕಿಂತ ಕಡಿಮೆ ಬಂದ ಮೇಲೆ ಅನ್ ಲಾಕ್ ಪ್ರಕ್ರಿಯೆಗೆ ಸರ್ಕಾರ ಚಾಲನೆ ನೀಡಲಿದೆ.

ನಿನ್ನೆ ರಾಜ್ಯದಲ್ಲಿ ಕೋವಿಡ್-19 ಸಾಂಕ್ರಾಮಿಕ ವಿರುದ್ಧ ಹೋರಾಡಲು ಸುರಕ್ಷಿತ ಮತ್ತು ಪರಿಣಾಮಕಾರಿ ಮಾರ್ಗಗಳ ಬಗ್ಗೆ ಸೇಜ್ ಸಮ್ಮೇಳನವೊಂದನ್ನು ಆಯೋಜಿಸಿತ್ತು. ಆ ವೇಳೆ ಅನ್ ಲಾಕ್ ಪ್ರಕ್ರಿಯೆ ಬಗ್ಗೆ ಕೂಡ ಪ್ರಸ್ತಾಪವಾಯಿತು. ಸರ್ಕಾರ ಅನ್ ಲಾಕ್ ಗೆ ಚಾಲನೆ ನೀಡುವಾಗ ಎಲ್ಲಾ ವಿಷಯಗಳನ್ನು ಗಮನದಲ್ಲಿಟ್ಟುಕೊಳ್ಳಬೇಕು ಎಂದು ಹೇಳಿದೆ. ಕಳೆದ ವರ್ಷವಾದರೆ ಕೇಂದ್ರ ಸರ್ಕಾರದ ಮಾರ್ಗಸೂಚಿ ಪ್ರಕಾರ ನಿರ್ಬಂಧಗಳನ್ನು ಸಡಿಲಗೊಳಿಸಿತ್ತು, ಆದರೆ ಈ ವರ್ಷ ರಾಜ್ಯ ಸರ್ಕಾರವೇ ನಿಯಮ ರೂಪಿಸಬೇಕಿದೆ.

ಇಲ್ಲಿ ಗಮನಹರಿಸಬೇಕಾದ ಅಂಶಗಳು ಕೆಫೆಟೇರಿಯಾಗಳು, ಪಬ್‌ಗಳು ಮತ್ತು ಬಾರ್‌ಗಳು, ಸಿನೆಮಾ ಹಾಲ್‌ಗಳು, ಶಾಪಿಂಗ್ ಮಾಲ್‌ಗಳು, ಕಚೇರಿಗಳು, ಕಾರ್ಖಾನೆಗಳು, ಧಾರ್ಮಿಕ ಕೇಂದ್ರಗಳು, ಶಾಲೆಗಳು ಮತ್ತು ಶಿಕ್ಷಣ ಸಂಸ್ಥೆಗಳನ್ನು ಒಳಗೊಂಡಿರುವ ಮುಚ್ಚಿದ ಸ್ಥಳಗಳಲ್ಲಿ ಸೋಂಕಿನ ಅಪಾಯ ಹೆಚ್ಚಾಗಿರುತ್ತವೆ. ರಾಜಕೀಯ ರ್ಯಾಲಿಗಳು, ಜಾತ್ರೆಗಳು ಮತ್ತು ಹಬ್ಬಗಳಂತಹ ದೊಡ್ಡ ಸಭೆಗಳನ್ನು ತಪ್ಪಿಸಬೇಕು. ಸ್ಥಳಗಳನ್ನು ಅನ್ಲಾಕ್ ಮಾಡುವುದು ಹೇಗೆ ಎಂದು ನಾವು ಮತ್ತಷ್ಟು ನೋಡಬೇಕಾಗಿದೆ - 30%, 50%, 70% ಆಕ್ಯುಪೆನ್ಸಿಯೊಂದಿಗೆ. ಹೆಚ್ಚಿನ ಪಬ್‌ಗಳು ರಾತ್ರಿಯಿಡೀ ತೆರೆದಿರುವುದರಿಂದ ಮತ್ತು ಜನಸಂದಣಿ ಇರುವುದರಿಂದ ರಾತ್ರಿ ಕರ್ಫ್ಯೂ ಜಾರಿಗೆ ತರಬೇಕಾಗಿದೆ ಎನ್ನುತ್ತಾರೆ ರಾಜ್ಯ ತಾಂತ್ರಿಕ ಸಲಹಾ ಸಮಿತಿಯ ಅಧ್ಯಕ್ಷ ಡಾ ಎಂ ಕೆ ಸುದರ್ಶನ್.

ಸಾರ್ವಜನಿಕ ಆರೋಗ್ಯದ ಭಾರತೀಯ ಸಂಸ್ಥೆಯ ಸಾಂಕ್ರಾಮಿಕ ತಜ್ಞ ಡಾ ಗಿರಿಧರ ಬಾಬು, ಬೆಂಗಳೂರಿನಲ್ಲಿ ಕೊರೋನಾ ಸಂಪರ್ಕಿತರ ಪತ್ತೆ ಮತ್ತು ಪರೀಕ್ಷೆ, ಪತ್ತೆ ಹಚ್ಚುವಿಕೆ ಕೆಲಸ ಸರಿಯಾಗಿ ನಡೆಯುತ್ತಿಲ್ಲ, ಈ ಪ್ರಕ್ರಿಯೆಗಳನ್ನು ಪರಿಣಾಮಕಾರಿಯಾಗಿ ನಡೆಸಲು ನಗರದಲ್ಲಿ ಸಿಬ್ಬಂದಿ ಕೊರತೆಯಿದೆ ಎನ್ನುತ್ತಾರೆ.

ಸಕ್ರಿಯ ಸಂಖ್ಯೆಗಳನ್ನು ತಗ್ಗಿಸಲು ಲಸಿಕೆ ನೀಡುವುದು ಮುಖ್ಯವಾಗುತ್ತದೆ. ಲಸಿಕೆ ಮತ್ತು ಸರಿಯಾದ ಕಂಟೈನ್ ಮೆಂಟ್ ತಂತ್ರಗಳು ಮಾತ್ರ ಕೋವಿಡ್ -19 ಅನ್ನು ನಿಗ್ರಹಿಸಲು ಬೇರೆ ದೇಶಗಳಿಗೆ ಸಹಾಯ ಮಾಡಿದವು. ಇದು ಕೇವಲ ಲಾಕ್‌ಡೌನ್ ಅಲ್ಲ. ನಾವು ಸಾಮೂಹಿಕ ವ್ಯಾಕ್ಸಿನೇಷನ್ ನಡೆಸಬೇಕಾಗಿದೆ. ನವೆಂಬರ್ ವೇಳೆಗೆ ಹೆಚ್ಚಿನ ಜನಸಂಖ್ಯೆಗೆ ಲಸಿಕೆ ನೀಡದಿದ್ದರೆ, ಮೂರನೇ ತರಂಗ ಖಂಡಿತವಾಗಿಯೂ ಬೆಂಗಳೂರಿಗೆ ಅಪ್ಪಳಿಸುತ್ತದೆ ಎನ್ನುತ್ತಾರೆ ಅವರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

SCROLL FOR NEXT