ಡಾ.ಬಗಾದಿ ಗೌತಮ್ 
ರಾಜ್ಯ

ವಿವಾದಗಳಿಂದ ದೂರವಾಗಿ ಜನಸ್ನೇಹಿ ಆಡಳಿತ ನೀಡುವುದು ನನ್ನ ಉದ್ದೇಶ: ಮೈಸೂರು ನೂತನ ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್

ರೋಹಿಣಿ ಸಿಂಧೂರಿ-ಶಿಲ್ಪಾ ನಾಗ್ ಐಎಎಸ್ ಅಧಿಕಾರಿಗಳ ಕಿತ್ತಾಟದ ನಂತರ ನಡೆದ ಬೆಳವಣಿಗೆಯಲ್ಲಿ ರಾಜ್ಯ ಸರ್ಕಾರ ಮೈಸೂರು ಜಿಲ್ಲೆಗೆ ನೇಮಿಸಿದ ನೂತನ ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್ ಅಧಿಕಾರ ವಹಿಸಿಕೊಂಡರು.

ಮೈಸೂರು: ರೋಹಿಣಿ ಸಿಂಧೂರಿ-ಶಿಲ್ಪಾ ನಾಗ್ ಐಎಎಸ್ ಅಧಿಕಾರಿಗಳ ಕಿತ್ತಾಟದ ನಂತರ ನಡೆದ ಬೆಳವಣಿಗೆಯಲ್ಲಿ ರಾಜ್ಯ ಸರ್ಕಾರ ಮೈಸೂರು ಜಿಲ್ಲೆಗೆ ನೇಮಿಸಿದ ನೂತನ ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್ ಅಧಿಕಾರ ವಹಿಸಿಕೊಂಡರು.

ಕಾರ್ಯಕ್ರಮಕ್ಕೆ ನಿಕಟಪೂರ್ವ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಗೈರಾಗಿದ್ದರು. ಅವರ ಅನುಪಸ್ಥಿತಿಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಮಂಜುನಾಥ್ ಸ್ವಾಮಿ ನೂತನ ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್ ಅವರಿಗೆ ಅಧಿಕಾರ ಹಸ್ತಾಂತರಿಸಿದರು.

ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಮಾತನಾಡಿದ ಡಾ. ಬಗಾದಿ ಗೌತಮ್, ಸದ್ಯಕ್ಕೆ ಜಿಲ್ಲೆಯಲ್ಲಿ ಕೊರೋನಾ ನಿಯಂತ್ರಣ ಸವಾಲಾಗಿದೆ. ಜಿಲ್ಲಾಧಿಕಾರಿಯಾಗಿ ನನ್ನ ಕೆಲಸವನ್ನು ನಾನು ಮಾಡಿಕೊಂಡು ಹೋಗುತ್ತೇನೆ. ನನ್ನ ಜೀವನದಲ್ಲಿ ಎಂದಿಗೂ ವಿವಾದಕ್ಕೆ ಒಳಗಾಗಿಲ್ಲ. ಜನಸ್ನೇಹಿ ಆಡಳಿತ ನೀಡುವುದು ನನ್ನ ಉದ್ದೇಶ. ನಾನು ಲೋ ಪ್ರೊಫೈಲ್ ಅಧಿಕಾರಿ, ನನ್ನ 13 ವರ್ಷದ ಸರ್ವಿಸ್ ನಲ್ಲಿ ಬಹುತೇಕರು ನನ್ನ ಹೆಸರು ಸಹ ಕೇಳಿಲ್ಲ, ನಾನು ಕೆಲಸ ಮಾಡಲು ಈ ಸ್ಥಳಕ್ಕೆ, ಹುದ್ದೆಗೆ ಬಂದಿದ್ದೇನೆ, ವಿವಾದಿತ ಹುದ್ದೆಗೆ ಬಂದೆ ಎನಿಸುವುದಿಲ್ಲ, ಉತ್ತಮವಾಗಿ ಕೆಲಸ ಮಾಡಿದರೆ ಎಲ್ಲರ ಜೊತೆ ಉತ್ತಮವಾಗಿರಬಹುದು. ಮೈಸೂರಿನ ಜನಪ್ರತಿನಿಧಿಗಳು, ಅಧಿಕಾರಿಗಳು, ಪತ್ರಕರ್ತರು, ಸಾರ್ವಜನಿಕರ ಸಲಹೆಗಳನ್ನು ಸಕಾರಾತ್ಮಕವಾಗಿ ತೆಗೆದುಕೊಳ್ಳುತ್ತೇನೆ ಎಂದು ಹೇಳಿದರು.

ಈ ವರ್ಗಾವಣೆಯನ್ನು ನಾನು ನಿರೀಕ್ಷೆ ಮಾಡಿರಲಿಲ್ಲ. ಕೋವಿಡ್ ನಿರ್ವಹಣೆ ಜವಾಬ್ದಾರಿ ಇರುವ ಕಾರಣ ಜಿಲ್ಲಾಧಿಕಾರಿ ಕೆಲಸವು ಸವಾಲಾಗಿಯೇ ಇರುತ್ತದೆ. ಸವಾಲಾಗಿ ತೆಗೆದುಕೊಂಡು ಹೋಗುತ್ತೇನೆ ಎಂದರು.

ಡಾ. ಬಗಾದಿಯವರ ಪತ್ನಿ ಪಕ್ಕದ ಮಂಡ್ಯ ಜಿಲ್ಲೆಯ ಜಿಲ್ಲಾಧಿಕಾರಿ, ಈ ಬಗ್ಗೆ ಕೇಳಿದಾಗ, ಪತ್ನಿ ಮನೆ ಮೊದಲೂ ಹತ್ತಿರವೇ ಇತ್ತು, ಈಗ ಮತ್ತಷ್ಟು ಹತ್ತಿರ ಬಂದಿದ್ದೇವೆ, ಬೆಂಗಳೂರಿನಿಂದ ಮಂಡ್ಯ ದೂರವೇನಲ್ಲ ಎಂದು ಪ್ರತಿಕ್ರಿಯಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT