ಮೃತ ಯುವಕ ನಿಖಿಲ್ 
ರಾಜ್ಯ

ಕಲಬುರಗಿ: ಕ್ಷುಲ್ಲಕ ಕಾರಣಕ್ಕೆ ಯುವಕನ ಬರ್ಬರ ಕೊಲೆ

22ರ ಯುವಕನೊಬ್ಬನನ್ನು ಕ್ಷುಲ್ಲಕ ಕಾರಣಕ್ಕೆ ಮಾರಕಾಸ್ತ್ರದಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಕಲಬುರಗಿ ನಗರದ ವಾಜಪೇಯಿ ಬಡಾವಣೆಯ ಸಮೀಪ ನಡೆದಿದೆ.

ಕಲಬುರಗಿ: 22ರ ಯುವಕನೊಬ್ಬನನ್ನು ಕ್ಷುಲ್ಲಕ ಕಾರಣಕ್ಕೆ ಮಾರಕಾಸ್ತ್ರದಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಕಲಬುರಗಿ ನಗರದ ವಾಜಪೇಯಿ ಬಡಾವಣೆಯ ಸಮೀಪ ನಡೆದಿದೆ.

ಮೃತನನ್ನು ನಿಖಿಲ್ ಕನೇಗಾರ ಎನ್ನಲಾಗಿದ್ದು  ಕರುಣೇಶ್ವರ ನಗರ ನಿವಾಸಿಯಾಗಿದ್ದ. ಘಟನೆಯಲ್ಲಿ ನಿಖಿಲ್ ಸೋದರ ಹಾಗೂ ಆತನ ತಾಯಿ ಗಾಯಗೊಂಡಿದ್ದು ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ತರಕಾರಿ ಖರೀದಿಸಲು ಬಂದಾಗ ಯುವಕನೊಬ್ಬ ಕ್ಷುಕ್ಕಕ ಕಾರಣಕ್ಕೆ ಜಗಳ ತೆಗೆದಿದ್ದಾನೆ. ಆ ನಂತರ ಸ್ನೇಹಿತರನ್ನು ಕರೆಸಿ ಮಾರಕಾಸ್ತ್ರಗಳಿಂದ ನಿಖಿಲ್ ಮೇಲೆ ಹಲ್ಲೆ ಮಾಡಿದ್ದಾನೆ. ಆ ವೇಳೆ ನಿಖಿಲ್ ಸ್ಥಳದಲ್ಲೇ  ಸಾವನ್ನಪ್ಪಿದ್ದಾನೆ.

ಯುವತಿ ವಿಚಾರಕ್ಕೆ ಜಗಳ?

ನಿಖಿಲ್ ಸಂಬಂಧಿ ಯುವತಿಯೊಬ್ಬಳಿಗೆ ನಿಶ್ಚಿತಾರ್ಥವಿತ್ತು. ಆದರೆ ಆ ಯುವತಿಯನ್ನು ಬೇರೊಬ್ಬ ಯುವಕ ಪ್ರೀತಿಸುತ್ತಿದ್ದ. ಆ ವಿಚಾರವನ್ನು ಪ್ರೀತಿಸುತ್ತಿದ್ದ ಯುವಕ ನಿಶ್ಚಯವಾಗುತ್ತಿದ್ದದ್ದ ಯುವಕನಿಗೆ ಹೇಳಿದ್ದಾಗಿ ಈ ಬಗ್ಗೆ ಇಬ್ಬರ ಕುಟುಂಬದ ನಡುವೆ ಜಗಳ ನಡೆದಿದೆ. ಆ ವೇಳೆ ಜಗಳ ಪರಿಹರಿಸಲು ನಿಖಿಲ್ ಅಲ್ಲಿಗೆ ತೆರಳಿದ್ದನೆನ್ನಲಾಗಿದೆ.

ಆದರೆ ಈ ಬಗ್ಗೆ ನಿಖರ ಮಾಹಿತಿ ಇನ್ನೂ ಲಭ್ಯವಾಗಿಲ್ಲ. ಘಟನೆ ಸಂಬಂಧ ಕಲಬುರಗಿ  ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT