ರಾಜ್ಯ

ಕೊಡಗು: ನಾಯಿಯೊಂದಿಗೆ ವಾಕಿಂಗ್ ಗೆ ಹೋಗಿದ್ದ ವ್ಯಕ್ತಿ ಕಾಡಾನೆ ದಾಳಿಗೆ ಬಲಿ

Srinivas Rao BV

ಮಡಿಕೇರಿ: ಬೆಳಗಿನ ಜಾವ ನಾಯಿಯೊಂದಿಗೆ ವಾಕಿಂಗ್ ಗೆ ಹೋಗಿದ್ದ ವ್ಯಕ್ತಿ ರಸ್ತೆ ಮಧ್ಯದಲ್ಲೇ ಕಾಡಾನೆ ದಾಳಿಗೆ ಮೃತಪಟ್ಟಿರುವ ಘಟನೆ ಕೊಡಗಿನಲ್ಲಿ ನಡೆದಿದೆ.

ದಕ್ಷಿಣ ಕೊಡಗಿನ ಅರ್ವತೋಕ್ಲು ಗ್ರಾಮದಲ್ಲಿ ಈ ಘಟನೆ ವರದಿಯಗಿದ್ದು, ಮೃತ ವ್ಯಕ್ತಿಯನ್ನು ಪಿಹೆಚ್ಎಸ್ ಕಾಲೋನಿಯ ರಂಗಸ್ವಾಮಿ (52) ಎಂದು ಗುರುತಿಸಲಾಗಿದೆ.

ಎಂದಿನಂತೆ ಮನೆಯ ಬಳಿ ನಾಯಿಯ ಜೊತೆ ನಡೆದುಕೊಂಡು ಹೋಗುತ್ತಿರುವಾಗ, ರಂಗಸ್ವಾಮಿ ಅವರ ಮೇಲೆ ದಾಳಿ ನಡೆಸಿದ ಆನೆ ವ್ಯಕ್ತಿಯನ್ನು ಎಸೆದಿದ್ದು ಗಂಭೀರವಾಗಿ ಗಾಯಗೊಳಿಸಿದೆ.

ಗಾಯಾಳು ವ್ಯಕ್ತಿಯನ್ನು ಗೋಣಿಕೊಪ್ಪದ ಆಸ್ಪತ್ರೆಗೆ ಪ್ರಥಮ ಚಿಕಿತ್ಸೆಗಾಗಿ ಕರೆದೊಯ್ಯಲಾಯಿತು. ನಂತರ ಹೆಚ್ಚಿನ ಚಿಕಿತ್ಸೆಗೆ ಆತನನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗುತ್ತಿತ್ತು. ಆದರೆ ಮಡಿಕೇರಿಗೆ ತಲುಪುತ್ತಿದ್ದಂತೆಯೇ ಮಾರ್ಗಮಧ್ಯದಲ್ಲಿಯೇ ಆತ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ. ರಂಗಸ್ವಾಮಿ ಅವರು ವೃತ್ತಿಯಲ್ಲಿ ಎಲೆಕ್ಟ್ರೀಷಿಯನ್ ಆಗಿ ಕಾರ್ಯನಿರ್ಹಿಸುತ್ತಿದ್ದರು.

SCROLL FOR NEXT