ಸಂಗ್ರಹ ಚಿತ್ರ 
ರಾಜ್ಯ

ಟ್ರಾನ್ಸ್​ಫಾರ್ಮರ್​ಗಳಿಂದ ಉಂಟಾಗುವ ಅಪಾಯ ಅಧ್ಯಯನ ನಡೆಸಲು ಸಮನ್ವಯ ಸಮಿತಿ ರಚನೆ

ನಗರದ ಫುಟ್​ಪಾತ್​ಗಳ ಮೇಲಿರುವ ವಿದ್ಯುತ್ ಪರಿವರ್ತಕಗಳಿಂದ (ಟ್ರಾನ್ಸ್​ಫಾರ್ಮರ್) ಉಂಟಾಗುವ ಅಪಾಯ ಕುರಿತು ಅಧ್ಯಯನ ನಡೆಸಲು ಬಿಬಿಎಂಪಿ, ಬೆಸ್ಕಾಂ ಅಧಿಕಾರಿಗಳನ್ನೊಳಗೊಂಡ ಸಮನ್ವಯ ಸಮಿತಿ ರಚಿಸಲಾಗಿದೆ. 

ಬೆಂಗಳೂರು: ನಗರದ ಫುಟ್​ಪಾತ್​ಗಳ ಮೇಲಿರುವ ವಿದ್ಯುತ್ ಪರಿವರ್ತಕಗಳಿಂದ (ಟ್ರಾನ್ಸ್​ಫಾರ್ಮರ್) ಉಂಟಾಗುವ ಅಪಾಯ ಕುರಿತು ಅಧ್ಯಯನ ನಡೆಸಲು ಬಿಬಿಎಂಪಿ, ಬೆಸ್ಕಾಂ ಅಧಿಕಾರಿಗಳನ್ನೊಳಗೊಂಡ ಸಮನ್ವಯ ಸಮಿತಿ ರಚಿಸಲಾಗಿದೆ. 

ನಗರದ ಫುಟ್​ಪಾತ್​ಗಳ ಮೇಲಿರುವ ವಿದ್ಯುತ್ ಪರಿವರ್ತಕಗಳನ್ನು (ಟ್ರಾನ್ಸ್​ಫಾರ್ಮರ್) ತೆರವುಗೊಳಿಸಬೇಕು ಎಂದು ಕೋರಿ ನಿವೃತ್ತ ವಿಂಗ್ ಕಮಾಂಡರ್ ಜಿ.ಬಿ.ಅತ್ರಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು.

ಈ ಅರ್ಜಿ ಸಂಬಂಧ ಹೈಕೋರ್ಟ್‌ಗೆ ಬೆಸ್ಕಾಂ ಪರ ವಕೀಲರು ಮಾಹಿತಿ ನೀಡಿದ್ದು, ನಗರದ ಫುಟ್​ಪಾತ್​ಗಳ ಮೇಲಿರುವ ವಿದ್ಯುತ್ ಪರಿವರ್ತಕಗಳಿಂದ (ಟ್ರಾನ್ಸ್​ಫಾರ್ಮರ್) ಜನರಿಗೆ ಆಗುತ್ತಿರುವ ಅನಾನುಕೂಲದ ಬಗ್ಗೆ ಪರಾಮರ್ಶಿಸಲು ಹೈಕೋರ್ಟ್ ಸೂಚನೆಯಂತೆ ಬಿಬಿಎಂಪಿ, ಬೆಸ್ಕಾಂ ಅಧಿಕಾರಿಗಳ ಸಮನ್ವಯ ಸಮಿತಿ ರಚಿಸಲಾಗಿದೆ. ಈ ಸಮಿತಿಯು ಫುಟ್‌ಪಾತ್‌ಗಳಲ್ಲಿನ ಟ್ರಾನ್ಸ್‌ಫಾರ್ಮರ್​ಗಳು ಪಾದಚಾರಿಗಳ ಓಡಾಟಕ್ಕೆ ಅಡ್ಡಿಯಾಗಿದೆಯೆ? ಇಲ್ಲವೇ ಎಂದು ಪರಿಶೀಲಿಸಲಿದೆ. ಈಗಾಗಲೇ ಈ ಸಮಿತಿ ಒಂದು ಸಭೆ ನಡೆಸಿದೆ. 2ನೇ ಸಭೆ ಜೂನ್ 24ಕ್ಕೆ ನಿಗದಿಯಾಗಿದೆ ಎಂದು ಹೇಳಿದರು. 

