ಶಿಲ್ಪಾನಾಗ್, ರೋಹಿಣಿ ಸಿಂಧೂರಿ 
ರಾಜ್ಯ

ಮೈಸೂರಿನ ಇಬ್ಬರೂ ಅಧಿಕಾರಿಗಳ ವರ್ಗಾವಣೆ, ಕೊರೋನಾ ನಿರ್ವಹಣೆಗೆ ಹಿನ್ನೆಡೆ- ಕಾಂಗ್ರೆಸ್

ಮೈಸೂರಿನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಮತ್ತು ಮಹಾನಗರ ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ಅವರನ್ನು  ಸರ್ಕಾರ ವರ್ಗಾವಣೆ ಮಾಡಿರುವುದರಿಂದ ಕೊರೋನಾ ನಿರ್ವಹಣೆಗೆ ಹಿನ್ನೆಡೆಯಾಗಲಿದೆ ಎಂದು ಕಾಂಗ್ರೆಸ್ ಹೇಳಿದೆ.

ಬೆಂಗಳೂರು: ಮೈಸೂರಿನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಮತ್ತು ಮಹಾನಗರ ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ಅವರನ್ನು  ಸರ್ಕಾರ ವರ್ಗಾವಣೆ ಮಾಡಿರುವುದರಿಂದ ಕೊರೋನಾ ನಿರ್ವಹಣೆಗೆ ಹಿನ್ನೆಡೆಯಾಗಲಿದೆ ಎಂದು ಕಾಂಗ್ರೆಸ್ ಹೇಳಿದೆ.

ಈ ಕುರಿತು ಟ್ವಿಟ್ ಮಾಡಿರುವ ಕಾಂಗ್ರೆಸ್, ಬದಲಾದ ಅಧಿಕಾರಿಗಳಿಗೆ ಜಿಲ್ಲೆಯ ಚಿತ್ರಣ ಅರಿಯಲು ಸಾಕಷ್ಟು ಸಮಯ ಹಿಡಿಯಲಿದೆ. ಕೊರೋನಾ ಸಂದರ್ಭದಲ್ಲಿ ಹೊಸ ಅಧಿಕಾರಿಗಳಿಗೂ ಸವಾಲು, ಜನತೆಗೂ ಸಂಕಷ್ಟವಾಗಲಿದೆ ಎಂದಿದೆ. ಈ ಸರ್ಕಾರಕ್ಕೆ ವರ್ಗಾವಣೆಯೊಂದನ್ನು ಬಿಟ್ಟು ನಿಭಾಯಿಸುವ ಬೇರೆ ಯಾವ ಮಾರ್ಗವೂ ತಿಳಿದಿಲ್ಲ ಅಂತಾ ಕಾಂಗ್ರೆಸ್ ಟೀಕಿಸಿದೆ.

ಮೈಸೂರು ಡಿಸಿಯಾಗಿದ್ದ ರೋಹಿಣಿ ಸಿಂಧೂರಿ ಅವರನ್ನು ಅವರು ಈ ಹಿಂದೆ ಇದ್ದ ಧಾರ್ಮಿಕ ದತ್ತಿ ಇಲಾಖೆಗೆ ವರ್ಗಾವಣೆ ಮಾಡಲಾಗಿದ್ದು, ಮೈಸೂರಿನ ನೂತನ ಜಿಲ್ಲಾಧಿಕಾರಿಯಾಗಿ ವಾಣಿಜ್ಯ ತೆರಿಗೆ ಇಲಾಖೆಯ (ಜಾರಿ) ಹೆಚ್ಚುವರಿ ಆಯುಕ್ತರಾಗಿದ್ದ ಐಎಎಸ್ ಅಧಿಕಾರಿ ಗೌತಮ್ ಬಗಾದಿ ಅವರನ್ನು ನೇಮಕ ಮಾಡಲಾಗಿದೆ.

 ಮೈಸೂರು ಮಹಾನಗರ  ಪಾಲಿಕೆ ಆಯುಕ್ತರಾಗಿದ್ದ ಶಿಲ್ಪಾನಾಗ್ ರನ್ನು ಆರ್ ಡಿಪಿಆರ್ ಇ ಆಯುಕ್ತರಾಗಿ ನೇಮಕ ಮಾಡಲಾಗಿದ್ದು, ಮೈಸೂರು ಮಹಾನಗರ ಪಾಲಿಕೆ ನೂತನ ಆಯುಕ್ತರಾಗಿ ಐಎಎಸ್ ಅಧಿಕಾರಿ ಲಕ್ಷ್ನೀಕಾಂತ್ ರೆಡ್ಡಿ ಅವರನ್ನು ನೇಮಕ ಮಾಡಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ತಮಿಳುನಾಡು ಮತ್ತು ಬಂಗಾಳ ಸೇರಿದಂತೆ 5 ರಾಜ್ಯಗಳ ಚುನಾವಣಾ ದಿನಾಂಕ ಪ್ರಕಟಿಸಿದ ಚುನಾವಣಾ ಆಯೋಗ!

ಎರಡೆರಡು ಅತ್ಯಾಚಾರ ಆರೋಪ: ಗುಟ್ಟಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ RCB ವೇಗಿ ಯಶ್ ದಯಾಳ್!

ಕರ್ನಾಟಕ ಉಪ ಚುನಾವಣೆ: ಬಾಗಲಕೋಟೆ, ದಾವಣಗೆರೆ ದಕ್ಷಿಣದಲ್ಲಿ ಏಪ್ರಿಲ್ 9ರಂದು ಮತದಾನ, ಮೇ 4 ಫಲಿತಾಂಶ

T20 ವಿಶ್ವಕಪ್: ಸಂಜು ಸ್ಯಾಮ್ಸನ್ ಆರ್ಭಟಕ್ಕೆ "ದೇವರು" ಕಾರಣ; ಮದುವೆಯ ಭರಾಟೆಯಲ್ಲೂ ಟೀಂ ಇಂಡಿಯಾ ಮರೆಯದ God!

ಮಗುವಿನ ಪೋಷಣೆಗಾಗಿ ನಾನು ಯಾರ ಜೊತೆಗಾದರೂ ಮಲಗುತ್ತೇನೆ: ದೆಹಲಿಯ 'ವಡಾ ಪಾವ್ ಗರ್ಲ್' ಖ್ಯಾತಿಯ ಚಂದ್ರಿಕಾ ದೀಕ್ಷಿತ್

SCROLL FOR NEXT