ಘಟನೆಗೆ ಕಾರಣವಾದ ಕಾರು 
ರಾಜ್ಯ

ಕುಂದಾಪುರ: ಗ್ರಾಮ ಪಂಚಾಯಿತಿ ಅಧ್ಯಕ್ಷರ ಕಾರು ಡಿಕ್ಕಿಯಾಗಿ ವ್ಯಕ್ತಿ ಸಾವು, ದ್ವೇಷದ ಹಿನ್ನೆಲೆ ಕೊಲೆ -ಆರೋಪ

ಜೂನ್ 5 ರ ಶನಿವಾರ ತಡರಾತ್ರಿ ಕಾರು ಡಿಕ್ಕಿ ಹೊಡೆದು ವ್ಯಕ್ತಿಯೊಬ್ಬರು ಮೃತಪಟ್ಟಿದ್ದು ಈ ಕಾರನ್ನು ಯಡಮೊಗೆ ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರಾಣೇಶ್ ಯಡಿಯಾಳ ಚಾಲನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದ್ದು, ಇದು ಶಂಕಿತ 'ಕೊಲೆ' ಪ್ರಕರಣವಾಗಿರಬಹುದು ಎಂದು ಹೇಳಲಾಗಿದೆ.

ಕುಂದಾಪುರ: ಜೂನ್ 5 ರ ಶನಿವಾರ ತಡರಾತ್ರಿ ಕಾರು ಡಿಕ್ಕಿ ಹೊಡೆದು ವ್ಯಕ್ತಿಯೊಬ್ಬರು ಮೃತಪಟ್ಟಿದ್ದು ಈ ಕಾರನ್ನು ಯಡಮೊಗೆ ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರಾಣೇಶ್ ಯಡಿಯಾಳ ಚಾಲನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದ್ದು, ಇದು ಶಂಕಿತ 'ಕೊಲೆ' ಪ್ರಕರಣವಾಗಿರಬಹುದು ಎಂದು ಹೇಳಲಾಗಿದೆ.

ಮೃತ ವ್ಯಕ್ತಿಯನ್ನು ಯಡಮೊಗೆ ಮೂಲದ ಉದಯ್ ಗಾಣಿಗ (45) ಎಂದು ಗುರುತಿಸಲಾಗಿದೆ.

ರಾತ್ರಿ 8 ಗಂಟೆ ಸುಮಾರಿಗೆ ಉದಯ್ ಅವರ ನಿವಾಸದ ಮುಂದೆ ಈ ಘಟನೆ ನಡೆದಿದೆ.

ಜೂನ್ 5 ರ ಶನಿವಾರ ಸಂಜೆ ಉದಯ್ ರಸ್ತೆಯಲ್ಲಿ ನಿಂತಿದ್ದಾಗ ಪ್ರಾಣೇಶ್ ಯಡಿಯಾಳ ಅವರ ಕಾರು ಅವರನ್ನು ಡಿಕ್ಕಿಯಾಗಿದೆ ಎಂದು ಆರೋಪಿಸಲಾಗಿದೆ. ಅಪಘಾತಕ್ಕೆ ಕಾರಣವಾದ ನಂತರ, ಪಂಚಾಯತ್ ಅಧ್ಯಕ್ಷರು ಸ್ಥಳದಿಂದ ಪರಾರಿಯಾಗಿದ್ದು, ತಮ್ಮ ಕಾರನ್ನು ಸ್ಥಳದಲ್ಲೇ ಬಿಟ್ಟು ಹೋಗಿದ್ದಾರೆ.

ಜನರು 108 ಆಂಬ್ಯುಲೆನ್ಸ್ ಗೆ ಕರೆಮಾಡಿ ಉದಯ್ ಅವರನ್ನು ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಅವರು ಮಾರ್ಗ ಮಧ್ಯದಲ್ಲೇ ಕೊನೆಯುಸಿರೆಳೆದರು.

ಉದಯ್ ಹಾಗೂ ಪ್ರಾಣೇಶ್ ಅವರ ನಡುವೆ ಕೊಳವೆ ಬಾವಿ ಪರವಾನಿಗಿ ವಿಚಾರವಾಗಿ ದ್ವೇಷವಿತ್ತೆಂದು ಹೇಳಲಾಗಿದ್ದು  ಉದಯ್ ಕೊರೋನಾವೈರಸ್ ಸೋಂಕಿತ ಕುಟುಂಬಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ನಿಭಾಯಿಸಲು ಮತ್ತು ಸದ್ಯಕ್ಕೆ ಪ್ರಚಾರಪ್ರಿಯತೆಯನ್ನು ಬದಿಗಿರಿಸಬೇಕೆಂದು  ಅವರು ಅಧಿಕಾರದ ಸ್ಥಾನದಲ್ಲಿರುವವರನ್ನು ಒತ್ತಾಯಿಸಿದ್ದರು. ಸರ್ಕಾರದಿಂದ ಪಡೆದ ಹಣವನ್ನು ದುರುಪಯೋಗಪಡಿಸಿಕೊಳ್ಳದಂತೆ ಅವರು ಕೇಳಿದ್ದರು

ಉದಯ್ ಕೊಲೆ ಮಾಡಿದ ಕೃತ್ಯದಲ್ಲಿ ಪ್ರಾಣೇಶ್ ಅವರ ಮೇಲೆ ಆರೋಪವಿದೆ.

ಪ್ರಾಣೇಶ್ ಹಾಗೂ ಉದಯ್ ನಡುವಿನ ಘರ್ಷಣೆಯಿಂದ ಉದ್ಭವಿಸಿದ ಪ್ರಕರಣ ಇದು ಎಂದು ಇಲ್ಲಿನ ಉಪ ಪೊಲೀಸ್ ವರಿಷ್ಠಾಧಿಕಾರಿ ಕೆ ಶ್ರೀಕಾಂತ್ ಹೇಳಿದ್ದಾರೆ. ಸ್ಥಳ ತಪಾಸಣೆಯ ಸಮಯದಲ್ಲಿ, ಇದು ಅಪಘಾತವಲ್ಲ ಆದರೆ ಯೋಜಿತ ಕೊಲೆ ಎಂದು ಕಂಡುಬಂದಿದೆ,  ಸಧ್ಯ ಆರೋಪಿ ಪ್ರಾಣೇಶ್ ಯಡಿಯಾಳ ಅವರನ್ನು ಪೋಲೀಸರು ವಶಕ್ಕೆ ಪಡೆದಿದ್ದಾರೆ. ಸೆಕ್ಷನ್ 302 (ಕೊಲೆ) ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗುವುದು ಎಂದು ಹೇಳಿದರು. ಉದಯ್ ಅವರ ಕುಟುಂಬ ಕೂಡ ಇದು ಕೊಲೆ ಪ್ರಕರಣ ಎಂದು ಶಂಕಿಸಿದ್ದಾರೆ ಮತ್ತು ಅವರ ದೂರಿನ ಆಧಾರದ ಮೇಲೆ ತನಿಖೆ ನಡೆಸಲಾಗುವುದು ಎಂದು ಪೋಲೀಸ್ ಅಧಿಕಾರಿ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

SCROLL FOR NEXT