ಈ ಹಿಂದೆ, ಅಂದರೆ ಮಾರ್ಚ್ ತಿಂಗಳಲ್ಲಿ ಟ್ರಾನ್ಸ್​ಫಾರ್ಮರ್​ಗಳಿಗೆ ಸಂಬಂಧಿಸಿದ ಮತ್ತೊಂದು ಪ್ರಕರಣದ ವಿಚಾರಣೆ ನಡೆಸಿದ್ದ ಹೈಕೋರ್ಟ್​, ಟ್ರಾನ್ಸ್​ಫಾರ್ಮರ್​ ಅಳವಡಿಸುವ ಮೊದಲು ನೆಲ ಅಗೆಯಲು ಸಂಬಂಧಿಸಿದ ಸಕ್ಷಮ ಪ್ರಾಧಿಕಾರದಿಂದ ಲೈಸೆನ್ಸ್ ಪಡೆದುಕೊಳ್ಳಬೇಕು ಎಂದು ಹೇಳಿತ್ತು. ಎಲೆಕ್ಟ್ರಿಸಿಟ್ ಆ್ಯಕ್ಟ್​ (2003) ಅನ್ವಯ ಬೆಸ್ಕಾಂ ಇಂಥ ಅನುಮತಿ ತೆಗೆದುಕೊಳ್ಳಬೇಕು ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿತ್ತು.

ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ಮತ್ತು ನ್ಯಾಯಮೂರ್ತಿ ವಿಶ್ವನಾಥ ಶೆಟ್ಟಿ ಅವರಿದ್ದ ವಿಭಾಗೀಯ ಪೀಠವು ಪ್ರತಿ ಬಾರಿ ನೆಲ ಅಗೆಯುವ ಮೊದಲು ಸಂಬಂಧಿಸಿದ ಪ್ರಾಧಿಕಾರದಿಂದ ಅನುಮತಿ ಪಡೆಯಲೇಬೇಕು ಎಂದು ಹೇಳಿತ್ತು. ನಿವೃತ್ತ ವಿಂಗ್ ಕಮಾಂಡರ್ ಜಿ.ಬಿ.ಅತ್ರಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಿಚಾರಣೆಗೆ ಕೈಗೆತ್ತಿಕೊಂಡಿದೆ. ರಸ್ತೆಗಳಲ್ಲಿ ಹೇಗಂದರೆ ಹಾಗೆ ವಿದ್ಯುತ್ ತಂತಿಗಳು ನೇತಾಡುತ್ತಿದ್ದು, ಜನರ ಜೀವಕ್ಕೆ ಅಪಾಯ ತಂದೊಡ್ಡಿದೆ ಎಂದು ಅತ್ರಿ ದೂರಿದ್ದರು.

ಇದನ್ನು ನಿರಾಕರಿಸಿದ್ದ ಬೆಸ್ಕಾಂ, ಟ್ರಾನ್ಸ್​ಫಾರ್ಮರ್ ಅಳವಡಿಕೆ ವೇಳೆ ಎಲ್ಲ ನಿಯಮಗಳನ್ನೂ ಪಾಲಿಸಲಾಗುತ್ತಿದೆ. ಎಲೆಕ್ಟ್ರಿಕಲ್ ಇನ್​ಸ್ಪೆಕ್ಟರ್​ಗಳೂ ಆಗಾಗ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ, ಸುರಕ್ಷೆಯನ್ನು ಖಾತ್ರಿಪಡಿಸುತ್ತಿದ್ದಾರೆ ಎಂದು ಹೇಳಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT